ರೈತರ ಸಾಲವನ್ನ ಸಂಪೂರ್ಣವಾಗಿ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ: ಬಿಎಸ್ವೈ

ಬೆಳಗಾವಿ: ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಅಂತಾ ರಾಜ್ಯದ ಮುಖ್ಯಮಂತ್ರಿ ಉತ್ತರಿಸಿದ್ದಾರೆ. ಬೆಳಗಾವಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ’ ಇವತ್ತಿನ ಹಣಕಾಸಿನ ಪರಿಸ್ಥಿತಿ, ನೆರೆ ಪ್ರವಾಹದಿಂದ ದೊಡ್ಡ ಅನಾಹುತ ಆಗಿದೆ. ಎಲ್ಲಾ ಕಾರ್ಯಕ್ರಮ ರದ್ದು ಮಾಡಿ ನೆರೆ […]

ರೈತರ ಸಾಲವನ್ನ ಸಂಪೂರ್ಣವಾಗಿ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ: ಬಿಎಸ್ವೈ
Follow us
|

Updated on:Oct 16, 2019 | 12:48 PM

ಬೆಳಗಾವಿ: ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಅಂತಾ ರಾಜ್ಯದ ಮುಖ್ಯಮಂತ್ರಿ ಉತ್ತರಿಸಿದ್ದಾರೆ.

ಬೆಳಗಾವಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ’ ಇವತ್ತಿನ ಹಣಕಾಸಿನ ಪರಿಸ್ಥಿತಿ, ನೆರೆ ಪ್ರವಾಹದಿಂದ ದೊಡ್ಡ ಅನಾಹುತ ಆಗಿದೆ. ಎಲ್ಲಾ ಕಾರ್ಯಕ್ರಮ ರದ್ದು ಮಾಡಿ ನೆರೆ ಪರಿಹಾರಕ್ಕೆ ಡೈವರ್ಟ್ ಮಾಡುವ ಪರಿಸ್ಥಿತಿ ಇದೆ. ಬೇರೆ ಯಾವುದನ್ನು ಮಾಡುವ ಪರಿಸ್ಥಿತಿ ಈಗ ಇಲ್ಲ ಅನ್ನೋ ಮಾತುಗಳನ್ನಾಡಿದ್ದಾರೆ.

ಅಲ್ಲದೆ ಪ್ರವಾಹದಿಂದ ರಾಜ್ಯದಲ್ಲಿ ದೊಡ್ಡ ಅನಾಹುತ ಆಗಿದೆ. ಹೀಗಾಗಿ ನಾವು ಪ್ರಮಾಣ ಮಾಡಿದಂತೆ ಬೆಳೆಗೆ ಹೆಚ್ಚು ಪರಿಹಾರ ಮತ್ತು ಮನೆ ಕಟ್ಟಿಕೊಳ್ಳಲು ಹೆಚ್ಚು ಪರಿಹಾರ ನೀಡುತ್ತಿದ್ದೇವೆ. ನಮ್ಮ ದೇಶದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಟ್ಟ ಉದಾಹರಣೆ ಇಲ್ಲ. ಬೇರೆ ಯಾವುದನ್ನು ಮಾಡುವ ಸ್ಥಿತಿಯಲ್ಲಿ ನಾವು ಇಲ್ಲ. ಮನೆಯನ್ನು ಕಟ್ಟಲು 95 ಸಾವಿರ ಕೊಡುವ ಕಡೆ 5 ಲಕ್ಷ ರೂಪಾಯಿ ಜೊತೆಗೆ ಎಲ್ಲಾ ನಿರಾಶ್ರಿತರಿಗೆ 10 ಸಾವಿರ ಕೊಡುತ್ತಿದ್ದೇವೆ ಎಂದಿದ್ದಾರೆ.

ರಾಜ್ಯದ ರೈತರು ಈಗಾಗಲೇ ಪ್ರವಾಹದ ಅಟ್ಟಹಾಸಕ್ಕೆ ಸಿಲುಕಿ ಮನೆ ಮಠ ಕಳೆದುಕೊಂಡು ಒದ್ದಾಡುತ್ತಿದ್ದಾರೆ. ಸರ್ಕಾರದಿಂದ ಪ್ರವಾಹ ಪರಿಹಾರ ಸರಿಯಾಗಿ ರೈತರಿಗೆ ಸಿಗುತ್ತಿಲ್ಲ. ಇತ್ತ ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಎಂ ಹೇಳಿಕೆ ದೊಡ್ಡ ಶಾಕ್ ನೀಡಿದೆ.

Published On - 12:41 pm, Wed, 16 October 19

ತಾಜಾ ಸುದ್ದಿ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ
ಹಳೆಯ ದೋಸ್ತಿ ಜಮೀರ್ ಆಹ್ಮದ್ ರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೆಚ್​ಡಿಕೆ
ಹಳೆಯ ದೋಸ್ತಿ ಜಮೀರ್ ಆಹ್ಮದ್ ರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೆಚ್​ಡಿಕೆ