AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ಗಳಲ್ಲಿ ಹೊಸ ಲಗೇಜ್​ ನಿಯಮ ಜಾರಿಗೆ ತಂದಿಲ್ಲ: ಕೆಎಸ್​ಆರ್​ಟಿಸಿ

ಹೊಸ ಲಗೇಜ್ ನಿಯಮ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದ ಸುದ್ದಿಗೆ ಪ್ರತಿಕ್ರಿಯಿಸಿ ಕೆಎಸ್ಆರ್ಟಿಸಿ ಸ್ಪಷ್ಟೀಕರಣ ನೀಡಿದೆ. ಹೊಸ ಲಗೇಜ್ ನಿಯಮಗಳನ್ನು ಜಾರಿಗೆ ತಂದಿಲ್ಲ ಎಂದು ಹೇಳಿದೆ. 1999ರಿಂದಲೇ ಲಗೇಜ್ ಸಾಗಣೆಗೆ ನಿಯಮಗಳಿವೆ ಎಂದು ತಿಳಿಸಿದೆ. 2022ರ ಅಕ್ಟೋಬರ್ 28ರಿಂದ ದರ ಪರಿಷ್ಕರಣೆ ಮತ್ತು 30 ಕೆಜಿ ವರೆಗೆ ಉಚಿತ ಲಗೇಜ್​ ಸಾಗಣೆಗೆ ಅವಕಾಶವಿದೆ. ಯಾವುದೇ ಹೊಸ ನಿಯಮಗಳಿಲ್ಲ ಎಂದು ಕೆಎಸ್ಆರ್ಟಿಸಿ ಸ್ಪಷ್ಟಪಡಿಸಿದೆ.

ಬಸ್​ಗಳಲ್ಲಿ ಹೊಸ ಲಗೇಜ್​ ನಿಯಮ ಜಾರಿಗೆ ತಂದಿಲ್ಲ: ಕೆಎಸ್​ಆರ್​ಟಿಸಿ
ಕೆಎಸ್​ಆರ್​ಟಿಸಿ
TV9 Web
| Updated By: ವಿವೇಕ ಬಿರಾದಾರ|

Updated on: Jul 29, 2025 | 9:31 PM

Share

ಬೆಂಗಳೂರು, ಜುಲೈ 29: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ನೂತನ ಲಗೇಜ್ ರೂಲ್ಸ್ (KSRTC New Luggage Rules) ಜಾರಿ ಮಾಡಿದೆ ಎಂದು ಸಾಮಾಜಿಕ ಜಾಲತಾಣ ಮತ್ತು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಸಂಬಂಧ ಕೆಎಸ್​ಆರ್​ಟಿಸಿ ಸ್ಪಷ್ಟೀಕರಣ ನೀಡಿದೆ. ಸಾಮಾಜಿಕ‌ ಜಾಲತಾಣ ಮತ್ತು ಕೆಲವೊಂದು ಮಾಧ್ಯಮಗಳಲ್ಲಿ ಕೆಎಸ್​ಆರ್​ಟಿಸಿಯಲ್ಲಿ ನೂತನ ಲಗೇಜ್ ನಿಯಮ ಜಾರಿ ಎಂದು ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿರುತ್ತದೆ. ನಿಗಮ ಯಾವುದೇ ಹೊಸ ಲಗೆಜ್​ ನಿಯಮಗಳನ್ನು ಜಾರಿಗೆ ತಂದಿಲ್ಲ ಎಂದು ಹೇಳಿದೆ.

ಕೆಎಸ್​ಆರ್​ಟಿಸಿ ಸ್ಪಷ್ಟನೆ

ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಲಗೇಜ್ / ಸರಕುಗಳನ್ನು ಸಾಗಿಸಲು ಹಿಂದಿನಿಂದಲೂ ವ್ಯವಸ್ಥೆ ಜಾರಿಯಿದ್ದು, ಅಂದರೆ ವಾಷಿಂಗ್ ಮಷಿನ್, ಫ್ರಿಡ್ಜ್, ಟ್ರಕ್ ಟಯರ್, ಅಲ್ಯೂಮಿನಿಯಂ ಪೈಪ್, ಕಬ್ಬಿಣದ ಪೈಪ್, ಪಾತ್ರೆ, ಬೆಕ್ಕು, ನಾಯಿ, ಮೊಲಗಳನ್ನು ಸಾಗಿಸಲು ಅವಕಾಶಗಳನ್ನು ದಿನಾಂಕ 05-11-1999 ರಿಂದಲೇ (ಬಸ್ಸಿನಲ್ಲಿ‌ರುವ ಸ್ಥಳಾವಕಾಶಕ್ಕೆ ಅನುಗುಣವಾಗಿ) ನಿಗಮದಲ್ಲಿ ಜಾರಿಯಲ್ಲಿರುತ್ತದೆ.”

ಈ ವ್ಯವಸ್ಥೆಯ ಅನುಷ್ಠಾನದಲ್ಲಿ ಕಾಲದಿಂದ ಕಾಲಕ್ಕೆ ದರಗಳ ಪರಿಷ್ಕರಣೆ, 30 ಕೆಜಿ ವರೆಗೆ ಲಗೇಜ್ ಕೊಂಡೊಯ್ಯಲು ಉಚಿತ ಅವಕಾಶ, ಸಾಗಿಸಬಹುದಾದ ವಸ್ತುಗಳ ಪ್ರಯಾಣ ಇತ್ಯಾದಿಗಳನ್ನು ಉಲ್ಲೇಖಿಸಿ ಪ್ರಸ್ತುತ ದಿನಾಂಕ: 28-10-2022 ರಿಂದ ಲಗೇಜ್ ನಿಯಮ / ಸುತ್ತೋಲೆ ಜಾರಿಯಲ್ಲಿರುತ್ತದೆ.”

ದಿನಾಂಕ: 28-10-2022 ರ ನಂತರ ಇತ್ತೀಚೆಗೆ ಯಾವುದೇ ಹೊಸ ಲಗೇಜ್ ನಿಯಮ / ಸುತ್ತೋಲೆಯನ್ನು ನಿಗಮದಲ್ಲಿ ಜಾರಿಗೆ ತಂದಿರುವುದಿಲ್ಲ ಎಂಬುದನ್ನು ತಮ್ಮ ಆದ್ಯ ಗಮನಕ್ಕೆ ತರಲಾಗಿದೆ” ಎಂದು ಪತ್ರಿಕಾ ಪ್ರಕರಟಣೆಯಲ್ಲಿ ತಿಳಿಸಿದೆ.

ಏನಿದು ನಿಯಮ ವಿವಾದ

ಕೆಎಸ್​ಆರ್​ಟಿಸಿ ಬಸ್​​ನಲ್ಲಿ 30 ಕೆಜಿಯವರೆಗೂ ಪ್ರಯಾಣಿಕರು ಉಚಿತವಾಗಿ ಲಗೇಜು ಉಚಿತವಾಗಿ ತೆಗೆದುಕೊಂಡು ಹೋಗಬಹುದಾಗಿದೆ. 30 ಕೆಜಿ ಮೇಲೆ ಲಗೇಜ್ ಇದ್ದರೆ ಹಣ ಪಾವತಿ ಮಾಡಬೇಕಿದೆ. 40 ಕೆಜಿ ತೂಕವಿರುವ ವಾಷಿಂಗ್ ಮಿಷಿನ್, ಫ್ರಿಡ್ಜ್, 25 ಕೆಜಿ ತೂಕದ ಖಾಲಿ ಕಂಟೈನರ್ ಬಸ್​​ನಲ್ಲಿ ಸಾಗಿಸಲೂ ಅವಕಾಶ ನೀಡಲಾಗಿದೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: ಆಗಸ್ಟ್​ 5ರಂದು ಕೆಎಸ್​​ಆರ್​​ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರಕ್ಕೆ ಕರೆ

ಕಬ್ಬಿಣ ಪೈಪ್ ಮೋಟಾರ್​ಗಳನ್ನೂ ಸಾಗಿಸಬಹುದು. ಮೊಲ, ನಾಯಿ ಮರಿ, ಬೆಕ್ಕು, ಪಕ್ಷಿಯನ್ನೂ ಸಾಗಿಸಬಹದು. ನಾಯಿಯನ್ನು ಸಾಗಿಸಬಹುದು. ನಾಯಿಯನ್ನು ಚೈನ್​ನಲ್ಲಿ ಬಿಗಿದು ಕಾಳಜಿಯೊಂದಿಗೆ ಬಸ್​​ನಲ್ಲಿ ಸಾಗಿಸಬಹುದು ಎಂದು ವರದಿಯಾಗಿತ್ತು. ಈ ವರದಿ ಸತ್ಯಕ್ಕೆ ದೂರವಾಗಿದೆ ಎಂದು ಕೆಎಸ್​ಆರ್​ಟಿಸಿ ಹೇಳಿದ್ದು, ಸ್ಪಷ್ಟೀಕರಣ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ