AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ಗಳಲ್ಲಿ ಹೊಸ ಲಗೇಜ್​ ನಿಯಮ ಜಾರಿಗೆ ತಂದಿಲ್ಲ: ಕೆಎಸ್​ಆರ್​ಟಿಸಿ

ಹೊಸ ಲಗೇಜ್ ನಿಯಮ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದ ಸುದ್ದಿಗೆ ಪ್ರತಿಕ್ರಿಯಿಸಿ ಕೆಎಸ್ಆರ್ಟಿಸಿ ಸ್ಪಷ್ಟೀಕರಣ ನೀಡಿದೆ. ಹೊಸ ಲಗೇಜ್ ನಿಯಮಗಳನ್ನು ಜಾರಿಗೆ ತಂದಿಲ್ಲ ಎಂದು ಹೇಳಿದೆ. 1999ರಿಂದಲೇ ಲಗೇಜ್ ಸಾಗಣೆಗೆ ನಿಯಮಗಳಿವೆ ಎಂದು ತಿಳಿಸಿದೆ. 2022ರ ಅಕ್ಟೋಬರ್ 28ರಿಂದ ದರ ಪರಿಷ್ಕರಣೆ ಮತ್ತು 30 ಕೆಜಿ ವರೆಗೆ ಉಚಿತ ಲಗೇಜ್​ ಸಾಗಣೆಗೆ ಅವಕಾಶವಿದೆ. ಯಾವುದೇ ಹೊಸ ನಿಯಮಗಳಿಲ್ಲ ಎಂದು ಕೆಎಸ್ಆರ್ಟಿಸಿ ಸ್ಪಷ್ಟಪಡಿಸಿದೆ.

ಬಸ್​ಗಳಲ್ಲಿ ಹೊಸ ಲಗೇಜ್​ ನಿಯಮ ಜಾರಿಗೆ ತಂದಿಲ್ಲ: ಕೆಎಸ್​ಆರ್​ಟಿಸಿ
ಕೆಎಸ್​ಆರ್​ಟಿಸಿ
TV9 Web
| Edited By: |

Updated on: Jul 29, 2025 | 9:31 PM

Share

ಬೆಂಗಳೂರು, ಜುಲೈ 29: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ನೂತನ ಲಗೇಜ್ ರೂಲ್ಸ್ (KSRTC New Luggage Rules) ಜಾರಿ ಮಾಡಿದೆ ಎಂದು ಸಾಮಾಜಿಕ ಜಾಲತಾಣ ಮತ್ತು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಸಂಬಂಧ ಕೆಎಸ್​ಆರ್​ಟಿಸಿ ಸ್ಪಷ್ಟೀಕರಣ ನೀಡಿದೆ. ಸಾಮಾಜಿಕ‌ ಜಾಲತಾಣ ಮತ್ತು ಕೆಲವೊಂದು ಮಾಧ್ಯಮಗಳಲ್ಲಿ ಕೆಎಸ್​ಆರ್​ಟಿಸಿಯಲ್ಲಿ ನೂತನ ಲಗೇಜ್ ನಿಯಮ ಜಾರಿ ಎಂದು ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿರುತ್ತದೆ. ನಿಗಮ ಯಾವುದೇ ಹೊಸ ಲಗೆಜ್​ ನಿಯಮಗಳನ್ನು ಜಾರಿಗೆ ತಂದಿಲ್ಲ ಎಂದು ಹೇಳಿದೆ.

ಕೆಎಸ್​ಆರ್​ಟಿಸಿ ಸ್ಪಷ್ಟನೆ

ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಲಗೇಜ್ / ಸರಕುಗಳನ್ನು ಸಾಗಿಸಲು ಹಿಂದಿನಿಂದಲೂ ವ್ಯವಸ್ಥೆ ಜಾರಿಯಿದ್ದು, ಅಂದರೆ ವಾಷಿಂಗ್ ಮಷಿನ್, ಫ್ರಿಡ್ಜ್, ಟ್ರಕ್ ಟಯರ್, ಅಲ್ಯೂಮಿನಿಯಂ ಪೈಪ್, ಕಬ್ಬಿಣದ ಪೈಪ್, ಪಾತ್ರೆ, ಬೆಕ್ಕು, ನಾಯಿ, ಮೊಲಗಳನ್ನು ಸಾಗಿಸಲು ಅವಕಾಶಗಳನ್ನು ದಿನಾಂಕ 05-11-1999 ರಿಂದಲೇ (ಬಸ್ಸಿನಲ್ಲಿ‌ರುವ ಸ್ಥಳಾವಕಾಶಕ್ಕೆ ಅನುಗುಣವಾಗಿ) ನಿಗಮದಲ್ಲಿ ಜಾರಿಯಲ್ಲಿರುತ್ತದೆ.”

ಈ ವ್ಯವಸ್ಥೆಯ ಅನುಷ್ಠಾನದಲ್ಲಿ ಕಾಲದಿಂದ ಕಾಲಕ್ಕೆ ದರಗಳ ಪರಿಷ್ಕರಣೆ, 30 ಕೆಜಿ ವರೆಗೆ ಲಗೇಜ್ ಕೊಂಡೊಯ್ಯಲು ಉಚಿತ ಅವಕಾಶ, ಸಾಗಿಸಬಹುದಾದ ವಸ್ತುಗಳ ಪ್ರಯಾಣ ಇತ್ಯಾದಿಗಳನ್ನು ಉಲ್ಲೇಖಿಸಿ ಪ್ರಸ್ತುತ ದಿನಾಂಕ: 28-10-2022 ರಿಂದ ಲಗೇಜ್ ನಿಯಮ / ಸುತ್ತೋಲೆ ಜಾರಿಯಲ್ಲಿರುತ್ತದೆ.”

ದಿನಾಂಕ: 28-10-2022 ರ ನಂತರ ಇತ್ತೀಚೆಗೆ ಯಾವುದೇ ಹೊಸ ಲಗೇಜ್ ನಿಯಮ / ಸುತ್ತೋಲೆಯನ್ನು ನಿಗಮದಲ್ಲಿ ಜಾರಿಗೆ ತಂದಿರುವುದಿಲ್ಲ ಎಂಬುದನ್ನು ತಮ್ಮ ಆದ್ಯ ಗಮನಕ್ಕೆ ತರಲಾಗಿದೆ” ಎಂದು ಪತ್ರಿಕಾ ಪ್ರಕರಟಣೆಯಲ್ಲಿ ತಿಳಿಸಿದೆ.

ಏನಿದು ನಿಯಮ ವಿವಾದ

ಕೆಎಸ್​ಆರ್​ಟಿಸಿ ಬಸ್​​ನಲ್ಲಿ 30 ಕೆಜಿಯವರೆಗೂ ಪ್ರಯಾಣಿಕರು ಉಚಿತವಾಗಿ ಲಗೇಜು ಉಚಿತವಾಗಿ ತೆಗೆದುಕೊಂಡು ಹೋಗಬಹುದಾಗಿದೆ. 30 ಕೆಜಿ ಮೇಲೆ ಲಗೇಜ್ ಇದ್ದರೆ ಹಣ ಪಾವತಿ ಮಾಡಬೇಕಿದೆ. 40 ಕೆಜಿ ತೂಕವಿರುವ ವಾಷಿಂಗ್ ಮಿಷಿನ್, ಫ್ರಿಡ್ಜ್, 25 ಕೆಜಿ ತೂಕದ ಖಾಲಿ ಕಂಟೈನರ್ ಬಸ್​​ನಲ್ಲಿ ಸಾಗಿಸಲೂ ಅವಕಾಶ ನೀಡಲಾಗಿದೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: ಆಗಸ್ಟ್​ 5ರಂದು ಕೆಎಸ್​​ಆರ್​​ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರಕ್ಕೆ ಕರೆ

ಕಬ್ಬಿಣ ಪೈಪ್ ಮೋಟಾರ್​ಗಳನ್ನೂ ಸಾಗಿಸಬಹುದು. ಮೊಲ, ನಾಯಿ ಮರಿ, ಬೆಕ್ಕು, ಪಕ್ಷಿಯನ್ನೂ ಸಾಗಿಸಬಹದು. ನಾಯಿಯನ್ನು ಸಾಗಿಸಬಹುದು. ನಾಯಿಯನ್ನು ಚೈನ್​ನಲ್ಲಿ ಬಿಗಿದು ಕಾಳಜಿಯೊಂದಿಗೆ ಬಸ್​​ನಲ್ಲಿ ಸಾಗಿಸಬಹುದು ಎಂದು ವರದಿಯಾಗಿತ್ತು. ಈ ವರದಿ ಸತ್ಯಕ್ಕೆ ದೂರವಾಗಿದೆ ಎಂದು ಕೆಎಸ್​ಆರ್​ಟಿಸಿ ಹೇಳಿದ್ದು, ಸ್ಪಷ್ಟೀಕರಣ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​