AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಮಿ ಕ್ಯಾಂಟೀನ್​ಗಳಿಗೆ ಅಬಕಾರಿ ಸುಂಕ ವಿಧಿಸಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಆರ್ಮಿ ಕ್ಯಾಂಟೀನ್​ಗಳಿಗೆ ಯಾವುದೇ ಕಾರಣಕ್ಕೂ ಅಬಕಾರಿ ಸುಂಕ ವಿಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆ ಕುರಿತ ವರದಿಗಳ ಬಗ್ಗೆ ‘ಜೈ ಹಿಂದ್’ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ ಅವರು, ಮಿಲಿಟರಿ ಕ್ಯಾಂಟೀನ್​​ಗಳಿಗೆ ಕರ್ನಾಟಕ ಸರ್ಕಾರ ಎಕ್ಸೈಸ್ ಡ್ಯುಟಿ ವಿಧಿಸಲ್ಲ ಎಂದು ಸ್ಪಷ್ಟಪಡಿಸಿದರು. ಇದಕ್ಕೆ ಮಾಜಿ ಸೈನಿಕರ ಕಡೆಯಿಂದ ಮೆಚ್ಚುಗೆ ವ್ಯಕ್ತವಾಯಿತು.

ಆರ್ಮಿ ಕ್ಯಾಂಟೀನ್​ಗಳಿಗೆ ಅಬಕಾರಿ ಸುಂಕ ವಿಧಿಸಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ರಣದೀಪ್ ಸುರ್ಜೇವಾಲ, ಡಿಕೆ ಶಿವಕುಮಾರ್, ಕೆಸಿ ವೇಣುಗೋಪಾಲ್ ಹಾಗೂ ಸಿದ್ದರಾಮಯ್ಯ
ಗಣಪತಿ ಶರ್ಮಾ
|

Updated on:May 28, 2025 | 2:08 PM

Share

ಬೆಂಗಳೂರು, ಮೇ 28: ಆರ್ಮಿ ಕ್ಯಾಂಟೀನ್​​ಗಳಿಗೆ ಪೂರೈಕೆ ಮಾಡುವ ಮದ್ಯದ ಅಬಕಾರಿ ತೆರಿಗೆ ಹೆಚ್ಚಳಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರ (Congress Govt) ಮುಂದಾಗಿದೆ ಎಂಬ ಮಾಧ್ಯಮ ವರದಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಲ್ಲಗಳೆದಿದ್ದಾರೆ. ಆಪರೇಷನ್ ಸಿಂಧೂರ್ ಯಶಸ್ಸಿನ ಸಂಭ್ರಮ ಆಚರಣೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ‘ಜೈ ಹಿಂದ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಮಿ ಕ್ಯಾಂಟೀನ್ ವಸ್ತುಗಳಿಗೆ ಅಬಕಾರಿ ಸುಂಕ ವಿಧಿಸುವುದಿಲ್ಲ ಎಂದು ಹೇಳಿದ್ದಾರೆ. ಮಿಲಿಟರಿ ಕ್ಯಾಂಟೀನ್​​ಗಳಿಗೆ ಕರ್ನಾಟಕ ಸರ್ಕಾರ ಎಕ್ಸೈಸ್ ಡ್ಯುಟಿ ವಿಧಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಹಾಗೆ, ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಮುಖ್ಯಮಂತ್ರಿಗಳು ಈ ವಿಚಾರವನ್ನು ಘೋಷಣೆ ಮಾಡುತ್ತಿದ್ದಂತೆಯೇ ಸಭೆಯಲ್ಲಿ ನೆರದಿದ್ದವರು ಚಪ್ಪಾಳೆ ಮೂಲಕ ಸ್ವಾಗತಿಸಿದರು.

ಇದನ್ನೂ ಓದಿ
Image
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋವಿಡ್ ಆರ್​ಟಿಪಿಸಿಆರ್ ಲ್ಯಾಬ್ ಪುನರಾರಂಭ
Image
ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಜೂನ್ 2ರವರೆಗೆ ಮಳೆಯ ಅಬ್ಬರ
Image
ಬೆಳಗಾವಿ: ಹಳ್ಳದಲ್ಲಿ ಎತ್ತಿನ ಗಾಡಿ ಮಗುಚಿ ಬಿದ್ದು ಇಬ್ಬರು ಮಕ್ಕಳು ಸಾವು
Image
ಭಾರಿ ಮಳೆಯಿಂದ ಕರ್ನಾಟಕದ ಈ ಎರಡು ಕಡೆ ಅರಣ್ಯ ಸಫಾರಿ ರದ್ದು

ನಿವೃತ್ತ ಸೇನಾ ಸಿಬ್ಬಂದಿಯ ಕಲ್ಯಾಣಕ್ಕಾಗಿ ಎಕ್ಸ್ ಸರ್ವಿಸ್ ಮೆನ್ ವೆಲ್ಫೇರ್ ಕಾರ್ಪೊರೇಷನ್ ಸ್ಥಾಪಿಸಬೇಕೆಂಬ ಮನವಿ ಇದೆ. ಅದನ್ನು ಸ್ಥಾಪಿಸುವ ಸಂಬಂಧ ಕಾರ್ಯಪ್ರವೃತ್ತರಾಗಲಿದ್ದೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ನೀವೆಲ್ಲ ದೇಶದ ಜತೆಗಿದ್ದೀರಿ. ನಾವು ನಿಮ್ಮ ಜತೆಗಿದ್ದೇವೆ ಎಂದು ಮಾಜಿ ಸೈನಿಕರನ್ನು ಉದ್ದೇಶಿಸಿ ಸಿದ್ದರಾಮಯ್ಯ ಹೇಳಿದರು.

‘ಜೈ ಹಿಂದ್’ ಕಾರ್ಯಕ್ರಮದ ವಿಡಿಯೋ

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಸಿ ವೇಣುಗೋಪಾಲ್ ಅವರು ಆರ್ಮಿ ಜಾಕೆಟ್ ಧರಿಸಿದರು.

ಇದನ್ನೂ ಓದಿ: ಯೋಧರು ಖರೀದಿಸುವ ಮದ್ಯದ ತೆರಿಗೆ ಹೆಚ್ಚಿಸಲು ಮುಂದಾದ ಕಾಂಗ್ರೆಸ್ ಸರ್ಕಾರ

ಆರ್ಮಿ ಕ್ಯಾಂಟೀನ್​​ನಲ್ಲಿ ಮಾರಾಟ ಮಾಡುವ ಮದ್ಯದ ಮೇಲಿನ ತೆರಿಗೆಯನ್ನೂ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ಕೆಲವು ದಿನಗಳ ಹಿಂದೆ ತಿಳಿಸಿದ್ದವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಮೂರು ಬಾರಿ ಮದ್ಯದ ದರ ಏರಿಕೆ ಮಾಡಲಾಗಿದೆ. ಅದರ ಬೆನ್ನಲ್ಲೇ ಆರ್ಮಿ ಕ್ಯಾಂಟೀನ್​ಗೂ ಅಬಕಾರಿ ಸುಂಕ ವಿಧಿಸುವ ಸುಳಿವಿನ ಬಗ್ಗೆ ವಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Wed, 28 May 25

Follow Us
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ