Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿಗೆ ಟಾಂಗ್: ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ- ಕಡ್ಡಿಮುರಿದಂಗೆ ಹೇಳಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

No ghar wapsi for congress mlas: ಅವರನ್ನು (17 ಶಾಸಕರನ್ನು) ಪಕ್ಷಕ್ಕೆ ಸೇರಿಸಿಕೊಳ್ಳೋದಿಲ್ಲ ಅಂತಾ ಸದನದಲ್ಲೂ ಹೇಳಿದ್ದೇನೆ. ಬಿಜೆಪಿಗೆ ಹೋದವರನ್ನ ಮತ್ತೆ ಸೇರಿಸಿಕೊಳ್ಳಲ್ಲ ಅನ್ನೋ ಹೇಳಿಕೆಗೆ ಈಗಲೂ ಬದ್ಧ ಎಂದು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಡಿಕೆಶಿಗೆ ಟಾಂಗ್: ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ- ಕಡ್ಡಿಮುರಿದಂಗೆ ಹೇಳಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್
Follow us
ಸಾಧು ಶ್ರೀನಾಥ್​
|

Updated on:Jul 06, 2021 | 12:33 PM

ಬೆಂಗಳೂರು: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿದ್ದಂತೆ ಪ್ರಮುಖ ಪ್ರತಿಪಕ್ಷವಾದ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿಯೂ ಭಿನ್ನಮತ ಮುಂದುವರಿದಿದೆ. ಒಂದಷ್ಟು ದಿನ ‘ಮುಂದಿನ ಮುಖ್ಯಮಂತ್ರಿ’ ವಿಚಾರವಾಗಿ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಚರ್ಚೆಗಳು ನಡೆದವು. ಅದಾದ ಬಳಿಕ ಈಗ ಘರ್ ವಾಪಸಿ ಬಗ್ಗೆ ಚರ್ಚೆ ಬಿಸಿಯೇರಿದೆ. ಮುಖ್ಯವಾಗಿ ರಾಜ್ಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಿನ್ನ ನಿಲುವುಗಳನ್ನು ತಳೆದಿದ್ದಾರೆ.

ಪಕ್ಷ ಬಿಟ್ಟು ಹೋದವರ ಘರ್ ವಾಪಸಾತಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ. ಪಕ್ಷ ಬಿಟ್ಟು ಹೋದ ಶಾಸಕರನ್ನ ವಾಪಸ್ ಸೇರಿಸಿಕೊಳ್ಳೋ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಕಡ್ಡಿಮುರಿದಂಗೆ ಹೇಳಿದ್ದಾರೆ.

ಅವರನ್ನು (17 ಶಾಸಕರನ್ನು) ಪಕ್ಷಕ್ಕೆ ಸೇರಿಸಿಕೊಳ್ಳೋದಿಲ್ಲ ಅಂತಾ ಸದನದಲ್ಲೂ ಹೇಳಿದ್ದೇನೆ. ಬಿಜೆಪಿಗೆ ಹೋದವರನ್ನ ಮತ್ತೆ ಸೇರಿಸಿಕೊಳ್ಳಲ್ಲ ಅನ್ನೋ ಹೇಳಿಕೆಗೆ ಈಗಲೂ ಬದ್ಧ ಎಂದು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಟಿವಿ9 ಸಂದರ್ಶನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏನು ಹೇಳಿದ್ದರು?: ಇಷ್ಟಕ್ಕೂ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸೇರಿದ್ದ ಶಾಸಕರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದೇನೆಂದ್ರೆ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರ ಬೀಳಿಸಿ, ಬಿಜೆಪಿ ಸೇರಿದ್ದವರನ್ನು ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳುತ್ತೇವೆ ಅಂದಿದ್ದರು.

ಆಪರೇಷನ್ ಕಮಲದಲ್ಲಿ ಪಕ್ಷ ತೊರದವರಿಗೆ ಅವಕಾಶ ಇದೆ. ಬಾಂಬೆ ಫ್ರೆಂಡ್ಸ್‌ ಮತ್ತೆ ಕಾಂಗ್ರೆಸ್ ಸೇರಲು ಅವಕಾಶ ಇದೆ. ಕಾಂಗ್ರೆಸ್‌ಗೆ ಮತ್ತೆ ಸೇರಲು ಅರ್ಜಿ ಹಾಕಿದರೆ ಪರಿಶೀಲಿಸುತ್ತೇವೆ ಎಂದು ಟಿವಿ9 ಸಂದರ್ಶನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದರು.

ರಾಜಕೀಯದಲ್ಲಿ ಒಂದೇ ನಿಲುವು ತಾಳಲು ಸಾಧ್ಯವೇ ಇಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಬದಲಿಸಬೇಕಾಗುತ್ತದೆ. ಅರ್ಜಿ ಹಾಕಿದ್ದಲ್ಲಿ ವಾಪಸ್ ಕರೆಸಿಕೊಳ್ಳುವ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಪಕ್ಷ ತ್ಯಜಿಸಿ BJP ಸರ್ಕಾರದಲ್ಲಿ ಮಂತ್ರಿಯಾದವರಿಗೆ ಡಿ.ಕೆ.ಶಿವಕುಮಾರ್ ಸಂದೇಶ ರವಾನಿಸಿದ್ದರು.

(No ghar wapsi for 17 congress mlas who deserted party to join bjp clarifies clp leader siddaramaiah)

Published On - 12:08 pm, Tue, 6 July 21

ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ