AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cashback And Gift Vouchers: ಕ್ಯಾಶ್​ಬ್ಯಾಕ್ ಹಾಗೂ ಗಿಫ್ಟ್​ ವೋಚರ್​ಗಳು ಜಿಎಸ್​ಟಿ ವ್ಯಾಪ್ತಿಗೆ ಬರುವುದಿಲ್ಲ: ಕರ್ನಾಟಕ ಹೈಕೋರ್ಟ್​

ಕ್ಯಾಶ್​ಬ್ಯಾಕ್(Cash Back) ​ ಹಾಗೂ ಗಿಫ್ಟ್​ ವೋಚರ್​ಗಳು ಸರಕು ಮತ್ತು ಸೇವೆಗಳಡಿಯಲ್ಲಿ ಬರುವುದಿಲ್ಲ ಹೀಗಾಗಿ ಇವುಗಳು ಜಿಎಸ್​ಟಿ (GST)ವ್ಯಾಪ್ತಿಗೆ ಸೇರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಹೇಳಿದೆ

Cashback And Gift Vouchers: ಕ್ಯಾಶ್​ಬ್ಯಾಕ್ ಹಾಗೂ ಗಿಫ್ಟ್​ ವೋಚರ್​ಗಳು ಜಿಎಸ್​ಟಿ ವ್ಯಾಪ್ತಿಗೆ ಬರುವುದಿಲ್ಲ: ಕರ್ನಾಟಕ ಹೈಕೋರ್ಟ್​
ಕರ್ನಾಟಕ ಹೈಕೋರ್ಟ್​
ನಯನಾ ರಾಜೀವ್
|

Updated on: Feb 16, 2023 | 10:05 AM

Share

ಕ್ಯಾಶ್​ಬ್ಯಾಕ್(Cash Back) ​ ಹಾಗೂ ಗಿಫ್ಟ್​ ವೋಚರ್​ಗಳು ಸರಕು ಮತ್ತು ಸೇವೆಗಳಡಿಯಲ್ಲಿ ಬರುವುದಿಲ್ಲ ಹೀಗಾಗಿ ಇವುಗಳು ಜಿಎಸ್​ಟಿ (GST)ವ್ಯಾಪ್ತಿಗೆ ಸೇರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಹೇಳಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಮತ್ತು ಶಿವಶಂಕರೇಗೌಡ ಅವರ ಪೀಠವು ಜನವರಿ 16 ರಂದು ಈ ತೀರ್ಪು ನೀಡಿತು. ಗ್ರಾಹಕರು ತಮ್ಮ ಉದ್ಯೋಗಿಗಳಿಗೆ ಅಥವಾ ಗ್ರಾಹಕರಿಗೆ  ಗಿಫ್ಟ್​ ವೋಚರ್​ಅಥವಾ ಕ್ಯಾಶ್​ಬ್ಯಾಕ್​ ಅನ್ನು ಪ್ರೋತ್ಸಾಹಕವಾಗಿ ನೀಡುತ್ತಾರೆ ಹಾಗಾಗಿ ಅದನ್ನು ಜಿಎಸ್​ಟಿ ವ್ಯಾಪ್ತಿಗೆ ತರಬಾರದು ಎಂದು ಅಭಿಪ್ರಾಯಪಟ್ಟಿದೆ.

ಅರ್ಜಿದಾರರು, ಮೌಲ್ಯಮಾಪಕರು, M/s ಪ್ರೀಮಿಯರ್ ಸೇಲ್ಸ್ ಪ್ರಮೋಷನ್ ಪ್ರೈವೇಟ್ ಲಿಮಿಟೆಡ್, ಗಿಫ್ಟ್ ವೋಚರ್‌ಗಳು, ಕ್ಯಾಶ್ ಬ್ಯಾಕ್ ವೋಚರ್‌ಗಳು ಮತ್ತು ಇ-ವೋಚರ್‌ಗಳನ್ನು ಒಳಗೊಂಡಂತೆ ಪ್ರಿ-ಪೇಯ್ಡ್​ ಪೇಮೆಂಟ್ ಇನ್​ಸ್ಟ್ರುಮೆಂಟ್​ಗಳನ್ನು ವಿತರಕರುಗಳಿಂದ ಪಡೆದುಕೊಳ್ಳುತ್ತಾರೆ ಮತ್ತು ಅವುಗಳನ್ನು ಗ್ರಾಹಕರಿಗೆ ಪೂರೈಸುತ್ತಾರೆ.

ಮತ್ತಷ್ಟು ಓದಿ: Paytm Wallet Transit Card: ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್​ ಆ್ಯಕ್ಟಿವೇಟ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಗ್ರಾಹಕರು ತಮ್ಮ ಉದ್ಯೋಗಿಗಳಿಗೆ ಪ್ರೋತ್ಸಾಹದ ರೂಪದಲ್ಲಿ ಅಥವಾ ಪ್ರಚಾರದ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ಈ ಗಿಫ್ಟ್​ ಕೂಪನ್​ಗಳನ್ನು ನೀಡಲಾಗುತ್ತದೆ. ಡೆಬಿಟ್ ಹಾಗೂ ಕ್ರೆಡಿಟ್​ ಕಾರ್ಡ್​ಗಳ ಪ್ರಾಮುಖ್ಯತೆಯನ್ನು ಅಲ್ಲಗಳೆಯುವಂತಿಲ್ಲ, ಕೆಲವೊಂದು ಮಳಿಗೆಗಳಲ್ಲಿ ಇಂತಿಷ್ಟು ಮೌಲ್ಯದ ವಸ್ತುಗಳನ್ನು ಕೊಂಡರೆ ಒಂದಷ್ಟು ಹಣವನ್ನು ಕ್ಯಾಶ್​ಬ್ಯಾಕ್​ ರೂಪದಲ್ಲಿ ನೀಡಲಾಗುತ್ತದೆ. ಕೆಲವೊಂದು ಮಳಿಗೆಗಳಲ್ಲಿ ಕ್ರೆಡಿಟ್ ಕಾರ್ಡ್​ ಬಳಕೆ ಮಾಡಿ ವಸ್ತುಗಳನ್ನು ಕೊಂಡರೆ ಕ್ಯಾಶ್​ಬ್ಯಾಕ್ ಸಿಗುತ್ತದೆ.

ಇನ್ನೂ ಕೆಲವು ಕಡೆ ಇಂತಿಷ್ಟು ದಿನದೊಳಗೆ ಆ ವಸ್ತುಗಳನ್ನು ಖರೀದಿಸಿದರೆ ಇಂತಿಷ್ಟು ಹಣವನ್ನು ಹಿಂದಿರುಗಿಸಲಾಗುವುದು ಎಂದು ಫಲಕ ಅಳವಡಿಸಿರುತ್ತಾರೆ. ಇನ್ನೂ ಕೆಲವು ಕಡೆ ಗಿಫ್ಟ್​ ವೋಚರ್​ಗಳನ್ನು ನೀಡಿ ಯಾವುದೋ ಅವಧಿಯೊಳಗೆ ಖರೀದಿಸಬೇಕು ಎಂದು ಗಡುವು ನೀಡಿರುತ್ತಾರೆ. ಆದರೆ ಇದ್ಯಾವುದೂ ತೆರಿಗೆ ವ್ಯಾಪ್ತಿಗೆ ಒಳಪಡುವುದಿಲ್ಲ ಅದಕ್ಕೆ ವಿನಾಯಿತಿ ನೀಡಲಾಗುವುದು ಎಂದು ಕೋರ್ಟ್​ ಹೇಳಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ