AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮಾಣ ವಚನಕ್ಕೆ ಅನುಮತಿ ಸಿಕ್ಕಿಲ್ಲ, ಇದು ರಾಜಕೀಯ ಹುನ್ನಾರ -ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಜೂನ್ 7ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅಡ್ಡಿಯಾಗಿದೆ. ಇದರ ಹಿಂದೆ ರಾಜಕೀಯ ಹುನ್ನಾರ ಇರುವುದು ಸ್ಪಷ್ಟವಾಗಿದೆ ಎಂದು ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅನುಮತಿಗಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆ. ಪೊಲೀಸರಿಗೂ ಮನವಿ ಮಾಡಿದ್ದೆ. ಆದ್ರೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಜೂನ್ 8ರವರೆಗೂ ಯಾವುದಕ್ಕೂ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಜೂನ್ 7ರಂದು ಕಾರ್ಯಕ್ರಮಕ್ಕೆ […]

ಪ್ರಮಾಣ ವಚನಕ್ಕೆ ಅನುಮತಿ ಸಿಕ್ಕಿಲ್ಲ, ಇದು ರಾಜಕೀಯ ಹುನ್ನಾರ -ಡಿಕೆಶಿ
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Jun 01, 2020 | 3:02 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಜೂನ್ 7ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅಡ್ಡಿಯಾಗಿದೆ. ಇದರ ಹಿಂದೆ ರಾಜಕೀಯ ಹುನ್ನಾರ ಇರುವುದು ಸ್ಪಷ್ಟವಾಗಿದೆ ಎಂದು ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅನುಮತಿಗಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆ. ಪೊಲೀಸರಿಗೂ ಮನವಿ ಮಾಡಿದ್ದೆ. ಆದ್ರೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಜೂನ್ 8ರವರೆಗೂ ಯಾವುದಕ್ಕೂ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಜೂನ್ 7ರಂದು ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದಿದ್ದಾರೆ. KPCC ಅಧ್ಯಕ್ಷರಾಗಿ ಪದಗ್ರಹಣಕ್ಕೆ‌ ಸರ್ಕಾರ ಉದ್ದೇಶ ಪೂರ್ವಕವಾಗಿ ಅಡ್ಡಿ ಮಾಡುತ್ತಿದೆ ಎಂದು ಡಿಕೆಶಿ ಆರೋಪಿಸಿದರು.

ನಮ್ಮ ಕಾರ್ಯಕರ್ತರು ಜೂನ್ 7 ರಂದು ತಯಾರಿ ಮಾಡಿಕೊಂಡಿದ್ದಾರೆ. ಅಂದು ನಾವು ಕಾರ್ಯಕ್ರಮ ಮಾಡಿಕೊಳ್ಳಲು ಅಗಾದೆ ಇರಬಹುದು. ಜೂನ್ 8 ರಂದು ಲಾಕ್​ಡೌನ್ ಮುಗಿದ ಮೇಲು ಆಗಬಹುದು. ಕಾರ್ಯಕ್ರಮದಲ್ಲಿ 150 ಜನ ಸೇರೋಕು ನಮಗೆ ಅವಕಾಶ ಇಲ್ಲ. ಕಾನೂನು ವಿರುದ್ಧವಾಗಿ ನಾವು ಯಾವುದೇ ಕೆಲಸಗಳನ್ನ ಮಾಡುವುದಿಲ್ಲ.

ನಾನು ಅಧ್ಯಕ್ಷನಾದ್ರೂ ನಾನು ಕಾರ್ಯಕರ್ತ. ಸಿಎಂ ಹಾಗೂ ಗೃಹ ಸಚಿವರ ಬಳಿ ನಾನು ಕೇಳುತ್ತೇನೆ. ಅಲ್ಲಿಯವರೆಗೂ ನಿಮ್ಮ ನಿಮ್ಮ ಕೆಲಸಗಳನ್ನ ನೀವು ಮಾಡಿಕೊಂಡು ಹೋಗಿ. ಸರ್ಕಾರ ಅನುಮತಿ ಕೊಟ್ಟ ನಂತರ ದಿನಾಂಕವನ್ನ ಹೇಳುತ್ತೇವೆ. ನಮ್ಮ ಪಕ್ಷ ಜವಾಬ್ದಾರಿಯುತ ಪಕ್ಷವಾಗಿದೆ ಎಂದರು.

Published On - 2:28 pm, Mon, 1 June 20

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?