ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಅರ್ಜಿ ಸಲ್ಲಿಕೆ ಇಲ್ಲ! ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ

Karnataka Rajyotsava Award 2025: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಈ ಬಾರಿ ಕೈಬಿಟ್ಟಿದೆ. ಅದರ ಬದಲಿಗೆ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಿದ್ದು, ಈ ಸಮಿತಿಯು ಅರ್ಹ 70 ಮಂದಿ ಸಾಧಕರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಅಧಿಕೃತ ಘೋಷಣೆ ಮಾಡಿದ್ದಾರೆ.

ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಅರ್ಜಿ ಸಲ್ಲಿಕೆ ಇಲ್ಲ! ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ

Updated on: Oct 09, 2025 | 9:46 AM

ಬೆಂಗಳೂರು, ಅಕ್ಟೋಬರ್ 9: ಇನ್ನೇನು ಕೆಲವೇ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ (Kannada Rajyotsava) ಬರುತ್ತಿದೆ. ಈ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲ್ಪಡುತ್ತಿದ್ದು 70 ಮಂದಿ ಅರ್ಹ ಸಾಧಕರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award) ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಅಚ್ಚರಿಯ ವಿಚಾರವೆಂದರೆ, ಇದೇ ಮೊದಲ ಬಾರಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಕೈಬಿಡಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.

ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಅಲ್ಲಿಸುವ ಪ್ರಕ್ರಿಯೆ ಇರುವುದಿಲ್ಲ. ಬದಲಿಗೆ ಇಲಾಖೆಯಿಂದ ರಚಿಸಲಾಗುವ ಸಲಹಾ ಸಮಿತಿ ಮತ್ತು ಉನ್ನತ ಆಯ್ಕೆ ಸಮಿತಿಗಳು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಿವೆ ಎಂದು ಸಚಿವರು ತಿಳಿಸಿದ್ದಾರೆ.

70 ಮಂದಿ ಅರ್ಹ ಗಣ್ಯರಿಗೆ ಈ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಆಯ್ಕೆ ಸಮಿತಿಯು ಅರ್ಹರ ಪಟ್ಟಿ ಸಿದ್ಧಪಡಿಸಲಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳ ಬಗ್ಗೆ ನಿರ್ಧಾರವನ್ನು ಆಯ್ಕೆ ಸಮಿತಿಯೇ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸಭೆಯಲ್ಲಿ ಮಹತ್ವದ ನಿರ್ಣಯ: ಮಾನದಂಡ ಪಾಲಿಸದೆ ಮನೆ ಕಟ್ಟಿದವರಿಗೆ ಗುಡ್​ ನ್ಯೂಸ್​

ಕನ್ನಡ ರಾಜ್ಯೋತ್ಸವ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣೆಗೆಗಳನ್ನು ಒಳಗೊಂಡಿರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ