AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗಿಲ್ಲ ಅನುಕೂಲ, ಕಷ್ಟ ಹೇಳಿಕೊಂಡು ಕಣ್ಣೀರಾದ ನರ್ಸ್

ಬೆಂಗಳೂರು: ಕೊರೊನಾ ವೈರಸ್​ನ ಕಟ್ಟಿ ಹಾಕಲು ಮೆಡಿಕಲ್ ವಾರಿಯರ್ಸ್​ ಸತತ ಪ್ರಯತ್ನದಲ್ಲಿದ್ದಾರೆ. ತಮ್ಮ ಮನೆ-ಮಠ ಏನನ್ನೂ ಚಿಂತಿಸದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಅಂತಹ ಮೆಡಿಕಲ್ ವಾರಿಯರ್ಸ್​ಗೆ ಸರ್ಕಾರ ಯಾವುದೇ ರೀತಿಯ ಅನುಕೂಲಗಳನ್ನು ನೀಡುತ್ತಿಲ್ಲ. ಕೊರೊನಾ ಸೇನಾನಿಗಳ ಈ ದುಃಸ್ಥಿತಿ ಬಯಲಿಗೆ ಬಂದಿದೆ. ಆರೋಗ್ಯ ಇಲಾಖೆಯ ಲೋಪ ಬಿಚ್ಚಿಟ್ಟ ನರ್ಸ್, ಟಿವಿ9 ವಾಹಿನಿಯ ವಾಹನದಲ್ಲೇ ಡ್ರಾಪ್: ಮಂಗಮ್ಮನಪಾಳ್ಯದ ಮದೀನಾ ನಗರದಲ್ಲಿ ಕೆಲಸ ಮಾಡುವ ನರ್ಸ್ ಒಬ್ಬರು ಆರೋಗ್ಯ ಇಲಾಖೆ ಅವ್ಯವಸ್ಥೆ ನೆನೆದು ಕಣ್ಣೀರಾಕಿದ್ದಾರೆ. ನಮಗೆ ಕಿಟ್ ಇಲ್ಲ. […]

ಕೊರೊನಾ ವಾರಿಯರ್ಸ್​ಗಿಲ್ಲ ಅನುಕೂಲ, ಕಷ್ಟ ಹೇಳಿಕೊಂಡು ಕಣ್ಣೀರಾದ ನರ್ಸ್
ಸಾಧು ಶ್ರೀನಾಥ್​
|

Updated on:May 15, 2020 | 12:22 PM

Share

ಬೆಂಗಳೂರು: ಕೊರೊನಾ ವೈರಸ್​ನ ಕಟ್ಟಿ ಹಾಕಲು ಮೆಡಿಕಲ್ ವಾರಿಯರ್ಸ್​ ಸತತ ಪ್ರಯತ್ನದಲ್ಲಿದ್ದಾರೆ. ತಮ್ಮ ಮನೆ-ಮಠ ಏನನ್ನೂ ಚಿಂತಿಸದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಅಂತಹ ಮೆಡಿಕಲ್ ವಾರಿಯರ್ಸ್​ಗೆ ಸರ್ಕಾರ ಯಾವುದೇ ರೀತಿಯ ಅನುಕೂಲಗಳನ್ನು ನೀಡುತ್ತಿಲ್ಲ. ಕೊರೊನಾ ಸೇನಾನಿಗಳ ಈ ದುಃಸ್ಥಿತಿ ಬಯಲಿಗೆ ಬಂದಿದೆ.

ಆರೋಗ್ಯ ಇಲಾಖೆಯ ಲೋಪ ಬಿಚ್ಚಿಟ್ಟ ನರ್ಸ್, ಟಿವಿ9 ವಾಹಿನಿಯ ವಾಹನದಲ್ಲೇ ಡ್ರಾಪ್: ಮಂಗಮ್ಮನಪಾಳ್ಯದ ಮದೀನಾ ನಗರದಲ್ಲಿ ಕೆಲಸ ಮಾಡುವ ನರ್ಸ್ ಒಬ್ಬರು ಆರೋಗ್ಯ ಇಲಾಖೆ ಅವ್ಯವಸ್ಥೆ ನೆನೆದು ಕಣ್ಣೀರಾಕಿದ್ದಾರೆ. ನಮಗೆ ಕಿಟ್ ಇಲ್ಲ. ಮಾಸ್ಕ್ ಕೊಟ್ಟು 4 ದಿನ ಆಗಿದೆ ಎಂದು ಆರೋಗ್ಯ ಇಲಾಖೆಯ ಲೋಪವನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೆ ರಾತ್ರಿ ವೇಳೆಯೂ ಮಹಿಳಾ ಸಿಬ್ಬಂದಿ ಕೆಲಸ ಮಾಡ್ಬೇಕು. ಅವರಿಗೆ ಯಾವುದೇ ಭದ್ರತೆ ನೀಡಿಲ್ಲ. ಕೆಲಸ ಮುಗಿಸಿಕೊಂಡು ಮನೆಗೆ ಹೋಗಿದ್ದ ನರ್ಸ್​ನನ್ನು ಅಧಿಕಾರಿಗಳು ಕರೆ ಮಾಡಿ ಮಂಗಮ್ಮನಪಾಳ್ಯದಲ್ಲಿ ಸೋಂಕಿನ ಶಂಕೆ ಇದೆ. ಹೋಗಿ ಸಂಪರ್ಕಿತರ ಮಾಹಿತಿ ತಗೊಂಡು ಬನ್ನಿ ಎಂದಿದ್ದಾರೆ. ಆದರೆ ನರ್ಸ್​ಗೆ ಯಾವುದೇ ಭದ್ರತೆ ನೀಡಿಲ್ಲ. ರಾತ್ರಿ 9 ಗಂಟೆಯಾದ್ರು ಮನೆಗೆ ಹೋಗಲು ವಾಹನ ಕೂಡ ಸಿಗದೆ ಟಿವಿ9 ವಾಹಿನಿಯ ವಾಹನದಲ್ಲೇ ಡ್ರಾಪ್ ಮಾಡಲಾಗಿದೆ.

ಸರ್ವೆ ಮಾಡುವ ಸಿಬ್ಬಂದಿಗೆ ಪಿಪಿಇ ಕಿಟ್ ಕೊಡಲ್ಲ: ಜೀವ ಉಳಿಸುವ ಕೆಲಸ ಮಾಡುತ್ತಿರುವವರ ಜೀವನದ ಜೊತೆ ಅಧಿಕಾರಿಗಳು ಆಟ ಆಡ್ತಿದ್ದಾರೆ. ಇಲ್ಲಿ ಇವರು ಕಷ್ಟಪಟ್ಟು ಡೇಟಾ ಕಲೆಕ್ಟ್ ಮಾಡಿದರೆ.. ಅಲ್ಲಿ ಎಸಿ ರೂಮಲ್ಲಿದ್ದು ಅಧಿಕಾರಿಗಳು ಮಾಹಿತಿ ಪಡೆಯುತ್ತಾರೆ. ಸರ್ಕಾರ ಪಿಪಿಇ ಕಿಟ್​ಗೆ ಕೋಟಿ ಕೋಟಿ ಖರ್ಚು ಮಾಡುತ್ತೆ. ಆದ್ರೆ ಸೋಂಕಿತರಿರೋ ಏರಿಯಾಗೆ ಹೋಗೋರಿಗೆ, ಅಲ್ಲಿ ಸರ್ವೆ ಮಾಡುವ ಸಿಬ್ಬಂದಿಗೆ ಪಿಪಿಇ ಕಿಟ್ ಕೊಡಲ್ಲ. ಇಂತಹ ಕೆಟ್ಟ ಪರಿಸ್ಥಿತಿ ಯಾರಿಗೂ ಬೇಡ. ರಾತ್ರಿ 9 ಗಂಟೆ ಆದ್ರೂ ಒಬ್ಬರೇ ಹೋಗಬೇಕು. ಸೋಂಕಿತರ ಮನೆ ಬಳಿ ಹೋಗಿ ಸಂಪರ್ಕಿತರ ಮಾಹಿತಿ ಸಂಗ್ರಹಿಸಿ ಮೇಲಧಿಕಾರಿಗಳಿಗೆ ಕೊಡಬೇಕು. ರಾತ್ರಿ ವಾಪಸ್ ಹೋಗೋಕೆ ವಾಹನ ವ್ಯವಸ್ಥೆಯೂ ಇಲ್ಲ ಎಂದು ಆರೋಗ್ಯ ಇಲಾಖೆ ವಿರುದ್ಧ ನರ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 10:54 am, Fri, 15 May 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ