AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಆರ್.ಎಸ್. ಸುತ್ತಮುತ್ತ ಎಲ್ಲಾ ಮೈನಿಂಗ್ ಬಂದ್; ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ – ಗಣಿ ಸಚಿವ ಮುರುಗೇಶ್​ ನಿರಾಣಿ

KRS Dam: ಕೆ.ಆರ್.ಎಸ್. ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್​ ನಿರಾಣಿ ಸ್ಪಷ್ಟನೆ ನೀಡಿದ್ದಾರೆ.

ಕೆ.ಆರ್.ಎಸ್. ಸುತ್ತಮುತ್ತ ಎಲ್ಲಾ ಮೈನಿಂಗ್ ಬಂದ್; ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ - ಗಣಿ ಸಚಿವ ಮುರುಗೇಶ್​ ನಿರಾಣಿ
ಮುರುಗೇಶ್ ನಿರಾಣಿ
TV9 Web
| Edited By: ಸಾಧು ಶ್ರೀನಾಥ್​|

Updated on:Jul 05, 2021 | 2:05 PM

Share

ತುಮಕೂರು: ಒಂದೆಡೆ ಕನ್ನಂಬಾಡಿ ಅಣೆಕಟ್ಟೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ವಿಷಯವಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮಧ್ಯೆ ಪರಸ್ಪರ ನಿಂದನೆ ತಾರಕಕ್ಕೆ ತಲುಪಿವಾಗ ಕೆ.ಆರ್.ಎಸ್. ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್​ ನಿರಾಣಿ ಸ್ಪಷ್ಟನೆ ನೀಡಿದ್ದಾರೆ.

ಮುಂಜಾಗ್ರತೆಯಾಗಿ 10 ಕಿ.ಮೀ. ವ್ಯಾಪ್ತಿಯಲ್ಲಿ ಗಣಿ ಬಂದ್​ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನೋಟಿಸ್ ಕೊಟ್ಟು ಮುಚ್ಚಿಸಲಾಗಿದೆ. ಕಳೆದ 3-4 ದಿನಗಳಿಂದ ಅಲ್ಲಿ ಯಾವುದೇ ಗಣಿಗಾರಿಕೆ ನಡೆದಿಲ್ಲ ಎಂದು ಸಚಿವ ನಿರಾಣಿ ಹೇಳಿದ್ದಾರೆ.

ಪಾಂಡವಪುರ ಪಕ್ಕದಲ್ಲಿ ಬೇಬಿ ಬೆಟ್ಟ ಅಂತ ಬರುತ್ತೆ. ಕೆ.ಆರ್.ಎಸ್. ಸುತ್ತಮುತ್ತಲಿನ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ಮೈನಿಂಗ್ ಬಂದ್ ಮಾಡಿದ್ದೀವಿ. ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಮೈನಿಂಗ್ ನಡೆದಿಲ್ಲ. ಈ ಸಂಬಂಧ ತನಿಖೆ ಮಾಡಲಾಗುತ್ತಿದೆ. ಡ್ಯಾಮ್ ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಪಡುವಂತಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತುಮಕೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:

ನಾನು ಮಂಡ್ಯ ಕ್ಷೇತ್ರದ ಜನರಿಗೆ ಉತ್ತರದಾಯಿ, ಕುಮಾರಸ್ವಾಮಿಗಲ್ಲ: ಕುಮಾರಸ್ವಾಮಿ ಲೆವೆಲ್​ಗೆ ಇಳಿದು ಮಾತನಾಡೊಲ್ಲ- ಸುಮಲತಾ

ಕೆಆರ್​ಎಸ್ ಸೋರುತ್ತಿದ್ದರೆ ಅದರ ನೀರು ಸೋರದಂತೆ ಸುಮಲತಾರನ್ನ ಮಲಗಿಸಬೇಕು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

(no leakage in KRS Dam all mining activities around the dam stopped says mining minister murugesh nirani)

Published On - 2:01 pm, Mon, 5 July 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು