AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಪ್ರಾರ್ಥನೆಗೆ ವಸತಿ ಗೃಹ ಬಳಕೆಗೆ ಯಾವುದೇ ನಿರ್ಬಂಧವಿಲ್ಲ: ಹೈಕೋರ್ಟ್

ಧಾರ್ಮಿಕ ಪ್ರಾರ್ಥನೆಗೆ ವಸತಿ ಗೃಹಗಳನ್ನು ಬಳಸಲು ಯಾವುದೇ ನಿರ್ಬಂಧವಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಶನಿವಾರ ಮಹತ್ವದ ತೀರ್ಪು ನೀಡಿದೆ. ಆ ಮೂಲಕ ತಮ್ಮ ತಮ್ಮ ಮನೆಗಳಲ್ಲಿ ಧಾರ್ಮಿಕ ನಂಬಿಕೆಗಳನ್ನು ಆಚರಿಸುವ ನಾಗರಿಕರ ಹಕ್ಕನ್ನು ಎತ್ತಿ ಹಿಡಿದಿದೆ.

ಧಾರ್ಮಿಕ ಪ್ರಾರ್ಥನೆಗೆ ವಸತಿ ಗೃಹ ಬಳಕೆಗೆ ಯಾವುದೇ ನಿರ್ಬಂಧವಿಲ್ಲ: ಹೈಕೋರ್ಟ್
ಕರ್ನಾಟಕ ಹೈಕೋರ್ಟ್
ಗಂಗಾಧರ​ ಬ. ಸಾಬೋಜಿ
|

Updated on: Aug 26, 2023 | 9:00 PM

Share

ಬೆಂಗಳೂರು, ಆಗಸ್ಟ್ 26: ಧಾರ್ಮಿಕ ಪ್ರಾರ್ಥನೆಗೆ ವಸತಿ ಗೃಹಗಳನ್ನು ಬಳಸಲು ಯಾವುದೇ ನಿರ್ಬಂಧವಿಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court)​ ಶನಿವಾರ ಮಹತ್ವದ ತೀರ್ಪು ನೀಡಿದೆ. ಆ ಮೂಲಕ ನಗರದ ಎಚ್​ಬಿಆರ್ ಲೇಔಟ್​​ನ ವಸತಿ ಮನೆಯನ್ನು ಪ್ರಾರ್ಥನೆಗೆ ಬಳಸಲಾಗುತ್ತಿದೆ ಎಂದು ಆರೋಪಿಸಿ ಕೆಲವು ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಜಾಗೊಳಿಸಿದೆ. ತೀರ್ಪಿನ ಪ್ರತಿಯನ್ನು ನ್ಯಾಯಾಲಯ ಇನ್ನು ಬಿಡುಗಡೆ ಮಾಡಿಲ್ಲ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಲೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ವಿಭಾಗೀಯ ಪೀಠವು ಇತ್ತೀಚೆಗೆ ಪಿಐಎಲ್ ಅನ್ನು ವಜಾಗೊಳಿಸಿತ್ತು. ಪೀಠವು ಅರ್ಜಿಯನ್ನು ವಜಾಗೊಳಿಸಿ ಪ್ರಾರ್ಥನೆಗೆ ಹಾಜರಾಗುವವವರಿಂದ ಉಂಟಾಗಬಹುದೆನ್ನಲ್ಲಾದ ಅಡ್ಡಿಗಳ ಬಗ್ಗೆ ಸಾಕಷ್ಟು ಪುರಾವೆಗಳ ಕೊರತೆಯಿದೆ ಎಂದು ಅಭಿಪ್ರಾಯಪಟ್ಟಿದೆ.

ಸ್ಯಾಮ್ ಪಿ ಫಿಲಿಪ್, ಕೃಷ್ಣ ಎಸ್‌ಕೆ, ಜಗಯೀಸನ್ ಟಿಪಿ ಮತ್ತು ಇತರ ಐವರು ಎಚ್‌ಬಿಆರ್ ಲೇಔಟ್ ನಿವಾಸಿಗಳಾಗಿದ್ದು, ಈ ವಿಚಾರವಾಗಿ ವಸತಿ ಮತ್ತು ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಮತ್ತು ಮಸೀದಿ ಇ-ಅಶ್ರಫಿತ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಜಯನಗರ ಸೇರಿದಂತೆ ಈ ನಗರಗಳಲ್ಲಿ ವಿದ್ಯುತ್ ಕಡಿತ: ವಾರಾಂತ್ಯದಲ್ಲಿ ಬೆಂಗಳೂರಿಗರಿಗೆ ತಟ್ಟಲಿದೆ ಪವರ್ ಕಟ್ ಬಿಸಿ

ವಸತಿ ಪ್ರದೇಶವನ್ನು ಪ್ರಾರ್ಥನಾ ಮಂದಿರವಾಗಿ ಬಳಸಲಾಗುತ್ತಿದ್ದು, ಇದರಿಂದ ನೆರೆಹೊರೆಯವರಿಗೆ ತೊಂದರೆಯಾಗುತ್ತಿದೆ ಎಂದು ವಾದಿಸಿದ್ದರು. ಈ ಹಿಂದೆ ಬಿಬಿಎಂಪಿ ಅನುಮತಿಯಿಲ್ಲದೆ ಮಸೀದಿ ಟ್ರಸ್ಟ್ ಕಟ್ಟಡ ನಿರ್ಮಿಸಿದಾಗ ಈ ವಿಷಯ ನ್ಯಾಯಾಲಯದ ಮೆಟ್ಟಿಲೇರಿದ್ದು, ಬಿಬಿಎಂಪಿಯಿಂದ ಅಗತ್ಯ ಮಂಜೂರಾತಿ ಪಡೆದ ನಂತರವಷ್ಟೇ ಮದರಸಾ ಕಟ್ಟಡ ನಿರ್ಮಿಸಬಹುದು ಎಂದು ಕೋರ್ಟ್ ಸೂಚಿಸಿತ್ತು. ನಂತರ ಕಟ್ಟಡವನ್ನು ನಿರ್ಮಿಸಿ ಬಡ ಮಕ್ಕಳ ಮದರಸಾವಾಗಿ ಬಳಕೆ ಮಾಡಲಾಗುತಿತ್ತು. ಬಳಿಕ ಹೊಸ ಕಟ್ಟಡ ನಿರ್ಮಾಣವಾದ ನಂತರ ಪಿಐಎಲ್ ಸಲ್ಲಿಸಲಾಗಿತ್ತು.

ಪಿಐಎಲ್ ಅನ್ನು ವಜಾಗೊಳಿಸುವಾಗ, ನ್ಯಾಯಾಲಯವು ಅರ್ಜಿದಾರ ಪರ ವಕೀಲರು ಅಂತಹ ಯಾವುದೇ ನಿರ್ದಿಷ್ಟ ಪುರಾವೆಗಳನ್ನು ನೀಡುವಲ್ಲಿ ವಿಫಲವಾಗಿದ್ದು, ಮತ್ತು ಪ್ರಾರ್ಥನೆ ಸಲ್ಲಿಸಲು ವಸತಿ ಪ್ರದೇಶವನ್ನು ಮಸೀದಿಯಾಗಿ ಬಳಸುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಸಿಬಿಡಿ ಪ್ರದೇಶದ ಪಬ್​ಗಳ ಮೇಲೆ​ ಬೆಂಗಳೂರು ಪೊಲೀಸ್​​ ದಾಳಿ: ಓರ್ವ ವಿದೇಶಿ ಮಹಿಳೆ ರಕ್ಷಣೆ

ಪ್ರಾರ್ಥನೆಗೆ ಹೆಚ್ಚು ಹೆಚ್ಚು ಜನರು ಸೇರುವುದರಿಂದ ಇದು ಸಾಮಾನ್ಯವಾಗಿ ಅರ್ಜಿದಾರರಲ್ಲಿ ಮತ್ತು ಇತರೆ ನಿವಾಸಿಗಳು ಭಯದಲ್ಲಿದ್ದಾರೆ ಎಂದು ಹೇಳಲಾಗುತ್ತಿದ್ದರು, ಈ ಕಾರಣಗಳು ತರ್ಕ ಅಥವಾ ಕಾನೂನಿನ ಚೌಕಟನ್ನು ಹೊಂದಿಲ್ಲ ಎಂದು ವಾದಿಸಲಾಗಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಪ್ರಾರ್ಥನೆಗಳನ್ನು ನಡೆಸುವುದರಿಂದ ಅಪಾಯವಿದೆ ಎಂದ ಅರ್ಜಿದಾರರ ಪರ ವಕೀಲರು ಮಂಡಿಸಿದ ವಾದವನ್ನು ನ್ಯಾಯಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಹೇಳಿಕೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಇಂತಹ ಹೇಳಿಕೆಗಳನ್ನು ನೀಡಲು ನಿಮಗೆ ಯಾವುದೇ ಹಕ್ಕಿಲ್ಲ. ನಿಯಮಗಳ ಉಲ್ಲಂಘನೆಯಾಗಿದೆ ಎಂದು  ಅಧಿಕಾರಿಗಳು ಮಾತ್ರ ಹೇಳಬಹುದು. ಯಾರಾದರೂ ಪ್ರಾರ್ಥನೆ ಸಲ್ಲಿಸುವುದು ಬೆದರಿಕೆಯ ಚಟುವಟಿಕೆ ಎಂದು ನೀವು ಹೇಗೆ ಹೇಳುತ್ತೀರಿ ಎಂದು ನ್ಯಾಯಾಲಯ ಪ್ರಶ್ನಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ