AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿಗೆ ಟಾಂಗ್: ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ- ಕಡ್ಡಿಮುರಿದಂಗೆ ಹೇಳಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

No ghar wapsi for congress mlas: ಅವರನ್ನು (17 ಶಾಸಕರನ್ನು) ಪಕ್ಷಕ್ಕೆ ಸೇರಿಸಿಕೊಳ್ಳೋದಿಲ್ಲ ಅಂತಾ ಸದನದಲ್ಲೂ ಹೇಳಿದ್ದೇನೆ. ಬಿಜೆಪಿಗೆ ಹೋದವರನ್ನ ಮತ್ತೆ ಸೇರಿಸಿಕೊಳ್ಳಲ್ಲ ಅನ್ನೋ ಹೇಳಿಕೆಗೆ ಈಗಲೂ ಬದ್ಧ ಎಂದು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಡಿಕೆಶಿಗೆ ಟಾಂಗ್: ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ- ಕಡ್ಡಿಮುರಿದಂಗೆ ಹೇಳಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 06, 2021 | 12:33 PM

Share

ಬೆಂಗಳೂರು: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿದ್ದಂತೆ ಪ್ರಮುಖ ಪ್ರತಿಪಕ್ಷವಾದ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿಯೂ ಭಿನ್ನಮತ ಮುಂದುವರಿದಿದೆ. ಒಂದಷ್ಟು ದಿನ ‘ಮುಂದಿನ ಮುಖ್ಯಮಂತ್ರಿ’ ವಿಚಾರವಾಗಿ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಚರ್ಚೆಗಳು ನಡೆದವು. ಅದಾದ ಬಳಿಕ ಈಗ ಘರ್ ವಾಪಸಿ ಬಗ್ಗೆ ಚರ್ಚೆ ಬಿಸಿಯೇರಿದೆ. ಮುಖ್ಯವಾಗಿ ರಾಜ್ಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಿನ್ನ ನಿಲುವುಗಳನ್ನು ತಳೆದಿದ್ದಾರೆ.

ಪಕ್ಷ ಬಿಟ್ಟು ಹೋದವರ ಘರ್ ವಾಪಸಾತಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ. ಪಕ್ಷ ಬಿಟ್ಟು ಹೋದ ಶಾಸಕರನ್ನ ವಾಪಸ್ ಸೇರಿಸಿಕೊಳ್ಳೋ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಕಡ್ಡಿಮುರಿದಂಗೆ ಹೇಳಿದ್ದಾರೆ.

ಅವರನ್ನು (17 ಶಾಸಕರನ್ನು) ಪಕ್ಷಕ್ಕೆ ಸೇರಿಸಿಕೊಳ್ಳೋದಿಲ್ಲ ಅಂತಾ ಸದನದಲ್ಲೂ ಹೇಳಿದ್ದೇನೆ. ಬಿಜೆಪಿಗೆ ಹೋದವರನ್ನ ಮತ್ತೆ ಸೇರಿಸಿಕೊಳ್ಳಲ್ಲ ಅನ್ನೋ ಹೇಳಿಕೆಗೆ ಈಗಲೂ ಬದ್ಧ ಎಂದು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಟಿವಿ9 ಸಂದರ್ಶನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏನು ಹೇಳಿದ್ದರು?: ಇಷ್ಟಕ್ಕೂ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸೇರಿದ್ದ ಶಾಸಕರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದೇನೆಂದ್ರೆ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರ ಬೀಳಿಸಿ, ಬಿಜೆಪಿ ಸೇರಿದ್ದವರನ್ನು ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳುತ್ತೇವೆ ಅಂದಿದ್ದರು.

ಆಪರೇಷನ್ ಕಮಲದಲ್ಲಿ ಪಕ್ಷ ತೊರದವರಿಗೆ ಅವಕಾಶ ಇದೆ. ಬಾಂಬೆ ಫ್ರೆಂಡ್ಸ್‌ ಮತ್ತೆ ಕಾಂಗ್ರೆಸ್ ಸೇರಲು ಅವಕಾಶ ಇದೆ. ಕಾಂಗ್ರೆಸ್‌ಗೆ ಮತ್ತೆ ಸೇರಲು ಅರ್ಜಿ ಹಾಕಿದರೆ ಪರಿಶೀಲಿಸುತ್ತೇವೆ ಎಂದು ಟಿವಿ9 ಸಂದರ್ಶನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದರು.

ರಾಜಕೀಯದಲ್ಲಿ ಒಂದೇ ನಿಲುವು ತಾಳಲು ಸಾಧ್ಯವೇ ಇಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಬದಲಿಸಬೇಕಾಗುತ್ತದೆ. ಅರ್ಜಿ ಹಾಕಿದ್ದಲ್ಲಿ ವಾಪಸ್ ಕರೆಸಿಕೊಳ್ಳುವ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಪಕ್ಷ ತ್ಯಜಿಸಿ BJP ಸರ್ಕಾರದಲ್ಲಿ ಮಂತ್ರಿಯಾದವರಿಗೆ ಡಿ.ಕೆ.ಶಿವಕುಮಾರ್ ಸಂದೇಶ ರವಾನಿಸಿದ್ದರು.

(No ghar wapsi for 17 congress mlas who deserted party to join bjp clarifies clp leader siddaramaiah)

Published On - 12:08 pm, Tue, 6 July 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​