AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಇನ್ನೂ ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ..’

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಾಲೆ ಆರಂಭಿಸುವ ವಿಚಾರವಾಗಿ ಎಲ್ಲ ಶಾಸಕರ ಜತೆ ಮಾತುಕತೆ ನಡೆಸುತ್ತೇವೆ. ಅದಾದ ಮೇಲಷ್ಟೆ ಶಾಲೆ ರೀ ಓಪನಿಂಗ್​ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದ್ರೆ ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಶಾಸಕರೂ ಒಲವು ತೋರಿಲ್ಲ. ಸಂಸದರು, ಶಾಸಕರು, ಪರಿಷತ್ ಸದಸ್ಯರಿಗೂ ಪತ್ರ ಬರೆದಿದ್ದೇನೆ. ಶಾಲೆ ಆರಂಭದ ಬಗ್ಗೆ ಸಲಹೆ ನೀಡಲು ಮನವಿ ಮಾಡಿದ್ದೇನೆ ಎಂದು […]

’ಇನ್ನೂ ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ..’
ಸಾಧು ಶ್ರೀನಾಥ್​
|

Updated on:Sep 29, 2020 | 3:35 PM

Share

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಾಲೆ ಆರಂಭಿಸುವ ವಿಚಾರವಾಗಿ ಎಲ್ಲ ಶಾಸಕರ ಜತೆ ಮಾತುಕತೆ ನಡೆಸುತ್ತೇವೆ. ಅದಾದ ಮೇಲಷ್ಟೆ ಶಾಲೆ ರೀ ಓಪನಿಂಗ್​ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದ್ರೆ ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಶಾಸಕರೂ ಒಲವು ತೋರಿಲ್ಲ. ಸಂಸದರು, ಶಾಸಕರು, ಪರಿಷತ್ ಸದಸ್ಯರಿಗೂ ಪತ್ರ ಬರೆದಿದ್ದೇನೆ. ಶಾಲೆ ಆರಂಭದ ಬಗ್ಗೆ ಸಲಹೆ ನೀಡಲು ಮನವಿ ಮಾಡಿದ್ದೇನೆ ಎಂದು ಟಿವಿ9ಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಮಧ್ಯೆ, ನನ್ನ ಪ್ರಕಾರ ಇನ್ನು ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ ಎಂದು ಗಂಗಾವತಿಯಲ್ಲಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಾತನಾಡಿರುವ ಅವರು ಸೋಂಕು ಕಡಿಮೆಯಾದ್ರೆ ಮಾತ್ರ ಶಾಲೆ ಆರಂಭಿಸಬೇಕು. ಅದು LKG ಇರಬಹುದು‌ PUC ಇರಬಹುದು ಎಂದು ಮುನವಳ್ಳಿ ತಮ್ಮ ಅಭಿಪ್ರಾಯ ಸ್ಪಷ್ಟಪಡಿಸಿದ್ದಾರೆ.

ಮಕ್ಕಳ ಆರೋಗ್ಯವೇ ನಮಗೆ ಬಹಳ ಮುಖ್ಯ. ಆ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಕೆಲಸ ಮಾಡ್ತಾರೆ. ಎರಡು ಮೂರು ತಿಂಗಳು ನೋಡಿಕೊಂಡು ಮುಂದೆ ಯೋಚನೆ ಮಾಡಲಿ ಅನ್ನೋದು ನನ್ನ ಅಭಿಪ್ರಾಯ ಎಂದು ಪರಣ್ಣ ಮುನವಳ್ಳಿ ಹೇಳಿದ್ದಾರೆ.

ಸೋಂಕು ಹೆಚ್ಚಾದ್ರೆ ಮಕ್ಕಳಿಗೆ ಕಷ್ಟ ಆಗತ್ತೆ. ಸಚಿವರು, ಸಂಸದರು ಸೇರಿದಂತೆ ಅನೇಕರು ಜೀವ ಕಳೆದುಕೊಂಡಿದ್ದಾರೆ. ಈ ಕೊರೊನಾ ನಮ್ಮ ದೇಶಕ್ಕೆ ದೊಡ್ಡ ಆತಂಕಕಾರಿಯಾಗಿದೆ, ನಾವು ಕಷ್ಟದಲ್ಲಿದ್ದೇವೆ. ಸೋಂಕು ಹೆಚ್ಚಾಗುತ್ತಾ ಹೋದ್ರೆ ಇನ್ನೂ ಎರಡು ಮೂರು ತಿಂಗಳು ಶಾಲೆ ತೆರೆಯಬಾರದು ಎಂಬುದು ನನ್ನ ಸ್ಪಷ್ಟ ಅಭಿಪ್ರಾಯವೆಂದರು ಪರಣ್ಣ.

Published On - 10:37 am, Tue, 29 September 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ