AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ, ಪಾರ್ಕ್ ಉದ್ಘಾಟಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ.. ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಮಾಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನ್ನಮಂಗಲದಲ್ಲಿ ಅಟಲ್ ಬಿಹಾರಿ ಸಸ್ಯ ಶಾಸ್ತ್ರೀಯ ತೋಟ ಉದ್ಘಾಟನೆ ಮಾಡಿದ್ರು. ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ವೈ ಮತ್ತು‌ ಸಚಿವರು ರುದ್ರಾಕ್ಷಿ ಸಸಿ‌ ನೆಟ್ರು.

ಕೆರೆ, ಪಾರ್ಕ್ ಉದ್ಘಾಟಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ.. ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಮಾಯ
ಕಾರ್ಯಕ್ರಮಗಳನ್ನು ಉದ್ಘಾಟಿಸಿದ ಬಿ.ಎಸ್.ಯಡಿಯೂರಪ್ಪ
TV9 Web
| Edited By: ಆಯೇಷಾ ಬಾನು|

Updated on: Jun 30, 2021 | 2:04 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಹದೇವಪುರ ಕ್ಷೇತ್ರ ವ್ಯಾಪ್ತಿಯ ಕಾಡುಗೋಡಿ, ಕನ್ನಮಂಗಲದಲ್ಲಿ ಕೆಲವು ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಪೊಲೀಸರ ನಡುವೆ ಸಾಮಾಜಿಕ ಅಂತರ ಮಾಯವಾಗಿತ್ತು. ಸಿಎಂ ಕಾರಿನ‌ ಹಿಂದೆ 17 ವಾಹನಗಳು ಹಿಂಬಾಲಿಸಿದವು.

ಸಿಎಂ ಬಿ.ಎಸ್. ಯಡಿಯೂರಪ್ಪ ಬೆಂಗಳೂರಿನ ಮಹದೇವಪುರ ಕ್ಷೇತ್ರ ವ್ಯಾಪ್ತಿಯ ಕಾಡುಗೋಡಿಯಲ್ಲಿ ಟ್ರೀ ಪಾರ್ಕ್ ಉದ್ಘಾಟಿಸಿದರು. ಬೆಂಗಳೂರು ಮಿಷನ್-2022 ಬೆಂಗಳೂರಿಗೆ ನವ ಚೈತನ್ಯ ಕಾರ್ಯಕ್ರಮದಡಿ ಅರಣ್ಯ ಇಲಾಖೆಯ ವತಿಯಿಂದ ಸುಮಾರು 22 ಎಕರೆ ವಿಸ್ತೀರ್ಣದಲ್ಲಿ ಈ ಟ್ರೀ ಪಾರ್ಕ್ ನಿರ್ಮಿಸಲಾಗಿದೆ. ಪಾರ್ಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಸಚಿವ ಅರವಿಂದ ಲಿಂಬಾವಳಿ, ತೋಟಗಾರಿಕೆ ಸಚಿವ ಆರ್.ಶಂಕರ್ ಉಪಸ್ಥಿತರಿದ್ದರು.

ಇನ್ನು ಮತ್ತೊಂದು ಕಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನ್ನಮಂಗಲದಲ್ಲಿ ಅಟಲ್ ಬಿಹಾರಿ ಸಸ್ಯ ಶಾಸ್ತ್ರೀಯ ತೋಟ ಉದ್ಘಾಟನೆ ಮಾಡಿದ್ರು. ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ವೈ ಮತ್ತು‌ ಸಚಿವರು ರುದ್ರಾಕ್ಷಿ ಸಸಿ‌ ನೆಟ್ರು.

ತೋಟಗಾರಿಕೆ ಇಲಾಖೆಯಿಂದ ನಿರ್ಮಿಸಲಾದ ಈ ಸಸ್ಯ ತೋಟ ಸುಮಾರು 70 ಎಕರೆ ವಿಸ್ತೀರ್ಣದಲ್ಲಿದೆ. 5.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಸಸ್ಯ ತೋಟದಲ್ಲಿ 3905 ವಿವಿಧ ಜಾತಿಯ ಮರಗಳಿವೆ. ಹಾಗೂ 2800 ಮೀಟರ್ ನಷ್ಟು ವಾಯುವಿಹಾರದ ಪಥ ನಿರ್ಮಾಣ ಮಾಡಲಾಗಿದೆ. ಜೊತೆಗೆ ಕನ್ನಮಂಗಲ ಬಳಿಕ ಬಿದರಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಇರುವ ಕನ್ನಮಂಗಲ ಮುಳ್ಳು ಕೆರೆಯನ್ನೂ ಕೂಡ ಉದ್ಘಾಟನೆ ಮಾಡಲಾಗಿದೆ.

BS Yediyurappa

ಸಿಎಂ ಕಾರಿನ‌ ಹಿಂದೆ 17 ವಾಹನಗಳು ಹಿಂಬಾಲಿಸಿದವು

ಇದನ್ನೂ ಓದಿ: ಕೊವಿಡ್ ನಿಯಮ ಉಲ್ಲಂಘನೆ: ಮುಂದಿನ ಸೋಮವಾರದವರೆಗೆ ಪೂರ್ವ ದೆಹಲಿಯ ಮಾರುಕಟ್ಟೆ ಬಂದ್

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್