Cashback And Gift Vouchers: ಕ್ಯಾಶ್​ಬ್ಯಾಕ್ ಹಾಗೂ ಗಿಫ್ಟ್​ ವೋಚರ್​ಗಳು ಜಿಎಸ್​ಟಿ ವ್ಯಾಪ್ತಿಗೆ ಬರುವುದಿಲ್ಲ: ಕರ್ನಾಟಕ ಹೈಕೋರ್ಟ್​

ಕ್ಯಾಶ್​ಬ್ಯಾಕ್(Cash Back) ​ ಹಾಗೂ ಗಿಫ್ಟ್​ ವೋಚರ್​ಗಳು ಸರಕು ಮತ್ತು ಸೇವೆಗಳಡಿಯಲ್ಲಿ ಬರುವುದಿಲ್ಲ ಹೀಗಾಗಿ ಇವುಗಳು ಜಿಎಸ್​ಟಿ (GST)ವ್ಯಾಪ್ತಿಗೆ ಸೇರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಹೇಳಿದೆ

Cashback And Gift Vouchers: ಕ್ಯಾಶ್​ಬ್ಯಾಕ್ ಹಾಗೂ ಗಿಫ್ಟ್​ ವೋಚರ್​ಗಳು ಜಿಎಸ್​ಟಿ ವ್ಯಾಪ್ತಿಗೆ ಬರುವುದಿಲ್ಲ: ಕರ್ನಾಟಕ ಹೈಕೋರ್ಟ್​
ಕರ್ನಾಟಕ ಹೈಕೋರ್ಟ್​
Follow us
|

Updated on: Feb 16, 2023 | 10:05 AM

ಕ್ಯಾಶ್​ಬ್ಯಾಕ್(Cash Back) ​ ಹಾಗೂ ಗಿಫ್ಟ್​ ವೋಚರ್​ಗಳು ಸರಕು ಮತ್ತು ಸೇವೆಗಳಡಿಯಲ್ಲಿ ಬರುವುದಿಲ್ಲ ಹೀಗಾಗಿ ಇವುಗಳು ಜಿಎಸ್​ಟಿ (GST)ವ್ಯಾಪ್ತಿಗೆ ಸೇರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಹೇಳಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಮತ್ತು ಶಿವಶಂಕರೇಗೌಡ ಅವರ ಪೀಠವು ಜನವರಿ 16 ರಂದು ಈ ತೀರ್ಪು ನೀಡಿತು. ಗ್ರಾಹಕರು ತಮ್ಮ ಉದ್ಯೋಗಿಗಳಿಗೆ ಅಥವಾ ಗ್ರಾಹಕರಿಗೆ  ಗಿಫ್ಟ್​ ವೋಚರ್​ಅಥವಾ ಕ್ಯಾಶ್​ಬ್ಯಾಕ್​ ಅನ್ನು ಪ್ರೋತ್ಸಾಹಕವಾಗಿ ನೀಡುತ್ತಾರೆ ಹಾಗಾಗಿ ಅದನ್ನು ಜಿಎಸ್​ಟಿ ವ್ಯಾಪ್ತಿಗೆ ತರಬಾರದು ಎಂದು ಅಭಿಪ್ರಾಯಪಟ್ಟಿದೆ.

ಅರ್ಜಿದಾರರು, ಮೌಲ್ಯಮಾಪಕರು, M/s ಪ್ರೀಮಿಯರ್ ಸೇಲ್ಸ್ ಪ್ರಮೋಷನ್ ಪ್ರೈವೇಟ್ ಲಿಮಿಟೆಡ್, ಗಿಫ್ಟ್ ವೋಚರ್‌ಗಳು, ಕ್ಯಾಶ್ ಬ್ಯಾಕ್ ವೋಚರ್‌ಗಳು ಮತ್ತು ಇ-ವೋಚರ್‌ಗಳನ್ನು ಒಳಗೊಂಡಂತೆ ಪ್ರಿ-ಪೇಯ್ಡ್​ ಪೇಮೆಂಟ್ ಇನ್​ಸ್ಟ್ರುಮೆಂಟ್​ಗಳನ್ನು ವಿತರಕರುಗಳಿಂದ ಪಡೆದುಕೊಳ್ಳುತ್ತಾರೆ ಮತ್ತು ಅವುಗಳನ್ನು ಗ್ರಾಹಕರಿಗೆ ಪೂರೈಸುತ್ತಾರೆ.

ಮತ್ತಷ್ಟು ಓದಿ: Paytm Wallet Transit Card: ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್​ ಆ್ಯಕ್ಟಿವೇಟ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಗ್ರಾಹಕರು ತಮ್ಮ ಉದ್ಯೋಗಿಗಳಿಗೆ ಪ್ರೋತ್ಸಾಹದ ರೂಪದಲ್ಲಿ ಅಥವಾ ಪ್ರಚಾರದ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ಈ ಗಿಫ್ಟ್​ ಕೂಪನ್​ಗಳನ್ನು ನೀಡಲಾಗುತ್ತದೆ. ಡೆಬಿಟ್ ಹಾಗೂ ಕ್ರೆಡಿಟ್​ ಕಾರ್ಡ್​ಗಳ ಪ್ರಾಮುಖ್ಯತೆಯನ್ನು ಅಲ್ಲಗಳೆಯುವಂತಿಲ್ಲ, ಕೆಲವೊಂದು ಮಳಿಗೆಗಳಲ್ಲಿ ಇಂತಿಷ್ಟು ಮೌಲ್ಯದ ವಸ್ತುಗಳನ್ನು ಕೊಂಡರೆ ಒಂದಷ್ಟು ಹಣವನ್ನು ಕ್ಯಾಶ್​ಬ್ಯಾಕ್​ ರೂಪದಲ್ಲಿ ನೀಡಲಾಗುತ್ತದೆ. ಕೆಲವೊಂದು ಮಳಿಗೆಗಳಲ್ಲಿ ಕ್ರೆಡಿಟ್ ಕಾರ್ಡ್​ ಬಳಕೆ ಮಾಡಿ ವಸ್ತುಗಳನ್ನು ಕೊಂಡರೆ ಕ್ಯಾಶ್​ಬ್ಯಾಕ್ ಸಿಗುತ್ತದೆ.

ಇನ್ನೂ ಕೆಲವು ಕಡೆ ಇಂತಿಷ್ಟು ದಿನದೊಳಗೆ ಆ ವಸ್ತುಗಳನ್ನು ಖರೀದಿಸಿದರೆ ಇಂತಿಷ್ಟು ಹಣವನ್ನು ಹಿಂದಿರುಗಿಸಲಾಗುವುದು ಎಂದು ಫಲಕ ಅಳವಡಿಸಿರುತ್ತಾರೆ. ಇನ್ನೂ ಕೆಲವು ಕಡೆ ಗಿಫ್ಟ್​ ವೋಚರ್​ಗಳನ್ನು ನೀಡಿ ಯಾವುದೋ ಅವಧಿಯೊಳಗೆ ಖರೀದಿಸಬೇಕು ಎಂದು ಗಡುವು ನೀಡಿರುತ್ತಾರೆ. ಆದರೆ ಇದ್ಯಾವುದೂ ತೆರಿಗೆ ವ್ಯಾಪ್ತಿಗೆ ಒಳಪಡುವುದಿಲ್ಲ ಅದಕ್ಕೆ ವಿನಾಯಿತಿ ನೀಡಲಾಗುವುದು ಎಂದು ಕೋರ್ಟ್​ ಹೇಳಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ