ಚಿತ್ರದುರ್ಗದಲ್ಲಿ ಇಂಟರ್ನೆಟ್ ಸಂಪರ್ಕವೇ ಇಲ್ಲ: ಪುರಾತನರಂತೆ ಬದುಕು ಸವೆಸುತ್ತಿರುವ ಜನ

21ನೇ ಶತಮಾನದಲ್ಲಿ ಬದುಕುತ್ತಿರುವ ನಮಗೆ ಮೊಬೈಲ್, ಇಂಟರ್ನೆಟ್​ ಎಂಬುದು ಮನುಷ್ಯನ ದಿನನಿತ್ಯದ ಅವಿಭಾಜ್ಯ ಅಂಗವೇ ಆಗಿ ಹೋಗಿದೆ. ಇವೆರಡು ಇಲ್ಲದಿದ್ದರೆ ಮನುಷ್ಯನಿಗೆ ಕೈಕಾಲುಗಳೇ ಆಡುವುದಿಲ್ಲ. ಇಂಥದರಲ್ಲಿ ಚಿತ್ರದುರ್ಗದ ಆ ಗ್ರಾಮಗಳಲ್ಲಿ ಮೊಬೈಲ್, ಇಂಟರ್ನೆಟ್ ಸಂಕರ್ಪ ಬಾರದೇ ಎಷ್ಟೋ ವರ್ಷಗಳೇ ಕಳೆದಿವೆ.

ಚಿತ್ರದುರ್ಗದಲ್ಲಿ ಇಂಟರ್ನೆಟ್ ಸಂಪರ್ಕವೇ ಇಲ್ಲ: ಪುರಾತನರಂತೆ ಬದುಕು ಸವೆಸುತ್ತಿರುವ ಜನ
ಚಿತ್ರದುರ್ಗದಲ್ಲಿ ಇಂಟರ್ನೆಟ್ ಸಂಪರ್ಕವೇ ಇಲ್ಲ: ಪುರಾತನರಂತೆ ಬದುಕು ಸವೆಸುತ್ತಿರುವ ಜನ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 30, 2024 | 7:05 PM

ಚಿತ್ರದುರ್ಗ, ಆಗಸ್ಟ್ 30: ಮೊಬೈಲ್, ಇಂಟರ್ನೆಟ್​ ಎಂಬುದು ಮನುಷ್ಯನ ದಿನನಿತ್ಯದ ಭಾಗವಾಗಿ ಹೋಗಿದೆ. ಆದರೆ ಕೋಟೆನಾಡಿನ ಆ ಗ್ರಾಮಗಳ ಜನರು ಮಾತ್ರ ಮೊಬೈಲ್ ಬಳಸುವಂತಿಲ್ಲ. ಇಂಟರ್ನೆಟ್ ಕೂಡ​ ಇಲ್ಲದೆ ಪುರಾತನರಂತೆ ಬದುಕು ಸವೆಸುತ್ತಿದ್ದಾರೆ. ಆದರೂ ಯಾರೊಬ್ಬರೂ ಹೇಳೋರಿಲ್ಲ, ಕೇಳೋರಿಲ್ಲ.

ಮನೆ ಮೇಲೆ ಹತ್ತಿದರೂ, ಮರದ ಮೇಲೇರಿದರೂ ನೆಟ್​ವರ್ಕ್ ಸಿಗಲ್ಲ. ಮಕ್ಕಳಿಗೆ ಓದು-ಬರಹಕ್ಕೆ ಇಂಟರ್ ನೆಟ್​ ಇಲ್ಲದೆ ಜನರು ಪರದಾಡುವಂತಾಗಿದೆ. ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಥಂಬ್ ಕೊಡಲು ಸಹ ನೆಟ್​​ವರ್ಕ್ ಸಮಸ್ಯೆ ಆಗುತ್ತಿದೆ. ಈ ಎಲ್ಲಾ ಸಮಸ್ಯಗಳು ಇಂದಿಗೂ ಕೋಟೆನಾಡು ಚಿತ್ರದುರ್ಗ ತಾಲೂಕಿನ ನಲ್ಲಿಕಟ್ಟೆ ಮತ್ತು ವಿ.ಪಾಳ್ಯ ಗ್ರಾಮಗಳಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: ಪುರಾತತ್ವ ಇಲಾಖೆ ಯೋಜನೆಯಿಂದ ಕಳೆಗುಂದಿದ ಚಿತ್ರದುರ್ಗ ಕೋಟೆ, ಪ್ರವಾಸಿಗರ ಕಿಡಿ

ಹೌದು.. ಸುಮಾರು ವರ್ಷಗಳಿಂದ ಈ ಗ್ರಾಮಗಳ ಜನರು ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳಿಗೆ ನೆಟ್​ವರ್ಕ್ ಸಮಸ್ಯೆ ನಿವಾರಿಸುವಂತೆ ಮನವಿ ಮಾಡಿದ್ದಾರೆ. ಅನಾರೋಗ್ಯ ಸಂದರ್ಭದಲ್ಲಿ ಆಂಬುಲೆನ್ಸ್​ಗೆ ಕರೆ ಮಾಡಲು ಸಹ ಊರಿಂದ ಹೊರಗೆ ಬರಬೇಕು. ಆಪತ್ತು ಕಾಲದಲ್ಲಿ ಮೊಬೈಲ್ ನೆಟವರ್ಕ್ ಇಲ್ಲದೆ ಪರದಾಡುವ ಸ್ಥಿತಿಯಿದೆ. ಮಕ್ಕಳಿಗೆ ಓದಿಕೊಳ್ಳಲು ಸಹ ಇಂಟರ್ನೆಟ್, ಮೊಬೈಲ್ ನೆಟ್​ವರ್ಕ್ ಅಗತ್ಯವಾಗಿದೆ. ಆದರೆ ನೆಟ್ ವರ್ಕ್ ಸಮಸ್ಯೆಯಿಂದ ವಿದ್ಯಾರ್ಥಿಗಳಿಗೂ ಸಾಕಷ್ಟು ತೊಂದರೆ ಆಗುತ್ತಿದೆ ಎನ್ನುತ್ತಾರೆ ಗ್ರಾಮಸ್ಥರು.

ನಲ್ಲಿಕಟ್ಟೆ ಗ್ರಾಮದ ಪಕ್ಕದ ಗ್ರಾಮ ವಿ.ಪಾಳ್ಯದಲ್ಲೂ ಪರಿಸ್ಥಿತಿ ಭಿನ್ನಾವಗೇನೂ ಇಲ್ಲ. ನ್ಯಾಯ ಬೆಲೆ ಅಂಗಡಿಗಳಲ್ಲಿ ಥಂಬ್​ ನೀಡಿ ಪಡಿತರ ಪಡೆಯಲು ಸಹ ಸಂಜೆವರೆಗೆ ಕಾಯುವ ದುಸ್ಥಿತಿಯಿದೆ. ಅನೇಕ ಸಲ ಶಾಸಕರು, ಸಂಸದರು ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಯಾವುದೇ ಪ್ರಯೋಜವಾಗಿಲ್ಲ ಹೀಗಾಗಿ ಪ್ರತ್ಯೇಕ್ ಟವರ್​ಗಳನ್ನು ಅಳವಡಿಸಿ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬುದು ಜನರ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ನಾಪತ್ತೆಯಾಗಿದ್ದ ಖಾಸಗಿ ಶಾಲೆಯ 6 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ

ಒಟ್ಟಾರೆಯಾಗಿ ಚಿತ್ರದುರ್ಗ ತಾಲೂಕಿನ ನಲ್ಲಿಕಟ್ಟೆ ಮತ್ತು ವಿ.ಪಾಳ್ಯ ಗ್ರಾಮಸ್ಥರು ನೆಟ್​ವರ್ಕ್ ಸಮಸ್ಯೆಯಿಂದಾಗಿ ಹೈರಾಣಾಗಿದ್ದಾರೆ. ಈ ಕಾಲದಲ್ಲಿ ವಿದ್ಯುತ್​ನಷ್ಟೇ ಅಗತ್ಯವಾಗಿರುವ ಮೊಬೈಲ್, ಇಂಟರ್ ನೆಟ್ ಸಂಪರ್ಕ ಇಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​