AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ: ಸ್ಪಷ್ಟನೆ ನೀಡಿದ ಹೆಚ್​​ಕೆ ಪಾಟೀಲ್

ಇಂದಿರಾ ಕ್ಯಾಂಟಿನ್ ಊಟದ ಬೆಲೆಯಲ್ಲಿ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಈ ಬಗ್ಗೆ ಸ್ವತಃ ಸಚಿವ ಹೆಚ್​ಕೆ ಪಾಟೀಲ್ ಅವರೇ ಹೇಳಿಕೆ ನೀಡಿದ್ದರು. ಮಾಧ್ಯಮಗಳ ವರದಿಗಳ ಬೆನ್ನಲ್ಲೇ ಎಚ್ಚೆತ್ತ ಸಚಿವರು ಸ್ಪಷ್ಟನೆ ನೀಡಿದ್ದು, ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದಿದ್ದಾರೆ.

ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ: ಸ್ಪಷ್ಟನೆ ನೀಡಿದ ಹೆಚ್​​ಕೆ ಪಾಟೀಲ್
ಇಂದಿರಾ ಕ್ಯಾಂಟೀನ್ ಊಟದ ಬೆಲೆ ಹೆಚ್ಚಳವಿಲ್ಲ ಎಂದು ಹೆಚ್​ಕೆ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi|

Updated on:Aug 19, 2023 | 10:36 PM

Share

ಬೆಂಗಳೂರು, ಆಗಸ್ಟ್ 19: ಇಂದಿರಾ ಕ್ಯಾಂಟೀನ್ (Indira canteen) ಊಟದ ಬೆಲೆಯಲ್ಲಿ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಈ ಬಗ್ಗೆ ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಸಚಿವ ಹೆಚ್​ಕೆ ಪಾಟೀಲ್ (HK Patil) ಅವರೇ ಇದೀಗ ಬೆಲೆ ಏರಿಕೆ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಲೆ ಏರಿಕೆ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ ಹೆಚ್​ಕೆ ಪಾಟೀಲ್, ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ. ಯಥಾ ಪ್ರಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿರುವಂತೆ ದರ ಇರಲಿದೆ. ಅದರಂತೆ ತಿಂಡಿ ಬೆಲೆ 5 ರೂಪಾಯಿ ಹಾಗೂ ಮಧ್ಯಾಹ್ನ ಹಾಗೂ ರಾತ್ರಿ ಊಟ 10 ರೂಪಾಯಿ ಇರಲಿದೆ ಎಂದಿದ್ದಾರೆ.

ಇದನ್ನೂ ಓದಿ: Indira Canteen: ಇಂದಿರಾ ಕ್ಯಾಂಟೀನ್‌ ಊಟದ ದರ ಏರಿಕೆ: ಸಂಪುಟ ಸಭೆ ನಿರ್ಧಾರ

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಇಂದಿರಾ ಕ್ಯಾಂಟೀನ್​ನಲ್ಲಿ ನೀಡುವ ಆಹಾರದ ಬೆಲೆ ಹೆಚ್ಚಳವೂ ಒಂದು. ಇಂದಿರಾ ಕ್ಯಾಂಟೀನ್‌ನಲ್ಲಿ 10 ರೂ. ಇದ್ದ ಒಂದು ಊಟದ ಬೆಲೆ 60 ರೂ.ಗೆ ಏರಿಸಲಾಗಿದೆ. ಗ್ರಾಹಕರಿಂದ 27 ರೂ. ಪಡೆದು ಉಳಿದ ಹಣವನ್ನು (33 ರೂ.) ಸರ್ಕಾರ ಭರಿಸಲಿದೆ ಎಂದು ಹೆಚ್​ಕೆ ಪಾಟೀಲ್ ತಿಳಿಸಿದ್ದರು.

ಐದು ಗ್ಯಾರಂಟಿ ಯೋಜನೆಗಳ ಸಮಪರ್ಕ ಜಾರಿಗಾಗಿ ಕಾಂಗ್ರೆಸ್ ಸರ್ಕಾರವು ಹಣದ ಕ್ರೂಡೀಕರಣಕ್ಕೆ ಚಿಂತನೆ ನಡೆಸುತ್ತಿದೆ. ಈ ಯೋಜನೆಗಳ ಜಾರಿಗಾಗಿ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿದೆ. ಈ ವರ್ಷ ಅಭಿವೃದ್ಧಿ ಕಾರ್ಯ ಅಸಾಧ್ಯ ಎಂದು ಸ್ವತಃ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಹೇಳಿಕೆ ನೀಡಿದ್ದರು.

ಸದ್ಯ, ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಬೆಲೆ ಇಳಿಕೆಯ ಆಶ್ವಾಸನೆ ನೀಡಿದ್ದ ಕಾಂಗ್ರೆಸ್, ಇದೀಗ ಮದ್ಯದ ಬೆಲೆ, ವಿದ್ಯುತ್ ದರ ಏರಿಕೆ, ಹಾಲಿನ ದರ ಏರಿಕೆ ಮಾಡಿ ಮಾತು ತಪ್ಪಿದೆ. ಅಲ್ಲದೆ, ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಟೀಕಾ ಪ್ರಹಾರ ನಡೆಸುತ್ತಿದೆ. ಈ ನಡುವೆ ಇಂದಿರಾ ಕ್ಯಾಂಟೀನ್ ಆಹಾರದ ಬೆಲೆ ಏರಿಕೆಗೆ ಮಾಡಲು ಸರ್ಕಾರ ಮುಂದಾಗಿತ್ತು. ಆದರೆ, ದುಬಾರಿ ಬೆಲೆಯ ವರದಿ ಹಾಗೂ ವಿಪಕ್ಷಗಳು ಮತ್ತು ಜನರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆ ಹಿನ್ನೆಲೆ ಎಚ್ಚೆತ್ತ ಸರ್ಕಾರವು ಇಂದಿರಾ ಕ್ಯಾಂಟೀನ್ ಊಟದ ಬೆಲೆ ಏರಿಸುವ ನಿರ್ಧಾರದಿಂದ ಹಿಂದೆ ಸರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Sat, 19 August 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್