ಪ್ರಮಾಣ ವಚನಕ್ಕೆ ಅನುಮತಿ ಸಿಕ್ಕಿಲ್ಲ, ಇದು ರಾಜಕೀಯ ಹುನ್ನಾರ -ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಜೂನ್ 7ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅಡ್ಡಿಯಾಗಿದೆ. ಇದರ ಹಿಂದೆ ರಾಜಕೀಯ ಹುನ್ನಾರ ಇರುವುದು ಸ್ಪಷ್ಟವಾಗಿದೆ ಎಂದು ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅನುಮತಿಗಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆ. ಪೊಲೀಸರಿಗೂ ಮನವಿ ಮಾಡಿದ್ದೆ. ಆದ್ರೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಜೂನ್ 8ರವರೆಗೂ ಯಾವುದಕ್ಕೂ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಜೂನ್ 7ರಂದು ಕಾರ್ಯಕ್ರಮಕ್ಕೆ […]

ಪ್ರಮಾಣ ವಚನಕ್ಕೆ ಅನುಮತಿ ಸಿಕ್ಕಿಲ್ಲ, ಇದು ರಾಜಕೀಯ ಹುನ್ನಾರ -ಡಿಕೆಶಿ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 01, 2020 | 3:02 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಜೂನ್ 7ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅಡ್ಡಿಯಾಗಿದೆ. ಇದರ ಹಿಂದೆ ರಾಜಕೀಯ ಹುನ್ನಾರ ಇರುವುದು ಸ್ಪಷ್ಟವಾಗಿದೆ ಎಂದು ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅನುಮತಿಗಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆ. ಪೊಲೀಸರಿಗೂ ಮನವಿ ಮಾಡಿದ್ದೆ. ಆದ್ರೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಜೂನ್ 8ರವರೆಗೂ ಯಾವುದಕ್ಕೂ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಜೂನ್ 7ರಂದು ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದಿದ್ದಾರೆ. KPCC ಅಧ್ಯಕ್ಷರಾಗಿ ಪದಗ್ರಹಣಕ್ಕೆ‌ ಸರ್ಕಾರ ಉದ್ದೇಶ ಪೂರ್ವಕವಾಗಿ ಅಡ್ಡಿ ಮಾಡುತ್ತಿದೆ ಎಂದು ಡಿಕೆಶಿ ಆರೋಪಿಸಿದರು.

ನಮ್ಮ ಕಾರ್ಯಕರ್ತರು ಜೂನ್ 7 ರಂದು ತಯಾರಿ ಮಾಡಿಕೊಂಡಿದ್ದಾರೆ. ಅಂದು ನಾವು ಕಾರ್ಯಕ್ರಮ ಮಾಡಿಕೊಳ್ಳಲು ಅಗಾದೆ ಇರಬಹುದು. ಜೂನ್ 8 ರಂದು ಲಾಕ್​ಡೌನ್ ಮುಗಿದ ಮೇಲು ಆಗಬಹುದು. ಕಾರ್ಯಕ್ರಮದಲ್ಲಿ 150 ಜನ ಸೇರೋಕು ನಮಗೆ ಅವಕಾಶ ಇಲ್ಲ. ಕಾನೂನು ವಿರುದ್ಧವಾಗಿ ನಾವು ಯಾವುದೇ ಕೆಲಸಗಳನ್ನ ಮಾಡುವುದಿಲ್ಲ.

ನಾನು ಅಧ್ಯಕ್ಷನಾದ್ರೂ ನಾನು ಕಾರ್ಯಕರ್ತ. ಸಿಎಂ ಹಾಗೂ ಗೃಹ ಸಚಿವರ ಬಳಿ ನಾನು ಕೇಳುತ್ತೇನೆ. ಅಲ್ಲಿಯವರೆಗೂ ನಿಮ್ಮ ನಿಮ್ಮ ಕೆಲಸಗಳನ್ನ ನೀವು ಮಾಡಿಕೊಂಡು ಹೋಗಿ. ಸರ್ಕಾರ ಅನುಮತಿ ಕೊಟ್ಟ ನಂತರ ದಿನಾಂಕವನ್ನ ಹೇಳುತ್ತೇವೆ. ನಮ್ಮ ಪಕ್ಷ ಜವಾಬ್ದಾರಿಯುತ ಪಕ್ಷವಾಗಿದೆ ಎಂದರು.

Published On - 2:28 pm, Mon, 1 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us