AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲೂ ಶುರುವಾಗಿದೆ ಬೆಡ್ಗಾಗಿ ಹಾಹಾಕಾರ.. ಜಿಮ್ಸ್‌ ಆಸ್ಪತ್ರೆಯಲ್ಲಿ ಡಿಸ್ಚಾರ್ಜ್ ಆದ್ರೆ ಮಾತ್ರ ಸೋಂಕಿತರಿಗೆ ಬೆಡ್

ಜಿಮ್ಸ್‌ ಆಸ್ಪತ್ರೆಯಲ್ಲಿದ್ದ 58 ವೆಂಟಿಲೇಟರ್ ಬೆಡ್‌ಗಳು ಹಾಗೂ ಉಳಿದ ಆಕ್ಸಿಜನ್ ಬೆಡ್‌ಗಳು ಭರ್ತಿಯಾಗಿವೆ. ಹೊಸ ಸೋಂಕಿತರು ಬಂದ್ರೆ ಆಕ್ಸಿಜನ್ ಬೆಡ್‌ಗಳು ಇಲ್ಲ. ಹೀಗಾಗಿ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಗದಗದಲ್ಲೂ ಶುರುವಾಗಿದೆ ಬೆಡ್ಗಾಗಿ ಹಾಹಾಕಾರ.. ಜಿಮ್ಸ್‌ ಆಸ್ಪತ್ರೆಯಲ್ಲಿ ಡಿಸ್ಚಾರ್ಜ್ ಆದ್ರೆ ಮಾತ್ರ ಸೋಂಕಿತರಿಗೆ ಬೆಡ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: May 10, 2021 | 8:51 AM

Share

ಗದಗ: ಕೊರೊನಾ 2ನೇ ಅಲೆಯ ಭೀಕರತೆಗೆ ಜನ ತತ್ತರಿಸಿದ್ದಾರೆ. ಇದರ ನಡುವೆ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಆಕ್ಸಿಜನ್ ಅಭಾವ, ಬೆಡ್ ಕೊರತೆಗಳು ರಾಜ್ಯದಲ್ಲಿ ಕಂಡು ಬಂದಿದೆ. ಗದಗ ಜಿಲ್ಲೆಯಲ್ಲೂ ಬೆಡ್ಗಾಗಿ ಹಾಹಾಕಾರ ಶುರುವಾಗಿದೆ. ಈಗ ಗದಗ ನಗರದ ಜಿಮ್ಸ್‌ ಆಸ್ಪತ್ರೆಯ 450 ಬೆಡ್‌ಗಳು ಕೂಡ ಫುಲ್ ಆಗಿವೆ ಈ ಬಗ್ಗೆ ಜಿಮ್ಸ್ ನಿರ್ದೇಶಕ ಡಾ‌.ಪಿ.ಎಸ್.ಭೂಸರೆಡ್ಡಿ ಮಾಹಿತಿ ತಿಳಿಸಿದ್ದಾರೆ.

ಜಿಮ್ಸ್‌ ಆಸ್ಪತ್ರೆಯಲ್ಲಿದ್ದ 58 ವೆಂಟಿಲೇಟರ್ ಬೆಡ್‌ಗಳು ಹಾಗೂ ಉಳಿದ ಆಕ್ಸಿಜನ್ ಬೆಡ್‌ಗಳು ಭರ್ತಿಯಾಗಿವೆ. ಹೊಸ ಸೋಂಕಿತರು ಬಂದ್ರೆ ಆಕ್ಸಿಜನ್ ಬೆಡ್‌ಗಳು ಇಲ್ಲ. ಹೀಗಾಗಿ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಸದ್ಯಕ್ಕೆ ಗದಗ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಅಗತ್ಯ ಇರುವಷ್ಟು ಮೆಡಿಕಲ್ ಆಕ್ಸಿಜನ್ ಪೂರೈಕೆಯಾಗುತ್ತಿದೆ. ನಿತ್ಯವೂ 13 KL ಅಗತ್ಯವಿದೆ ಅಂತ ಅದಕ್ಕೆ ತಕ್ಕಂತೆ ಪೂರೈಕೆ ಇದೆ ಎಂದು ಜಿಮ್ಸ್ ನಿರ್ದೇಶಕ ಡಾ‌.ಪಿ.ಎಸ್.ಭೂಸರೆಡ್ಡಿ ಹೇಳಿದ್ರು.

ಪ್ರಸಕ್ತ ಜಿಲ್ಲೆಯಲ್ಲಿ ನಿತ್ಯವೂ 300 ಕ್ಕೂ ಅಧಿಕ ಕೇಸ್ ಪತ್ತೆಯಾಗುತ್ತಿದೆ. ಹೊಸ ಸೋಂಕಿತರು ಬಂದ್ರೆ ಆಕ್ಸಿಜನ್ ಬೆಡ್ಗಳೂ ಇಲ್ಲ. ಗುಣಮುಖರಾಗಿ ಬಿಡುಗಡೆಯಾದ್ರೆ ಮಾತ್ರ ಬೆಡ್.. ಇಲ್ಲಾಂದ್ರೆ ಸೋಂಕಿತರು ಪರದಾಡುವಂತಾಗುತ್ತೆ. ಸದ್ಯ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಕೊಂಚ ಅನುಕೂಲವಾಗಲಿದೆ.

ಇದನ್ನೂ ಓದಿ: ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲ; 4 ದಿನದಿಂದ ತುಮಕೂರಿನ ವ್ಯಕ್ತಿ ಪರದಾಟ

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!