AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋ ನೆಟ್ವರ್ಕ್, ನೋ ವೋಟಿಂಗ್; ಮಲೆನಾಡಿನಲ್ಲಿ ಅಭಿಯಾನ ಆರಂಭ

ಸಾಗರ ತಾಲೂಕಿನ ಕುದರೂರು, ತುಮರಿ, ಶಂಕರ ಶಾನುಭೋಗ್, ಚನ್ನಗೊಂಡ, ಭಾನುಕುಳಿ, ಅರಳಗೋಡು, ತಲವಟ ಗ್ರಾಮ ಪಂಚಾಯತಿ ಕ್ಷೇತ್ರದ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಹೆಚ್ಚು ಕಾಡುತ್ತಿದೆ. ಫೋನ್ ಕರೆ ಮಾಡಬೇಕಾದರೆ ಗುಡ್ಡ, ಬೆಟ್ಟ ಹತ್ತಿ ಹೋಗಬೇಕು. ಅಲ್ಲಿ ಒಂದು ಪಾಯಿಂಟ್ ನೆಟ್ವರ್ಕ್ ಸಿಕ್ಕರೆ ಅದೃಷ್ಟ.

ನೋ ನೆಟ್ವರ್ಕ್, ನೋ ವೋಟಿಂಗ್; ಮಲೆನಾಡಿನಲ್ಲಿ ಅಭಿಯಾನ ಆರಂಭ
ಆನ್​ಲೈನ್​ ಪಾಠ ಕೇಳಲು ವಿದ್ಯಾರ್ಥಿಗಳು ಚಿಕ್ಕ ಮನೆ ರೀತಿ ಮಾಡಿಕೊಂಡಿದ್ದಾರೆ
TV9 Web
| Edited By: sandhya thejappa|

Updated on:Jul 14, 2021 | 4:23 PM

Share

ಶಿವಮೊಗ್ಗ: ಶರಾವತಿ ಹಿನ್ನೀರು ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಕಾಡುತ್ತಿರುವ ಹಿನ್ನೆಲೆ ಆಕ್ರೋಶಗೊಂಡಿರುವ ಸ್ಥಳೀಯರು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ನೋ ನೆಟ್ವರ್ಕ್, ನೋ ವೋಟಿಂಗ್ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದ್ದು, ಇದು ಚುನಾವಣೆ ಸಿದ್ಧತೆ, ಟಿಕೆಟ್ ಪೈಪೋಟಿಗೆ ಬಿದ್ದಿರುವ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ನಿದ್ದೆಗೆಡಿಸುವಂತೆ ಕಾಣುತ್ತಿದೆ.

ಸಾಗರ ತಾಲೂಕಿನ ಕುದರೂರು, ತುಮರಿ, ಶಂಕರ ಶಾನುಭೋಗ್, ಚನ್ನಗೊಂಡ, ಭಾನುಕುಳಿ, ಅರಳಗೋಡು, ತಲವಟ ಗ್ರಾಮ ಪಂಚಾಯತಿ ಕ್ಷೇತ್ರದ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಹೆಚ್ಚು ಕಾಡುತ್ತಿದೆ. ಫೋನ್ ಕರೆ ಮಾಡಬೇಕಾದರೆ ಗುಡ್ಡ, ಬೆಟ್ಟ ಹತ್ತಿ ಹೋಗಬೇಕು. ಅಲ್ಲಿ ಒಂದು ಪಾಯಿಂಟ್ ನೆಟ್ವರ್ಕ್ ಸಿಕ್ಕರೆ ಅದೃಷ್ಟ. ಈಗ ಮಳೆಗಾಲ ಇರುವುದರಿಂದ ಗುಡ್ಡ, ಬೆಟ್ಟದ ಮೇಲೆ ತೆರಳುವುದು ಅಸಾಧ್ಯ. ಇಲ್ಲಿ ನೆಟ್ವರ್ಕ್ ಸಮಸ್ಯೆ ಬಗ್ಗೆ ಗಮನ ಹರಿಸುವವರೆಗೂ ವೋಟು ನೀಡಲ್ಲ ಅಂತ ಗ್ರಾಮಸ್ಥರು ಹೇಳುತ್ತಿದ್ದಾರೆ.

ಕೊರೊನಾ ವೇಳೆಯಲ್ಲಿ ವಿದ್ಯಾರ್ಥಿಗಳು ಆನ್​ಲೈನ್​ ಮೂಲಕ ತರಗತಿ ಕೇಳಬೇಕು. ಆದರೆ ಮಕ್ಕಳು ನೆಟ್ವರ್ಕ್ ಸಿಗದೆ ಪರದಾಡುತ್ತಿದ್ದಾರೆ. ನೆಟ್ವರ್ಕ್ ಸಮಸ್ಯೆಗೆ ಪರಿಹಾರ ನೀಡುತ್ತೇವೆಂದು ಹೇಳಿ ಮೂರು ವರ್ಷ ಕಳೆದಿದೆ. ಆದರೆ ಈ ಸಮಸ್ಯೆಗೆ ಇನ್ನು ಪರಿಹಾರ ಸಿಕ್ಕಿಲ್ಲ. ಎಲ್ಲಿಯವರೆಗೆ ಈ ಸಮಸ್ಯೆ ಬಗೆ ಹರಿಸುವುದಿಲ್ಲವೋ ಅಲ್ಲಿಯವರೆಗೆ ವೋಟ್ ಹಾಕಲ್ಲ ಅಂತ ಕುದರೂರು ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಏಳು ಗ್ರಾಮದ ಜನರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ

ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ; ಸಚಿವ ಸುರೇಶ್ ಕುಮಾರ್

ವಿದ್ಯಾರ್ಥಿಗಳಿಗೆ ಆನ್​ಲೈನ್ ಕ್ಲಾಸ್​ಗಳಿಗೆ ಕೂರಲು ಮೊಬೈಲ್ ನೆಟ್​ವರ್ಕ್, ಅಂತರ್ಜಾಲ ಸಮಸ್ಯೆ ಪರಿಹರಿಸಿ: ಸಚಿವ ಸುರೇಶ್ ಕುಮಾರ್ ಮನವಿ

(No Network No Voting Campaign has started in Malnad Shivamogga)

Published On - 4:20 pm, Wed, 14 July 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​