AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಘೋಷಣೆ ಮುನ್ನವೇ ಸಾಮಗ್ರಿ ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಚುನಾವಣೆ ಘೋಷಣೆಗೆ ಮುನ್ನ ಶೋಧನೆಯ ಅಧಿಕಾರವಿಲ್ಲ ಎಂದು ಹೇಳಿ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಚುನಾವಣೆ ಘೋಷಣೆ ಮುನ್ನವೇ ಸಾಮಗ್ರಿ ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದುಗೊಳಿಸಿ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
ರಮೇಶ್ ಬಿ. ಜವಳಗೇರಾ
|

Updated on: Apr 11, 2023 | 3:39 PM

Share

ಬೆಂಗಳೂರು: ಚುನಾವಣೆ ಘೋಷಣೆ ಮುನ್ನವೇ ಸಾಮಗ್ರಿ ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣೆಗೂ ಮುನ್ನವೇ ಅಂದರೆ ಮಾರ್ಚ್ 19 ರಂದು ಬೆಂಗಳೂರಿನ ಶಿವಾಜಿನಗರ ಕ್ಷೇತ್ರದಲ್ಲಿ ಚುನಾವಣಾ ಅಧಿಕಾರಿಗಳು ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದರು. ಇದರ ವಿರುದ್ಧ ಇಷ್ತಿಯಾಕ್ ಅಹಮದ್ ಎಂಬುವರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ​, ಚುನಾವಣೆ ಘೋಷಣೆಗೆ ಮುನ್ನ ಶೋಧನೆಯ ಅಧಿಕಾರವಿಲ್ಲ ಎಂದು ಹೇಳಿ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದುಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ: ಮಾದರಿ ನೀತಿ ಸಂಹಿತೆ ಜಾರಿ: 10 ದಿನಗಳಲ್ಲಿ 100 ಕೋಟಿ ರೂ. ಮೌಲ್ಯದ ನಗದು, ವಸ್ತು ಜಪ್ತಿ

ಮಾರ್ಚ್ 19 ರಂದು ಬೆಂಗಳೂರಿನ ಶಿವಾಜಿನಗರ ಕ್ಷೇತ್ರದಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮುನ್ನವೇ ಚುನಾವಣಾ ಅಧಿಕಾರಿಗಳು ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದರು. ಇದರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಇಷ್ತಿಯಾಕ್ ಅಹಮದ್, ಚುನಾವಣೆಗೆ ಇನ್ನೂ ದಿನಾಂಕ ಪ್ರಕಟವಾಗಿಲ್ಲ ಅದು ಹೇಗೆ ಚುನಾವಣಾಧಿಕಾರಿಗಳು ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಂದು ಪ್ರಶ್ನಿಸಿದ್ದರು.

ಮಾರ್ಚ್ 29ರಂದು ಕೇಂದ್ರ ಚುನಾವಣೆ ಆಯೋಗವು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿತ್ತು. ಅಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಇದು ಮೇ.10ರಂದು ಚುನಾವಣೆ ಮುಗಿಯುವವರೆಗೆ ಜಾರಿಯಲ್ಲಿರಲಿದೆ.

ಇನ್ನಷ್ಟು ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ