AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಜೆಡಿಎಸ್ ಶಾಸಕರು ಕಾಂಗ್ರೆಸ್​ಗೆ ಹೋಗುತ್ತಾರಾ?; ಅಲ್ಲಗಳೆದ ದೇವೇಗೌಡ; ಪಕ್ಷ ಮುಗಿಸಲು ಯಾರಿಂದಲೂ ಅಸಾಧ್ಯ ಎಂದ ಮಾಜಿ ಪ್ರಧಾನಿ

JDS vs Congress political fight: ಜೆಡಿಎಸ್​ನ ಹನ್ನೊಂದು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಚನ್ನಗಿರಿಯ ಕೈ ಶಾಸಕ ಶಿವಗಂಗಾ ಬಸವರಾಜ ಹೇಳಿದ್ದಾರೆ. ಈ ವಿಚಾರವು ಜೆಡಿಎಸ್ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಜನವರಿ 12ರಂದು ನಡೆದ ಜೆಡಿಎಸ್ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಇದೆಲ್ಲವೂ ಸುಳ್ಳು ಎಂದು ಕುಮಾರಸ್ವಾಮಿ ಮತ್ತು ದೇವೇಗೌಡರು ಹೇಳಿದ್ದಾರೆ.

11 ಜೆಡಿಎಸ್ ಶಾಸಕರು ಕಾಂಗ್ರೆಸ್​ಗೆ ಹೋಗುತ್ತಾರಾ?; ಅಲ್ಲಗಳೆದ ದೇವೇಗೌಡ; ಪಕ್ಷ ಮುಗಿಸಲು ಯಾರಿಂದಲೂ ಅಸಾಧ್ಯ ಎಂದ ಮಾಜಿ ಪ್ರಧಾನಿ
ದೇವೇಗೌಡ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 13, 2025 | 8:07 AM

Share

ಬೆಂಗಳೂರು, ಜನವರಿ 13: ಜೆಡಿಎಸ್ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಎಂದು ಹರಿದಾಡುತ್ತಿರುವ ಸುದ್ದಿಯನ್ನು ಜೆಡಿಎಸ್ ನಾಯಕರು ಬಲವಾಗಿ ಅಲ್ಲಗಳೆದಿದ್ದಾರೆ. ನಿನ್ನೆ ಭಾನುವಾರ ನಡೆದ ಜೆಡಿಎಸ್ ಸಭೆಯಲ್ಲಿ ಆಪರೇಷನ್ ಹಸ್ತದ ವಿಚಾರ ಪ್ರಸ್ತಾಪವಾಗಿತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರು ಈ ಸುದ್ದಿಯನ್ನು ತಳ್ಳಿಹಾಕಿದ್ದು, ಯಾರೂ ಕೂಡ ಆತಂಕ ಪಡುವ ಅಗತ್ಯ ಇಲ್ಲ ಎಂದಿದ್ದಾರೆ.

ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಅವರು 11 ಜೆಡಿಎಸ್ ಶಾಸಕರು ಸದ್ಯದಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂದು ಹೇಳಿ ರಾಜ್ಯ ರಾಜಕೀಯದಲ್ಲಿ ಧೂಳೆಬ್ಬಿಸಿದ್ದಾರೆ. ಅವರ ಈ ಹೇಳಿಕೆಯು ಜೆಡಿಎಸ್ ಪಾಳಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಇರುವ ಜೆಡಿಎಸ್ ಶಾಸಕರ ಸಂಖ್ಯೆ 18 ಮಾತ್ರವೇ. ಇದರಲ್ಲಿ 11 ಶಾಸಕರು ಪಕ್ಷ ತೊರೆಯುತ್ತಾರೆನ್ನುವುದು ದೊಡ್ಡ ಸಂಗತಿ. ನಿನ್ನೆ ಜೆಡಿಎಸ್ ಸಭೆಯಲ್ಲಿ ಕುಮಾರಸ್ವಾಮಿ ಮತ್ತು ದೇವೇಗೌಡರು ಜೆಡಿಎಸ್ ಶಾಸಕರು ಮತ್ತು ಮುಖಂಡರಿಗೆ ಧೈರ್ಯ ತುಂಬವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: ಆರೋಗ್ಯಕರ ಟೀಕೆಗಳನ್ನ ಸ್ವಾಗತಿಸುತ್ತೇನೆ: ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್ ಎಂದ ಸಿದ್ದರಾಮಯ್ಯ

ಆಮಿಷ ಗಳನ್ನು ಒಡ್ಡಿ ಶಾಸಕರನ್ನು ಸಂಪರ್ಕ ಮಾಡುವ ಪ್ರಯತ್ನ ನಡೆಯುತ್ತಿದೆ. ಆದರೆ, ಆ ಪ್ರಯತ್ನ ಈಡೇರುವುದಿಲ್ಲ ಎಂದು ಕೇಂದ್ರ ಸಚಿವರೂ ಆದ ಕುಮಾರಸ್ವಾಮಿ ಹೇಳಿದ್ದಾರೆ. ‘ಜೆಡಿಎಸ್ ಪಕ್ಷದ ಬಗ್ಗೆ ಕಾಂಗ್ರೆಸ್​ನಲ್ಲಿ ಕೆಲವರು ಮಾತನಾಡುತ್ತಿದ್ದಾರೆ. ಅವರು ಯಾವ ರೀತಿ ಅಡ್ಜಸ್ಟ್ಮೆಂಟ್ ಮಾಡಿಕೊಂಡು ಚುನಾವಣೆಯಲ್ಲಿ ಗೆದ್ದಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಅಂಥವರ ಮಾತಿಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ’ ಎಂದು ಜೆಡಿಎಸ್ ಸಭೆಯಲ್ಲಿ ಕುಮಾರಸ್ವಾಮಿ ತಿಳಿ ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಜೆಡಿಎಸ್ ಪಕ್ಷವನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಕುಮಾರಸ್ವಾಮಿ ಅವರನ್ನು ಮುಗಿಸಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ. ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕುಮಾರಸ್ವಾಮಿ ಅವರನ್ನಾಗಲೀ, ಜೆಡಿಎಸ್ ಪಕ್ಷವನ್ನಾಗಲೀ ಮುಗಿಸಲು ಸಾಧ್ಯವೇ ಇಲ್ಲ. ಕುಮಾರಸ್ವಾಮಿ ಅವರ ಹಿಂದೆ ಕಾರ್ಯಕರ್ತರ ದೊಡ್ಡ ಪಡೆಯೇ ಇದೆ ಎಂದು ಮಾಜಿ ಪ್ರಧಾನಿಗಳು ನಿನ್ನೆಯ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಆಪರೇಷನ್ ಹಸ್ತ ಭೀತಿ..ಜೆಡಿಎಸ್​​ ಫುಲ್​ ಅಲರ್ಟ್​: ರಾಜ್ಯಾಧ್ಯಕ್ಷರ ಆಯ್ಕೆಗೆ ಮುಹೂರ್ತ ಫಿಕ್ಸ್

ಜೆಡಿಎಸ್ ಪಕ್ಷದ ನೂತನ ರಾಜ್ಯಾಧ್ಯಕ್ಷ ಆಯ್ಕೆ ಏಪ್ರಿಲ್ ತಿಂಗಳ ಒಳಗೆ ನಡೆಯುವ ಸಾಧ್ಯತೆ ಇದೆ. ಸದ್ಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಕುಮಾರಸ್ವಾಮಿ ಇದ್ದಾರೆ. ಕೇಂದ್ರ ಸಚಿವರೂ ಅವರಾಗಿರುವುದರಿಂದ ರಾಜ್ಯಾಧ್ಯಕ್ಷ ಹೊಣೆಗಾರಿಕೆ ಬೇರೊಬ್ಬರಿಗೆ ವಹಿಸಲಾಗುತ್ತದೆ. ವೋಟಿಂಗ್ ಮೂಲಕ ನೂತನ ರಾಜ್ಯಾಧ್ಯಕ್ಷರ ಆಯ್ಕೆ ನಡೆಯುವ ಸಾಧ್ಯತೆ ಇದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ