Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ: ಸ್ಪಷ್ಟನೆ ನೀಡಿದ ಹೆಚ್​​ಕೆ ಪಾಟೀಲ್

ಇಂದಿರಾ ಕ್ಯಾಂಟಿನ್ ಊಟದ ಬೆಲೆಯಲ್ಲಿ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಈ ಬಗ್ಗೆ ಸ್ವತಃ ಸಚಿವ ಹೆಚ್​ಕೆ ಪಾಟೀಲ್ ಅವರೇ ಹೇಳಿಕೆ ನೀಡಿದ್ದರು. ಮಾಧ್ಯಮಗಳ ವರದಿಗಳ ಬೆನ್ನಲ್ಲೇ ಎಚ್ಚೆತ್ತ ಸಚಿವರು ಸ್ಪಷ್ಟನೆ ನೀಡಿದ್ದು, ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದಿದ್ದಾರೆ.

ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ: ಸ್ಪಷ್ಟನೆ ನೀಡಿದ ಹೆಚ್​​ಕೆ ಪಾಟೀಲ್
ಇಂದಿರಾ ಕ್ಯಾಂಟೀನ್ ಊಟದ ಬೆಲೆ ಹೆಚ್ಚಳವಿಲ್ಲ ಎಂದು ಹೆಚ್​ಕೆ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ
Follow us
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi

Updated on:Aug 19, 2023 | 10:36 PM

ಬೆಂಗಳೂರು, ಆಗಸ್ಟ್ 19: ಇಂದಿರಾ ಕ್ಯಾಂಟೀನ್ (Indira canteen) ಊಟದ ಬೆಲೆಯಲ್ಲಿ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಈ ಬಗ್ಗೆ ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಸಚಿವ ಹೆಚ್​ಕೆ ಪಾಟೀಲ್ (HK Patil) ಅವರೇ ಇದೀಗ ಬೆಲೆ ಏರಿಕೆ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಲೆ ಏರಿಕೆ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ ಹೆಚ್​ಕೆ ಪಾಟೀಲ್, ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ. ಯಥಾ ಪ್ರಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿರುವಂತೆ ದರ ಇರಲಿದೆ. ಅದರಂತೆ ತಿಂಡಿ ಬೆಲೆ 5 ರೂಪಾಯಿ ಹಾಗೂ ಮಧ್ಯಾಹ್ನ ಹಾಗೂ ರಾತ್ರಿ ಊಟ 10 ರೂಪಾಯಿ ಇರಲಿದೆ ಎಂದಿದ್ದಾರೆ.

ಇದನ್ನೂ ಓದಿ: Indira Canteen: ಇಂದಿರಾ ಕ್ಯಾಂಟೀನ್‌ ಊಟದ ದರ ಏರಿಕೆ: ಸಂಪುಟ ಸಭೆ ನಿರ್ಧಾರ

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಇಂದಿರಾ ಕ್ಯಾಂಟೀನ್​ನಲ್ಲಿ ನೀಡುವ ಆಹಾರದ ಬೆಲೆ ಹೆಚ್ಚಳವೂ ಒಂದು. ಇಂದಿರಾ ಕ್ಯಾಂಟೀನ್‌ನಲ್ಲಿ 10 ರೂ. ಇದ್ದ ಒಂದು ಊಟದ ಬೆಲೆ 60 ರೂ.ಗೆ ಏರಿಸಲಾಗಿದೆ. ಗ್ರಾಹಕರಿಂದ 27 ರೂ. ಪಡೆದು ಉಳಿದ ಹಣವನ್ನು (33 ರೂ.) ಸರ್ಕಾರ ಭರಿಸಲಿದೆ ಎಂದು ಹೆಚ್​ಕೆ ಪಾಟೀಲ್ ತಿಳಿಸಿದ್ದರು.

ಐದು ಗ್ಯಾರಂಟಿ ಯೋಜನೆಗಳ ಸಮಪರ್ಕ ಜಾರಿಗಾಗಿ ಕಾಂಗ್ರೆಸ್ ಸರ್ಕಾರವು ಹಣದ ಕ್ರೂಡೀಕರಣಕ್ಕೆ ಚಿಂತನೆ ನಡೆಸುತ್ತಿದೆ. ಈ ಯೋಜನೆಗಳ ಜಾರಿಗಾಗಿ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿದೆ. ಈ ವರ್ಷ ಅಭಿವೃದ್ಧಿ ಕಾರ್ಯ ಅಸಾಧ್ಯ ಎಂದು ಸ್ವತಃ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಹೇಳಿಕೆ ನೀಡಿದ್ದರು.

ಸದ್ಯ, ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಬೆಲೆ ಇಳಿಕೆಯ ಆಶ್ವಾಸನೆ ನೀಡಿದ್ದ ಕಾಂಗ್ರೆಸ್, ಇದೀಗ ಮದ್ಯದ ಬೆಲೆ, ವಿದ್ಯುತ್ ದರ ಏರಿಕೆ, ಹಾಲಿನ ದರ ಏರಿಕೆ ಮಾಡಿ ಮಾತು ತಪ್ಪಿದೆ. ಅಲ್ಲದೆ, ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಟೀಕಾ ಪ್ರಹಾರ ನಡೆಸುತ್ತಿದೆ. ಈ ನಡುವೆ ಇಂದಿರಾ ಕ್ಯಾಂಟೀನ್ ಆಹಾರದ ಬೆಲೆ ಏರಿಕೆಗೆ ಮಾಡಲು ಸರ್ಕಾರ ಮುಂದಾಗಿತ್ತು. ಆದರೆ, ದುಬಾರಿ ಬೆಲೆಯ ವರದಿ ಹಾಗೂ ವಿಪಕ್ಷಗಳು ಮತ್ತು ಜನರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆ ಹಿನ್ನೆಲೆ ಎಚ್ಚೆತ್ತ ಸರ್ಕಾರವು ಇಂದಿರಾ ಕ್ಯಾಂಟೀನ್ ಊಟದ ಬೆಲೆ ಏರಿಸುವ ನಿರ್ಧಾರದಿಂದ ಹಿಂದೆ ಸರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Sat, 19 August 23

ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್