AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಅರ್ಜಿ ಸಲ್ಲಿಕೆ ಇಲ್ಲ! ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ

Karnataka Rajyotsava Award 2025: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಈ ಬಾರಿ ಕೈಬಿಟ್ಟಿದೆ. ಅದರ ಬದಲಿಗೆ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಿದ್ದು, ಈ ಸಮಿತಿಯು ಅರ್ಹ 70 ಮಂದಿ ಸಾಧಕರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಅಧಿಕೃತ ಘೋಷಣೆ ಮಾಡಿದ್ದಾರೆ.

ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಅರ್ಜಿ ಸಲ್ಲಿಕೆ ಇಲ್ಲ! ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Oct 09, 2025 | 9:46 AM

Share

ಬೆಂಗಳೂರು, ಅಕ್ಟೋಬರ್ 9: ಇನ್ನೇನು ಕೆಲವೇ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ (Kannada Rajyotsava) ಬರುತ್ತಿದೆ. ಈ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲ್ಪಡುತ್ತಿದ್ದು 70 ಮಂದಿ ಅರ್ಹ ಸಾಧಕರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award) ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಅಚ್ಚರಿಯ ವಿಚಾರವೆಂದರೆ, ಇದೇ ಮೊದಲ ಬಾರಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಕೈಬಿಡಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.

ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಅಲ್ಲಿಸುವ ಪ್ರಕ್ರಿಯೆ ಇರುವುದಿಲ್ಲ. ಬದಲಿಗೆ ಇಲಾಖೆಯಿಂದ ರಚಿಸಲಾಗುವ ಸಲಹಾ ಸಮಿತಿ ಮತ್ತು ಉನ್ನತ ಆಯ್ಕೆ ಸಮಿತಿಗಳು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಿವೆ ಎಂದು ಸಚಿವರು ತಿಳಿಸಿದ್ದಾರೆ.

70 ಮಂದಿ ಅರ್ಹ ಗಣ್ಯರಿಗೆ ಈ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಆಯ್ಕೆ ಸಮಿತಿಯು ಅರ್ಹರ ಪಟ್ಟಿ ಸಿದ್ಧಪಡಿಸಲಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳ ಬಗ್ಗೆ ನಿರ್ಧಾರವನ್ನು ಆಯ್ಕೆ ಸಮಿತಿಯೇ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸಭೆಯಲ್ಲಿ ಮಹತ್ವದ ನಿರ್ಣಯ: ಮಾನದಂಡ ಪಾಲಿಸದೆ ಮನೆ ಕಟ್ಟಿದವರಿಗೆ ಗುಡ್​ ನ್ಯೂಸ್​

ಕನ್ನಡ ರಾಜ್ಯೋತ್ಸವ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣೆಗೆಗಳನ್ನು ಒಳಗೊಂಡಿರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ