AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಯಾವುದೇ ರೀತಿ ರಸಗೊಬ್ಬರ ಕೊರತೆ ಇಲ್ಲ: ಕೃಷಿ ಇಲಾಖೆ ಮಾಧ್ಯಮ ಪ್ರಕಟಣೆ

6,05,760 ಮೆಟ್ರಿಕ್ ಟನ್ ರಸಗೊಬ್ಬರ (ಡಿಎಪಿ 33,570 ಮೆಟ್ರಿಕ್ ಟನ್, ಎಂಒಪಿ 28,420 ಮೆಟ್ರಿಕ್ ಟನ್, ಕಾಂಪ್ಲೆಕ್ಸ್ 3,16,140 ಮೆಟ್ರಿಕ್ ಟನ್ ಹಾಗೂ ಯೂರಿಯಾ 2,27,630 ಮೆಟ್ರಿಕ್ ಟನ್) ದಾಸ್ತಾನು ಇದೆ. ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದು ಹೇಳಲಾಗಿದೆ.

ಕರ್ನಾಟಕದಲ್ಲಿ ಯಾವುದೇ ರೀತಿ ರಸಗೊಬ್ಬರ ಕೊರತೆ ಇಲ್ಲ: ಕೃಷಿ ಇಲಾಖೆ ಮಾಧ್ಯಮ ಪ್ರಕಟಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 26, 2021 | 6:41 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಯಾವುದೇ ರೀತಿ ರಸಗೊಬ್ಬರ ಕೊರತೆ ಇಲ್ಲ. ಸೆಪ್ಟೆಂಬರ್​​ವರೆಗೆ 7,08,850 ಮೆಟ್ರಿಕ್ ಟನ್ ದಾಸ್ತಾನಿದೆ. ದಾಸ್ತಾನಿರುವ ಗೊಬ್ಬರ ಹಿಂಗಾರಿಗೂ ಬಳಸಿಕೊಳ್ಳಬಹುದು ಎಂದು ಕೃಷಿ ಇಲಾಖೆಯಿಂದ ಇಂದು (ಅಕ್ಟೋಬರ್ 26) ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ರಾಜ್ಯದಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ಅಕ್ಟೋಬರ್ 2021 ರಿಂದ ಮಾರ್ಚ್ 2022 ರವರೆಗೆ ಡಿಎಪಿ, ಎಂಒಪಿ, ಕಾಂಪ್ಲೆಕ್ಸ್, ಯೂರಿಯಾ ಗೊಬ್ಬರಗಳಿಗೆ 16 ಲಕ್ಷದ 94 ಸಾವಿರ ಮೆಟ್ರಿಕ್ ಟನ್ ಬೇಡಿಕೆಯಿದೆ. ಅಕ್ಟೋಬರ್ 2021 ರ ಅಂತ್ಯದವರೆಗೆ 2,80,456 ಮೆಟ್ರಿಕ್ ಟನ್ ವಿವಿಧ ಗ್ರೇಡ್ ಗಳ ರಸಗೊಬ್ಬರಗಳಿಗೆ ಬೇಡಿಕೆಯಿದೆ. ಆರಂಭಿಕ ಶುಲ್ಕ ಸೆಪ್ಟೆಂಬರ್ 2021 ರ ಅಂತ್ಯದವರೆಗೆ 7,0 8850 ಮೆಟ್ರಿಕ್ ಟನ್ ಒಳಗೊಂಡಂತೆ ಅಕ್ಟೋಬರ್ 2,30,000 ಮೆಟ್ರಿಕ್ ಟನ್ ವಿವಿಧ ಗ್ರೇಡ್ ಗಳ ರಸಗೊಬ್ಬರ ಸರಬರಾಜಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಒಟ್ಟು ರಾಜ್ಯದಲ್ಲಿ ಅಕ್ಟೋಬರ್ ಗೆ 9,39,000 ಮೆಟ್ರಿಕ್ ಟನ್ ಲಭ್ಯವಿರುತ್ತದೆ. 26-10-2021ರವರೆಗೆ 3,33,000 ಮೆಟ್ರಿಕ್ ಮಾರಾಟವಾಗಿದೆ. ಉಳಿದ 6,05,760 ಮೆಟ್ರಿಕ್ ಟನ್ ರಸಗೊಬ್ಬರ (ಡಿಎಪಿ 33,570 ಮೆಟ್ರಿಕ್ ಟನ್, ಎಂಒಪಿ 28,420 ಮೆಟ್ರಿಕ್ ಟನ್, ಕಾಂಪ್ಲೆಕ್ಸ್ 3,16,140 ಮೆಟ್ರಿಕ್ ಟನ್ ಹಾಗೂ ಯೂರಿಯಾ 2,27,630 ಮೆಟ್ರಿಕ್ ಟನ್) ದಾಸ್ತಾನು ಇದೆ. ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದು ಹೇಳಲಾಗಿದೆ.

ಮುಂಗಾರು ಹಂಗಾಮಿನಲ್ಲಿ 26,47,000 ಮೆಟ್ರಿಕ್ ಟನ್ ವಿವಿಧ ಗ್ರೇಡ್ ನ ರಸಗೊಬ್ಬರಕ್ಕೆ ಬೇಡಿಕೆಯಿರುವುದನ್ನು ಯಾವುದೇ ಕೊರತೆಯಿಲ್ಲದೇ ಪೂರೈಸಲಾಗಿದೆ. ಆರಂಭಿಕ ಶುಲ್ಕ (11,54,320 ಮೆ.ಟ) ಹಾಗೂ 24 ಲಕ್ಷ ಮೆಟ್ರಿಕ್ ಟನ್ ಸರಬರಾಜು ಒಳಗೊಂಡಂತೆ ಒಟ್ಟು 35,63,000 ಮೆ.ಟನ್ ವಿವಿಧ ರಸಗೊಬ್ಬರ ಮುಂಗಾರಿನಲ್ಲಿ ಪೂರೈಸಲಾಗಿದೆ. ಮುಂಗಾರಿನಲ್ಲಿ 28,54,000 ಮೆಟ್ರಿಕ್ ಟನ್ ವಿವಿಧ ಗ್ರೇಡ್ ನ ರಸಗೊಬ್ಬರ ಮಾರಾಟವಾಗಿದೆ. ಪೂರೈಕೆಯ ಬಳಿಕವೂ ಸೆಪ್ಟೆಂಬರ್ 2021 ಅಂತ್ಯಕ್ಕೆ ಸೆಪ್ಟೆಂಬರ್ 2021 ರ ಅಂತ್ಯದವರೆಗೆ 7,0 8850 ಮೆಟ್ರಿಕ್ ಟನ್ ದಾಸ್ತಾನು ಇರುತ್ತದೆ. ಈ ದಾಸ್ತಾನನ್ನು ಹಿಂಗಾರಿಗೂ ಬಳಕೆ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಏಳು ವರ್ಷದಲ್ಲಿ ಎಲ್ಲಿಯೂ ಗೊಬ್ಬರ ಕೊರತೆಯಾಗಿಲ್ಲ; ಕೊರತೆ ಇದ್ದ ಕಡೆ ಗೊಬ್ಬರ ಪೂರೈಸುತ್ತೇವೆ: ಭಗವಂತ

ಇದನ್ನೂ ಓದಿ: ಅಗತ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ; ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಅನ್ನದಾತರು

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?