AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ವ್ಯಕ್ತಿಯ ಖಾಸಗಿ ಆಸ್ತಿಯನ್ನು ವಕ್ಫ್​ಗೆ ವರ್ಗಾಯಿಸಲಾಗುತ್ತಿಲ್ಲ: ಡಿಸಿ ಟಿ.ಭೂಬಾಲನ್​ ಸ್ಪಷ್ಟನೆ

ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್ ಆಸ್ತಿಗಳ ಇಂದೀಕರಣ ವಿಚಾರವಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ವಿಡಿಯೋ ಹೇಳಿಕೆ ನೀಡಿದ್ದು, ಯಾವುದೇ ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇರಲ್ಲ. ಹಾಗಾಗಿ ಯಾವುದೇ ವದಂತಿಗಳಿಗೆ ರೈತರು ಮತ್ತು ಆಸ್ತಿ ಮಾಲೀಕರು ಕಿವಿಗೊಡಬಾರದು ಎಂದು ಸ್ಪಷ್ಟನೆ ನೀಡಿದ್ದಾರೆ.

ಯಾವುದೇ ವ್ಯಕ್ತಿಯ ಖಾಸಗಿ ಆಸ್ತಿಯನ್ನು ವಕ್ಫ್​ಗೆ ವರ್ಗಾಯಿಸಲಾಗುತ್ತಿಲ್ಲ: ಡಿಸಿ ಟಿ.ಭೂಬಾಲನ್​ ಸ್ಪಷ್ಟನೆ
ಯಾವುದೇ ವ್ಯಕ್ತಿಯ ಖಾಸಗಿ ಆಸ್ತಿಯನ್ನು ವಕ್ಫ್​ಗೆ ವರ್ಗಾಯಿಸಲಾಗುತ್ತಿಲ್ಲ: ಡಿಸಿ ಟಿ.ಭೂಬಾಲನ್​ ಸ್ಪಷ್ಟನೆ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Oct 26, 2024 | 9:44 PM

Share

ವಿಜಯಪುರ, ಅಕ್ಟೋಬರ್​ 26: ವಕ್ಫ್ (Waqf Board) ಕಿಚ್ಚು ಜಿಲ್ಲೆಯಲ್ಲಿ ಕಡಿಮೆಯಾಗುತ್ತಿಲ್ಲ. ಜಮೀನುಗಳನ್ನು ವಕ್ಪ್ ಬೋರ್ಡಿಗೆ ಒಳಪಡಿಸಲಾಗುತ್ತಿದೆ ಎಂಬ ಭಯ ರೈತರನ್ನು ಕಾಡುತ್ತಿದೆ. ಹೀಗಿರುವಾಗ ರೈತರಿಗೆ ಸೇರಿದ ಜಮೀನಲ್ಲಿ ಒಂದಿಂಚು ಕೂಡ ಯಾರ ವಶವೂ ಆಗಲು ಬಿಡುವುದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್​ ಹೇಳಿದ್ದಾರೆ. ಇದರ ಬೆನ್ನಲ್ಲೇ ಜಿಲ್ಲೆಯ ವಕ್ಫ್ ಆಸ್ತಿ ಇಂದಿಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ರವಾನೆಯಾಗುತ್ತಿದ್ದು, ಯಾವುದೇ ವದಂತಿಗಳಿಗೆ ರೈತರು-ಆಸ್ತಿ ಮಾಲೀಕರು ಕಿವಿಗೊಡಬಾರದೆಂದು ಡಿಸಿ ಟಿ ಭೂಬಾಲನ್​ ಸ್ಪಷ್ಟನೆ ನೀಡಿದ್ದಾರೆ.

ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇರಲ್ಲ: ಡಿಸಿ ಟಿ ಭೂಬಾಲನ್

ವಿಡಿಯೋ ಮೂಲಕ ಹೇಳಿಕೆ ನೀಡಿರುವ ಡಿಸಿ ಟಿ ಭೂಬಾಲನ್, ಯಾವುದೇ ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇರಲ್ಲ. ಯಾವುದೇ ಖಾಸಗಿ ವ್ಯಕ್ತಿ, ಖಾಸಗಿ ಸಂಸ್ಥೆ, ಸರ್ಕಾರಿ ಸಂಸ್ಥೆಯವರು ಅವರ ಬಳಿಯ ಸೂಕ್ತ ದಾಖಲಾತಿ ಕಂದಾಯ ಇಲಾಖೆಗೆ ನೀಡಬೇಕು. ಸಂಬಂಧಿಸಿದವರಿಗೆ ಕಂದಾಯ ಇಲಾಖೆ ಅಧಿಕಾರಿಗಳು ನೋಟಿಸ್‌ ನೀಡುತ್ತಾರೆ. ನಂತರ ಹಕ್ಕನ್ನು ಖಚಿತಪಡಿಸಿಕೊಂಡು ದಾಖಲಾತಿಗಳನ್ನು ಇಂದೀಕರಣ ಮಾಡುವುದು ಕಂದಾಯ ಇಲಾಖೆ ಅಧಿಕಾರಿಗಳ ಜವಾಬ್ದಾರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ವಕ್ಫ್​ ಕಾಯ್ದೆ ವಿರುದ್ಧ ಹೊತ್ತಿದ ಕಿಚ್ಚು: ಕಾಯ್ದೆಯನ್ನೇ ರದ್ದು ಮಾಡುವಂತೆ ಕೇಂದ್ರಕ್ಕೆ ರೈತರು ಒತ್ತಾಯ

1974ರಲ್ಲಿ ವಕ್ಫ್‌ ಬೋರ್ಡ್ ಗೆಜೆಟ್ ನೋಟಿಫಿಕೇಷನ್‌ ಹೊರಡಿಸಿತ್ತು. ವಕ್ಫ್‌ ಆಸ್ತಿಗಳ ಕಂದಾಯ ಇಲಾಖೆಗೆ ಇಂದೀಕರಣ ಮಾಡಲು ಪಟ್ಟಿ ನೀಡಿದ್ದಾರೆ. ವಿಜಯಪುರ ಜಿಲ್ಲಾ ವಕ್ಫ್‌ ಬೋರ್ಡ್ ಅಧಿಕಾರಿಗಳು ನೀಡಿದ್ದಾರೆ. ದಾಖಲಾತಿ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಪ್ರಕ್ರಿಯೆಗಾಗಿ ರೈತರಿಗೆ, ಮಾಲೀಕರಿಗೆ ನೋಟಿಸ್‌ ನೀಡಲಾಗುತ್ತದೆ. ನೋಟಿಸ್‌ಗೆ ಭಯಪಡುವ ಅಗತ್ಯವಿಲ್ಲವೆಂದು ಡಿಸಿ ಧೈರ್ಯ ತುಂಬಿದ್ದಾರೆ.

ಸೂಕ್ತ ದಾಖಲಾತಿ ಕಂದಾಯ ಇಲಾಖೆಯ ಆಧಿಕಾರಿಗಳಿಗೆ ಸಲ್ಲಿಸಲು ಸಲಹೆ ನೀಡಿದ್ದು, ದಾಖಲಾತಿ ಆಧರಿಸಿ ಅಧಿಕಾರಿಗಳು ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ. ಒಂದು ವೇಳೆ ತಹಶೀಲ್ದಾರ್ ನೋಟಿಸ್‌ ನೀಡದೇ ಇಂದೀಕರಣ ಮಾಡಿದರೆ, ರೈತರು-ಮಾಲೀಕರು ಎಸಿಗೆ, ನಂತರ ಡಿಸಿಗೆ ಮೇಲ್ಮನವಿಯನ್ನು ಸಲ್ಲಿಸಬಹುದು. ನೋಟಿಸ್ ಬಂದ ತಕ್ಷಣ ಯಾರ ಹಕ್ಕೂ ತಕ್ಷಣ ಬದಲಾವಣೆಯಾಗಲ್ಲ. ಸೂಕ್ತ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಬೇಕು ಎಂದಿದ್ದಾರೆ.

ರೈತರಿಗೆ ಸೇರಿದ ಜಮೀನಲ್ಲಿ ಒಂದಿಂಚು ಕೂಡ ಯಾರ ವಶವೂ ಆಗಲು ಬಿಡುವುದಿಲ್ಲ: ಸಚಿವ ಎಂ.ಬಿ ಪಾಟೀಲ್​

ಇನ್ನು ಸಚಿವ ಎಂ.ಬಿ ಪಾಟೀಲ್​ ಈ ಬಗ್ಗೆ ಟ್ವೀಟ್ ಮಾಡಿದ್ದು, ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ 10 ಸರ್ವೇ ನಂಬರುಗಳ 11 ಎಕರೆ ಆಸ್ತಿ ಮಾತ್ರ ವಕ್ಫ್ ಆಸ್ತಿ ಎಂದು ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಅದರಲ್ಲಿ 10 ಎಕರೆ 14 ಗುಂಟೆ ಖಬರಸ್ತಾನ ಇದೆ. ಉಳಿದದ್ದು ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ ಹಾಗೂ ಈ ಭೂಮಿಯು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಸೇರಿದ್ದು, ಯಾವುದೇ ರೈತರ ಖಾಸಗಿ ಜಮೀನು ಒಳಪಟ್ಟಿಲ್ಲ ಎಂಬುದನ್ನು ಗಮನಿಸಬೇಕು ಎಂದಿದ್ದಾರೆ.

ಹಜರತ್ ಪೀರ ದಸ್ತಿಗೀರ ಸಾಬ್ ಮೊಹಮ್ಮದ ಚಿಂಗ್ ಸಿಯಾ ತಖಿಯಾ ದರ್ಗಾ ವಿಜಯಪುರ ಮಹಾಲಬಾಗಯತ ಸೇರಿದ ಆಸ್ತಿಯಾಗಿದ್ದು, ಕೆಳಗಡೆ ತಪ್ಪಾಗಿ ಹೊನವಾಡ ಎಂದು ಸೇರಿದೆ. ಇದು ಗೊಂದಲಕ್ಕೆ ಕಾರಣವಾಗಿದೆ. ಇದು ಗೊಂದಲಕ್ಕೆ ಕಾರಣವಾಗಿದೆ. ಈ ಯಾವ ರೈತರಿಗೂ ವಕ್ಫ ಸಮಿತಿ ಅಥವಾ ಸರ್ಕಾರದ ಇಲಾಖೆಯಿಂದ ಯಾವುದೇ ನೋಟಿಸಗಳು ಬಂದಿಲ್ಲ.

ಇದನ್ನೂ ಓದಿ: ವಿಜಯಪುರ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್​ ಹೆಸರು: ಕಂಗಾಲಾದ ಅನ್ನದಾತ

ಈಗಾಗಲೇ ಜಿಲ್ಲೆಯಲ್ಲಿ ಹಲವು ರೈತರಿಗೆ ವಕ್ಫ್ ಆಸ್ತಿ ನೋಟಿಸು ಬಂದಿದೆ ಎಂಬ ದೂರುಗಳಿದ್ದು, ವಕ್ಫ್ ಸಮಿತಿ ಮತ್ತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಎಲ್ಲ ದಾಖಲೆಗಳನ್ನು ಕೂಲಕುಂಷವಾಗಿ ಪರಿಶೀಲಿಸುತ್ತಾರೆ. ಒಂದೇ ಒಂದು ಇಂಚು ರೈತರ ಜಾಗವು ಅನಗತ್ಯವಾಗಿ, ಆಧಾರ, ದಾಖಲೆಗಳಿಲ್ಲದೆ ವಕ್ಫ ಆಸ್ತಿ ಎಂದು ಸೇರಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಶೀಘ್ರದಲ್ಲೇ ಸಭೆ ನಡೆಸಿ, ಎಲ್ಲ ಗೊಂದಲಗಳಿಗೆ ಉತ್ತರ ನೀಡಲಾಗುವುದು. ಈ ನಿಟ್ಟಿನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರಾಗಲಿ ಮತ್ತೊಬ್ಬರಾಗಲಿ ರಾಜಕಾರಣ ಮಾಡಿ ಜನಸಾಮಾನ್ಯರಲ್ಲಿ ಇಲ್ಲದ ಗೊಂದಲ, ಆತಂಕ ಮೂಡಿಸುವುದು ಬೇಡ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್