AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಅರ್ಜಿ ಸಲ್ಲಿಕೆ ಇಲ್ಲ! ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ

Karnataka Rajyotsava Award 2025: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಈ ಬಾರಿ ಕೈಬಿಟ್ಟಿದೆ. ಅದರ ಬದಲಿಗೆ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಿದ್ದು, ಈ ಸಮಿತಿಯು ಅರ್ಹ 70 ಮಂದಿ ಸಾಧಕರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಅಧಿಕೃತ ಘೋಷಣೆ ಮಾಡಿದ್ದಾರೆ.

ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಅರ್ಜಿ ಸಲ್ಲಿಕೆ ಇಲ್ಲ! ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Oct 09, 2025 | 9:46 AM

Share

ಬೆಂಗಳೂರು, ಅಕ್ಟೋಬರ್ 9: ಇನ್ನೇನು ಕೆಲವೇ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ (Kannada Rajyotsava) ಬರುತ್ತಿದೆ. ಈ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲ್ಪಡುತ್ತಿದ್ದು 70 ಮಂದಿ ಅರ್ಹ ಸಾಧಕರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award) ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಅಚ್ಚರಿಯ ವಿಚಾರವೆಂದರೆ, ಇದೇ ಮೊದಲ ಬಾರಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಕೈಬಿಡಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.

ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಅಲ್ಲಿಸುವ ಪ್ರಕ್ರಿಯೆ ಇರುವುದಿಲ್ಲ. ಬದಲಿಗೆ ಇಲಾಖೆಯಿಂದ ರಚಿಸಲಾಗುವ ಸಲಹಾ ಸಮಿತಿ ಮತ್ತು ಉನ್ನತ ಆಯ್ಕೆ ಸಮಿತಿಗಳು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಿವೆ ಎಂದು ಸಚಿವರು ತಿಳಿಸಿದ್ದಾರೆ.

70 ಮಂದಿ ಅರ್ಹ ಗಣ್ಯರಿಗೆ ಈ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಆಯ್ಕೆ ಸಮಿತಿಯು ಅರ್ಹರ ಪಟ್ಟಿ ಸಿದ್ಧಪಡಿಸಲಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳ ಬಗ್ಗೆ ನಿರ್ಧಾರವನ್ನು ಆಯ್ಕೆ ಸಮಿತಿಯೇ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸಭೆಯಲ್ಲಿ ಮಹತ್ವದ ನಿರ್ಣಯ: ಮಾನದಂಡ ಪಾಲಿಸದೆ ಮನೆ ಕಟ್ಟಿದವರಿಗೆ ಗುಡ್​ ನ್ಯೂಸ್​

ಕನ್ನಡ ರಾಜ್ಯೋತ್ಸವ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣೆಗೆಗಳನ್ನು ಒಳಗೊಂಡಿರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ
ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ