ಲಾಕ್​ಡೌನ್​: ಈ ದಿನದಂದು KSRTC ಬಸ್​ ಸಂಚಾರ ಇರಲ್ಲ

ಬೆಂಗಳೂರು: ಅಂತೂ ಇಂತು ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದಿಗೆ ಮುಗಿದಿದೆ. ಇನ್ನು ರಾಜ್ಯ ಸರ್ಕಾರವು ಕೊರೊನಾ ನಿಯಂತ್ರಣದತ್ತ ದೃಢ ಹೆಜ್ಜೆ ಇಡುತ್ತಿದ್ದು, ಸಮರೋಪಾದಿಯಲ್ಲಿ ಒಂದೊಂದಾಗಿ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಶನಿವಾರ ರಾತ್ರಿ 8ಗಂಟೆಯಿಂದಲೇ ಬೆಂಗಳೂರು ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಮುಂದುವರಿದ ಭಾಗವಾಗಿ ಭಾನುವಾರದಿಂದ ಕೆಎಸ್​ಆರ್​ಟಿಸಿ ಬಸ್​ಗಳ ಸಂಚಾರವನ್ನು ಸರ್ಕಾರ ಸ್ಥಗಿತಗೊಳಿಸಿದೆ. ಸಂಡೆ ಲಾಕ್​ಡೌನ್ ಇರುವ ಕಾರಣ ಅಂದು KSRTC ಬಸ್​ಗಳ ‌ಸಂಚಾರವಿರುವುದಿಲ್ಲ. ಭಾನುವಾರ ಬೆಳಗ್ಗೆಯಿಂದ ಸೋಮವಾರ ಬೆಳಗ್ಗೆಯವರೆಗೆ ಬಸ್ ಸೇವೆ ಲಭ್ಯವಿರಲ್ಲ. ಅಂತರ್ ಜಿಲ್ಲಾ ಹಾಗೂ ಅಂತರ್ ರಾಜ್ಯಕ್ಕೆ […]

ಲಾಕ್​ಡೌನ್​: ಈ ದಿನದಂದು KSRTC ಬಸ್​ ಸಂಚಾರ ಇರಲ್ಲ
ಸಾಧು ಶ್ರೀನಾಥ್​ Edited By:

Updated on: Jul 03, 2020 | 7:14 PM

ಬೆಂಗಳೂರು: ಅಂತೂ ಇಂತು ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದಿಗೆ ಮುಗಿದಿದೆ. ಇನ್ನು ರಾಜ್ಯ ಸರ್ಕಾರವು ಕೊರೊನಾ ನಿಯಂತ್ರಣದತ್ತ ದೃಢ ಹೆಜ್ಜೆ ಇಡುತ್ತಿದ್ದು, ಸಮರೋಪಾದಿಯಲ್ಲಿ ಒಂದೊಂದಾಗಿ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಶನಿವಾರ ರಾತ್ರಿ 8ಗಂಟೆಯಿಂದಲೇ ಬೆಂಗಳೂರು ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಮುಂದುವರಿದ ಭಾಗವಾಗಿ ಭಾನುವಾರದಿಂದ ಕೆಎಸ್​ಆರ್​ಟಿಸಿ ಬಸ್​ಗಳ ಸಂಚಾರವನ್ನು ಸರ್ಕಾರ ಸ್ಥಗಿತಗೊಳಿಸಿದೆ.

ಸಂಡೆ ಲಾಕ್​ಡೌನ್ ಇರುವ ಕಾರಣ ಅಂದು KSRTC ಬಸ್​ಗಳ ‌ಸಂಚಾರವಿರುವುದಿಲ್ಲ. ಭಾನುವಾರ ಬೆಳಗ್ಗೆಯಿಂದ ಸೋಮವಾರ ಬೆಳಗ್ಗೆಯವರೆಗೆ ಬಸ್ ಸೇವೆ ಲಭ್ಯವಿರಲ್ಲ. ಅಂತರ್ ಜಿಲ್ಲಾ ಹಾಗೂ ಅಂತರ್ ರಾಜ್ಯಕ್ಕೆ ಯಾವುದೇ ಬಸ್​ಗಳ ಸಂಚಾರವಿರುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

Published On - 7:07 pm, Fri, 3 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us