AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎರಡನೇ ಅಲೆ ಆರ್ಭಟಕ್ಕೆ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಬಂದ್: ಭಾರತೀಯ ಪುರಾತತ್ವ ಇಲಾಖೆ ಆದೇಶ

ಕೊರೊನಾ ಎರಡನೇ ಅಲೆ ತೀವ್ರತೆಯಿಂದಾಗಿ ಐತಿಹಾಸಿಕ ಸ್ಮಾರಕಗಳನ್ನು ಬಂದ್ ಮಾಡಲಾಗಿದ್ದು, ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಐತಿಹಾಸಿಕ ಪ್ರವಾಸಿ ತಾಣವಾದ ಗೋಲಗುಮ್ಮಟ, ಇಬ್ರಾಹಿಂ ರೋಜಾ, ಬಾರಾಕಮಾನ್, ಬೇಸಿಗೆ ಅರಮನೆ ಸೇರಿದಂತೆ ಇತರೆ ಸ್ಮಾರಕಗಳಿಗೆ ಪ್ರವೇಶವನ್ನು ತಡೆಹಿಡಿಯಲಾಗಿದೆ.

ಕೊರೊನಾ ಎರಡನೇ ಅಲೆ ಆರ್ಭಟಕ್ಕೆ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಬಂದ್: ಭಾರತೀಯ ಪುರಾತತ್ವ ಇಲಾಖೆ ಆದೇಶ
ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಬಂದ್
sandhya thejappa
| Edited By: |

Updated on: Apr 16, 2021 | 11:04 AM

Share

ವಿಜಯಪುರ: ಕೊವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಎರಡನೇ ಅಲೆ ಆರ್ಭಟದ ಹೆಚ್ಚಳ ಭೀತಿ ಕೂಡಾ ರಾಜ್ಯದ ಜನರಿಗೆ ಕಾಡುತ್ತಿದೆ. ಈ ನಿಟ್ಟಿನಲ್ಲಿ ಭಾರತೀಯ ಪುರಾತತ್ವ ಇಲಾಖೆ ವ್ಯಾಪ್ತಿಯಲ್ಲಿರುವ ಐತಿಹಾಸಿಕ ಸ್ಮಾರಕ ಪ್ರವೇಶವನ್ನು ಬಂದ್ ಮಾಡಲಾಗಿದೆ. ಈ ಕುರಿತಂತೆ ಭಾರತೀಯ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ. ಇನ್ನೂ ವಿವಿಧ ಜಿಲ್ಲೆಗಳ ಐತಿಹಾಸಿಕ ಸ್ಮಾರಕಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. 

ವಿಜಯಪುರ ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಬಂದ್ ಮಾಡಲಾಗಿದ್ದು, ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಐತಿಹಾಸಿಕ ಪ್ರವಾಸಿ ತಾಣವಾದ ಗೋಲಗುಮ್ಮಟ, ಇಬ್ರಾಹಿಂ ರೋಜಾ, ಬಾರಾಕಮಾನ್, ಬೇಸಿಗೆ ಅರಮನೆ ಸೇರಿದಂತೆ ಇತರೆ ಸ್ಮಾರಕಗಳಿಗೆ ಪ್ರವೇಶವನ್ನು ತಡೆಹಿಡಿಯಲಾಗಿದೆ. ಮುಂಬರುವ ಮೇ 15ರ ವರೆಗೂ ಪ್ರವೇಶ ನಿಷೇಧಕ್ಕೆ ಆದೇಶ ಹೊರಡಿಸಿದ್ದು, ವಾಯು ವಿಹಾರಕ್ಕೆಂದು ಗೋಲಗುಮ್ಮಟ ಆವರಣಕ್ಕೆ ಪ್ರವೇಶಿಸುವುದನ್ನೂ ನಿಷೇಧಿಸಲಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ಭಾರತೀಯ ಪುರಾತತ್ವ ಇಲಾಖೆ ಈ ಕ್ರಮ ಕೈಗೊಂಡಿದೆ.

ಹಾಸನದ ವಿಶ್ವವಿಖ್ಯಾತ ಬೇಲೂರು ಚನ್ನಕೇಶವ ದೇವಾಲಯದ ಬಾಗಿಲು ಬಂದ್ ಕೊರೊನಾ ಹಾವಳಿ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವುದರಿಂದ ಇಂದಿನಿಂದ ಐತಿಹಾಸಿಕ ವಿಶ್ವವಿಖ್ಯಾತ ಬೇಲೂರು ಚನ್ನಕೇಶವ ದೇವಾಲಯಕ್ಕೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಕೇಂದ್ರ ಪುರಾತತ್ವ ಇಲಾಖೆ ಆದೇಶದಂತೆ ಮೇ 15ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ. ಕಳೆದ ವರ್ಷ ಕೂಡ ಲಾಕ್​ಡೌನ್ ಕಾರಣದಿಂದ ದೇಗುಲವನ್ನು ಬಂದ್ ಮಾಡಲಾಗಿತ್ತು.

ಬೆಳಗ್ಗೆ ಮತ್ತು ಸಂಜೆ ಪ್ರತಿನಿತ್ಯ ಪೂಜೆ ನಡೆಸಲು ಅರ್ಚಕರಿಗೆ ಮಾತ್ರ ದೇವಸ್ಥಾನದ ಒಳಗೆ ಪ್ರವೇಶ ನೀಡಲಾಗುತ್ತಿದೆ. ಕೇಂದ್ರದ ಆದೇಶದಿಂದ ಇದೇ ತಿಂಗಳು 23 ಮತ್ತು 24ರಂದು ನಡೆಯಲಿರುವ ಬ್ರಹ್ಮರಥೋತ್ಸವ ಆಚರಣೆಯ ಮೇಲೂ ಪರಿಣಾಮವಾಗುವ ಸಾಧ್ಯತೆ ಇದೆ.

ನಿನ್ನೆಯಿಂದ ವಾರ್ಷಿಕ ಉತ್ಸವದ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿತ್ತು. ಇದೀಗ ದಿಢೀರ್ ದೇವಾಲಯ ಬಂದ್ ಆದೇಶದಿಂದ ಭಕ್ತರಿಗೆ ಭಾರೀ ನಿರಾಸೆ ಉಂಟಾಗಿದೆ. ಈಗಾಗಲೇ ದೇವರ ದರ್ಶನಕ್ಕೆ ಬಂದಿದ್ದ ಭಕ್ತಾದಿಗಳು ನಿರಾಸೆಯಿಂದ ಹಿಂತಿರುಗುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿನ ಐತಿಹಾಸಿಕ ಪ್ರವಾಸಿ ತಾಣಗಳಿಗೆ ಬೀಗ ಹುನಗುಂದ ತಾಲ್ಲೂಕಿನ ಐತಿಹಾಸಿಕ ಐಹೊಳೆ, ಬಾದಾಮಿ ಹಾಗೂ ಪಟ್ಟದಕಲ್ಲು, ಮಹಾಕೂಟ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಪ್ರವಾಸಿಗಳಿಲ್ಲದೇ ಪ್ರವಾಸಿತಾಣಗಳೆಲ್ಲ ಖಾಲಿ ಖಾಲಿ ಅನಿಸುತ್ತಿದೆ.

ಇದನ್ನೂ ಓದಿ: ಕೊರೊನಾ ಎರಡನೇ ಅಲೆಯನ್ನು ನಿರ್ಲಕ್ಷ್ಯ ಮಾಡಬೇಡಿ..; ಜೂನ್​ ಮೊದಲ ವಾರದ ಹೊತ್ತಿಗೆ ಮತ್ತಷ್ಟು ಭೀಕರತೆ ಸೃಷ್ಟಿಸಲಿದೆ ಸೋಂಕು !

ಕೊರೊನಾ ಸೋಂಕಿತರ ಪತ್ತೆಗೆ ಮೊಬೈಲ್ ಟೆಸ್ಟಿಂಗ್ ವ್ಯಾನ್​ಗಳ ಮೊರೆ ಹೋದ ಕಲಬುರಗಿ ಜಿಲ್ಲಾಡಳಿತ

(No entry for Historical Monuments for corona 2nd wave spread in karnataka)

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ