AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮಾಣ ವಚನಕ್ಕೆ ಅನುಮತಿ ಸಿಕ್ಕಿಲ್ಲ, ಇದು ರಾಜಕೀಯ ಹುನ್ನಾರ -ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಜೂನ್ 7ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅಡ್ಡಿಯಾಗಿದೆ. ಇದರ ಹಿಂದೆ ರಾಜಕೀಯ ಹುನ್ನಾರ ಇರುವುದು ಸ್ಪಷ್ಟವಾಗಿದೆ ಎಂದು ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅನುಮತಿಗಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆ. ಪೊಲೀಸರಿಗೂ ಮನವಿ ಮಾಡಿದ್ದೆ. ಆದ್ರೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಜೂನ್ 8ರವರೆಗೂ ಯಾವುದಕ್ಕೂ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಜೂನ್ 7ರಂದು ಕಾರ್ಯಕ್ರಮಕ್ಕೆ […]

ಪ್ರಮಾಣ ವಚನಕ್ಕೆ ಅನುಮತಿ ಸಿಕ್ಕಿಲ್ಲ, ಇದು ರಾಜಕೀಯ ಹುನ್ನಾರ -ಡಿಕೆಶಿ
ಸಾಧು ಶ್ರೀನಾಥ್​
| Edited By: |

Updated on:Jun 01, 2020 | 3:02 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಜೂನ್ 7ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅಡ್ಡಿಯಾಗಿದೆ. ಇದರ ಹಿಂದೆ ರಾಜಕೀಯ ಹುನ್ನಾರ ಇರುವುದು ಸ್ಪಷ್ಟವಾಗಿದೆ ಎಂದು ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅನುಮತಿಗಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆ. ಪೊಲೀಸರಿಗೂ ಮನವಿ ಮಾಡಿದ್ದೆ. ಆದ್ರೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಜೂನ್ 8ರವರೆಗೂ ಯಾವುದಕ್ಕೂ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಜೂನ್ 7ರಂದು ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದಿದ್ದಾರೆ. KPCC ಅಧ್ಯಕ್ಷರಾಗಿ ಪದಗ್ರಹಣಕ್ಕೆ‌ ಸರ್ಕಾರ ಉದ್ದೇಶ ಪೂರ್ವಕವಾಗಿ ಅಡ್ಡಿ ಮಾಡುತ್ತಿದೆ ಎಂದು ಡಿಕೆಶಿ ಆರೋಪಿಸಿದರು.

ನಮ್ಮ ಕಾರ್ಯಕರ್ತರು ಜೂನ್ 7 ರಂದು ತಯಾರಿ ಮಾಡಿಕೊಂಡಿದ್ದಾರೆ. ಅಂದು ನಾವು ಕಾರ್ಯಕ್ರಮ ಮಾಡಿಕೊಳ್ಳಲು ಅಗಾದೆ ಇರಬಹುದು. ಜೂನ್ 8 ರಂದು ಲಾಕ್​ಡೌನ್ ಮುಗಿದ ಮೇಲು ಆಗಬಹುದು. ಕಾರ್ಯಕ್ರಮದಲ್ಲಿ 150 ಜನ ಸೇರೋಕು ನಮಗೆ ಅವಕಾಶ ಇಲ್ಲ. ಕಾನೂನು ವಿರುದ್ಧವಾಗಿ ನಾವು ಯಾವುದೇ ಕೆಲಸಗಳನ್ನ ಮಾಡುವುದಿಲ್ಲ.

ನಾನು ಅಧ್ಯಕ್ಷನಾದ್ರೂ ನಾನು ಕಾರ್ಯಕರ್ತ. ಸಿಎಂ ಹಾಗೂ ಗೃಹ ಸಚಿವರ ಬಳಿ ನಾನು ಕೇಳುತ್ತೇನೆ. ಅಲ್ಲಿಯವರೆಗೂ ನಿಮ್ಮ ನಿಮ್ಮ ಕೆಲಸಗಳನ್ನ ನೀವು ಮಾಡಿಕೊಂಡು ಹೋಗಿ. ಸರ್ಕಾರ ಅನುಮತಿ ಕೊಟ್ಟ ನಂತರ ದಿನಾಂಕವನ್ನ ಹೇಳುತ್ತೇವೆ. ನಮ್ಮ ಪಕ್ಷ ಜವಾಬ್ದಾರಿಯುತ ಪಕ್ಷವಾಗಿದೆ ಎಂದರು.

Published On - 2:28 pm, Mon, 1 June 20

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​