AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲೂ ಶುರುವಾಗಿದೆ ಬೆಡ್ಗಾಗಿ ಹಾಹಾಕಾರ.. ಜಿಮ್ಸ್‌ ಆಸ್ಪತ್ರೆಯಲ್ಲಿ ಡಿಸ್ಚಾರ್ಜ್ ಆದ್ರೆ ಮಾತ್ರ ಸೋಂಕಿತರಿಗೆ ಬೆಡ್

ಜಿಮ್ಸ್‌ ಆಸ್ಪತ್ರೆಯಲ್ಲಿದ್ದ 58 ವೆಂಟಿಲೇಟರ್ ಬೆಡ್‌ಗಳು ಹಾಗೂ ಉಳಿದ ಆಕ್ಸಿಜನ್ ಬೆಡ್‌ಗಳು ಭರ್ತಿಯಾಗಿವೆ. ಹೊಸ ಸೋಂಕಿತರು ಬಂದ್ರೆ ಆಕ್ಸಿಜನ್ ಬೆಡ್‌ಗಳು ಇಲ್ಲ. ಹೀಗಾಗಿ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಗದಗದಲ್ಲೂ ಶುರುವಾಗಿದೆ ಬೆಡ್ಗಾಗಿ ಹಾಹಾಕಾರ.. ಜಿಮ್ಸ್‌ ಆಸ್ಪತ್ರೆಯಲ್ಲಿ ಡಿಸ್ಚಾರ್ಜ್ ಆದ್ರೆ ಮಾತ್ರ ಸೋಂಕಿತರಿಗೆ ಬೆಡ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: May 10, 2021 | 8:51 AM

Share

ಗದಗ: ಕೊರೊನಾ 2ನೇ ಅಲೆಯ ಭೀಕರತೆಗೆ ಜನ ತತ್ತರಿಸಿದ್ದಾರೆ. ಇದರ ನಡುವೆ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಆಕ್ಸಿಜನ್ ಅಭಾವ, ಬೆಡ್ ಕೊರತೆಗಳು ರಾಜ್ಯದಲ್ಲಿ ಕಂಡು ಬಂದಿದೆ. ಗದಗ ಜಿಲ್ಲೆಯಲ್ಲೂ ಬೆಡ್ಗಾಗಿ ಹಾಹಾಕಾರ ಶುರುವಾಗಿದೆ. ಈಗ ಗದಗ ನಗರದ ಜಿಮ್ಸ್‌ ಆಸ್ಪತ್ರೆಯ 450 ಬೆಡ್‌ಗಳು ಕೂಡ ಫುಲ್ ಆಗಿವೆ ಈ ಬಗ್ಗೆ ಜಿಮ್ಸ್ ನಿರ್ದೇಶಕ ಡಾ‌.ಪಿ.ಎಸ್.ಭೂಸರೆಡ್ಡಿ ಮಾಹಿತಿ ತಿಳಿಸಿದ್ದಾರೆ.

ಜಿಮ್ಸ್‌ ಆಸ್ಪತ್ರೆಯಲ್ಲಿದ್ದ 58 ವೆಂಟಿಲೇಟರ್ ಬೆಡ್‌ಗಳು ಹಾಗೂ ಉಳಿದ ಆಕ್ಸಿಜನ್ ಬೆಡ್‌ಗಳು ಭರ್ತಿಯಾಗಿವೆ. ಹೊಸ ಸೋಂಕಿತರು ಬಂದ್ರೆ ಆಕ್ಸಿಜನ್ ಬೆಡ್‌ಗಳು ಇಲ್ಲ. ಹೀಗಾಗಿ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಸದ್ಯಕ್ಕೆ ಗದಗ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಅಗತ್ಯ ಇರುವಷ್ಟು ಮೆಡಿಕಲ್ ಆಕ್ಸಿಜನ್ ಪೂರೈಕೆಯಾಗುತ್ತಿದೆ. ನಿತ್ಯವೂ 13 KL ಅಗತ್ಯವಿದೆ ಅಂತ ಅದಕ್ಕೆ ತಕ್ಕಂತೆ ಪೂರೈಕೆ ಇದೆ ಎಂದು ಜಿಮ್ಸ್ ನಿರ್ದೇಶಕ ಡಾ‌.ಪಿ.ಎಸ್.ಭೂಸರೆಡ್ಡಿ ಹೇಳಿದ್ರು.

ಪ್ರಸಕ್ತ ಜಿಲ್ಲೆಯಲ್ಲಿ ನಿತ್ಯವೂ 300 ಕ್ಕೂ ಅಧಿಕ ಕೇಸ್ ಪತ್ತೆಯಾಗುತ್ತಿದೆ. ಹೊಸ ಸೋಂಕಿತರು ಬಂದ್ರೆ ಆಕ್ಸಿಜನ್ ಬೆಡ್ಗಳೂ ಇಲ್ಲ. ಗುಣಮುಖರಾಗಿ ಬಿಡುಗಡೆಯಾದ್ರೆ ಮಾತ್ರ ಬೆಡ್.. ಇಲ್ಲಾಂದ್ರೆ ಸೋಂಕಿತರು ಪರದಾಡುವಂತಾಗುತ್ತೆ. ಸದ್ಯ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಕೊಂಚ ಅನುಕೂಲವಾಗಲಿದೆ.

ಇದನ್ನೂ ಓದಿ: ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲ; 4 ದಿನದಿಂದ ತುಮಕೂರಿನ ವ್ಯಕ್ತಿ ಪರದಾಟ

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!