AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್‌ಗೆ ಔಷಧ ಕೊರತೆ ಇಲ್ಲ ಎಂದ ಆರೋಗ್ಯ ಸಚಿವರು; ಶಿವಮೊಗ್ಗದಲ್ಲಿ ಔಷಧ ಕೊರತೆ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು!

ರಾಜ್ಯಕ್ಕೆ 9 ಸಾವಿರ ವಯಲ್ ಇಂಜೆಕ್ಷನ್ ಹಂಚಿಕೆಯಾಗಿದೆ. ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಇಂಜೆಕ್ಷನ್ ಲಭ್ಯವಿದೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್‌ಗೆ ಔಷಧ ಕೊರತೆ ಇಲ್ಲ ಎಂದ ಆರೋಗ್ಯ ಸಚಿವರು; ಶಿವಮೊಗ್ಗದಲ್ಲಿ ಔಷಧ ಕೊರತೆ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು!
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jun 05, 2021 | 4:31 PM

Share

ಶಿವಮೊಗ್ಗ: ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್​ ಚಿಕಿತ್ಸೆಗೆ ಔಷಧ ಕೊರತೆ ಉಂಟಾಗಿದೆ ಎಂಬ ವಿಚಾರವನ್ನು ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಗಮನಕ್ಕೆ ತಂದಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 41 ಬ್ಲ್ಯಾಕ್ ಫಂಗಸ್​ ಪ್ರಕರಣಗಳಿವೆ. ಪ್ರತಿಯೊಬ್ಬ ರೋಗಿಗೆ 4 ವಯಲ್​ ಇಂಜೆಕ್ಷನ್​ ಅಗತ್ಯವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇಂದು (ಜೂನ್ 5) ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು ಹೀಗೆ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ವೇಳೆ ಅಧಿಕಾರಿಗಳು ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬೇಕಾಗಿರುವ ಔಷಧ ಕೊರತೆ ಬಗ್ಗೆ ಹೇಳಿದ್ದಾರೆ. ಸದ್ಯ 1 ವಯಲ್ ಇಂಜೆಕ್ಷನ್​ ಜೊತೆ ಮಾತ್ರೆ ನೀಡಲಾಗ್ತಿದೆ. 41 ಬ್ಲ್ಯಾಕ್ ಫಂಗಸ್​ ರೋಗಿಗಳ ಪೈಕಿ 10 ಜನ ಡಿಸ್ಚಾರ್ಜ್ ಆಗಿದ್ದಾರೆ. ಬ್ಲ್ಯಾಕ್ ಫಂಗಸ್ ಸೋಂಕಿತ 26 ರೋಗಿಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. 26 ರೋಗಿಗಳ ಪೈಕಿ 11 ರೋಗಿಗಳಿಗೆ ಸರ್ಜರಿ ಮಾಡಲಾಗಿದೆ. ಬ್ಲ್ಯಾಕ್ ಫಂಗಸ್​ನಿಂದ ಐವರು ರೋಗಿಗಳು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಬ್ಲ್ಯಾಕ್ ಫಂಗಸ್‌ಗೆ ಔಷಧ ಕೊರತೆ ಇಲ್ಲ ಎಂದ ಆರೋಗ್ಯ ಸಚಿವ ಸುಧಾಕರ್ ಮತ್ತೊಂದೆಡೆ, ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕರ್ನಾಟಕದಲ್ಲಿ ಬ್ಲ್ಯಾಕ್ ಫಂಗಸ್​ಗೆ ಔಷಧ ಕೊರತೆ ಇಲ್ಲ ಎಂದು ಹೇಳಿಕೆ ನೀಡಿದ್ಧಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್‌ಗೆ ಔಷಧ ಕೊರತೆ ಇಲ್ಲ ಎಂದು ತಿಳಿಸಿದ್ದಾರೆ.

ರಾಜ್ಯಕ್ಕೆ 9 ಸಾವಿರ ವಯಲ್ ಇಂಜೆಕ್ಷನ್ ಹಂಚಿಕೆಯಾಗಿದೆ. ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಇಂಜೆಕ್ಷನ್ ಲಭ್ಯವಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದರ ನಿಗದಿ ಮಾಡುತ್ತೇವೆ. ಮುಂದಿನ ವಾರ ಚಿಕಿತ್ಸೆಗೆ ದರ ನಿಗದಿ ಮಾಡಲಾಗುವುದು ಎಂದು ಸುಧಾಕರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Black Fungus: ಕರ್ನಾಟಕಕ್ಕೆ 9750 ವಯಲ್ಸ್ ಬ್ಲ್ಯಾಕ್ ಫಂಗಸ್ ಔಷಧ ಹಂಚಿಕೆ: ಸದಾನಂದ ಗೌಡ

ಭಾರತದಲ್ಲಿಂದು 1.20 ಹೊಸ ಕೊರೊನಾ ಸೋಂಕಿನ ಕೇಸ್​​ಗಳು ದಾಖಲು; ಚೇತರಿಕೆಯ ಪ್ರಮಾಣ ಶೇ. 93.08ಕ್ಕೆ ಏರಿಕೆ

Published On - 4:27 pm, Sat, 5 June 21

ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ