AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸ್ತುವಾರಿ ಸಚಿವ ಮಾಧುಸ್ವಾಮಿ ಕ್ಷೇತ್ರದಲ್ಲಿ ನಿರ್ಲಕ್ಷ್ಯ, ಸೋಂಕಿತರಿಗೆ ಸಿಗ್ತಿಲ್ಲ ಚಿಕಿತ್ಸೆ

ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚತೆಯಿಲ್ಲ, ಸೂಕ್ತ ಬೆಡ್ ಇಲ್ಲದೇ ಪರದಾಡುತ್ತಿದ್ದೇವೆ ಎಂದು ಆಸ್ಪತ್ರೆಯಲ್ಲಿ ದಾಖಲಾಗಿರುವ ಸೋಂಕಿತರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಉಸ್ತುವಾರಿ ಸಚಿವ ಮಾಧುಸ್ವಾಮಿ ಕ್ಷೇತ್ರದಲ್ಲಿ ನಿರ್ಲಕ್ಷ್ಯ, ಸೋಂಕಿತರಿಗೆ ಸಿಗ್ತಿಲ್ಲ ಚಿಕಿತ್ಸೆ
ಆಸ್ಪತ್ರೆಯ ಶೌಚಾಲಯಗಳಲ್ಲೂ ಅಸ್ವಚ್ಚತೆ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 30, 2021 | 4:04 PM

Share

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕ ಮಾಧುಸ್ವಾಮಿ ಸ್ವಕ್ಷೇತ್ರದಲ್ಲಿ ಸೋಂಕಿತರ ನೋವನ್ನು ಕೇಳೋರೆ ಇಲ್ಲ. ಏಕೆಂದರೆ ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚತೆಯಿಲ್ಲ, ಸೂಕ್ತ ಬೆಡ್ ಇಲ್ಲದೇ ಪರದಾಡುತ್ತಿದ್ದೇವೆ ಎಂದು ಆಸ್ಪತ್ರೆಯಲ್ಲಿ ದಾಖಲಾಗಿರುವ ಸೋಂಕಿತರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಸರಿಯಾಗಿ ವೈದ್ಯರು ಚಿಕಿತ್ಸೆ ನೀಡುತ್ತಿಲ್ಲ, ಆಕ್ಸಿಜನ್ ಕೂಡ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ನರ್ಸ್ಗಳನ್ನ ಕಳಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ವೈದ್ಯರು ಯಾರು ನಮ್ಮನ್ನು ನೋಡುತ್ತಿಲ್ಲ. ಪ್ರತಿದಿನ ರೌಂಡ್ಸ್ ಮಾಡಬೇಕಿದ್ದ ವೈದ್ಯರು ಪತ್ತೆಯಿಲ್ಲ ಎಂದು ಸೋಂಕಿತರು ಕಣ್ಣೀರು ಹಾಕಿದ್ದಾರೆ.

ಇನ್ನು ಆಸ್ಪತ್ರೆಯ ಶೌಚಾಲಯಗಳಲ್ಲೂ ಸ್ವಚ್ಚತೆ ಮರೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಕೊವಿಡ್ ಚಿಕಿತ್ಸೆಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಮರನಡುಪಾಳ್ಯ ಗ್ರಾಮದ ದಂಪತಿಗಳು ಆಸ್ಪತ್ರೆಗೆ ದಾಖಲಾಗಿದ್ದು ಈ ವರೆಗೂ ದಂಪತಿಗೆ ಸೂಕ್ತ ಚಿಕಿತ್ಸೆ ಸಿಕ್ಕಿಲ್ಲ. ಅಲ್ಲದೆ ಕೆಲ ಸೋಂಕಿತರಿಗೆ ಗಂಭೀರ ಪರಿಸ್ಥಿತಿ ಇದ್ದು ರೆಮ್ ಡಿಸಿವಿಆರ್ ಲಸಿಕೆಯೂ ನೀಡುತ್ತಿಲ್ಲ. ಆಸ್ಪತ್ರೆಯಲ್ಲಿ 60 ಸೋಂಕಿತರಿಗೆ ಎರಡೇ ಶೌಚಾಲಯಗಳಿವೆ. ಈ ಬಗ್ಗೆ ಡಿಹೆಚ್ ಓ. ಡಾ ನಾಗೇಂದ್ರಪ್ಪರಿಗೆ ಕರೆ ಮಾಡಿದ್ರೆ, ನಮಗೆ ಕರೆ ಮಾಡಬೇಡಿ ಮಾಜಿ ಸಿಎಂ ಕುಮಾರಸ್ವಾಮಿಗೆ ಕರೆ ಮಾಡಿ ಎಂದು ಉದ್ದಟತನದಿಂದ ವರ್ತಿಸಿದ್ದಾರೆ.

ಇದನ್ನೂ ಓದಿ: ಸಚಿವ ಮಾಧುಸ್ವಾಮಿ ಕರೆ ಮಾಡಿ ಹೇಳಿದ್ದರೂ ಸಿಗದ ಬೆಡ್: 28 ವರ್ಷದ ಯುವಕ ಸಾವು

 ಬಂಡವಾಳ ಯೋಜನೆಗಳ ವೆಚ್ಚಕ್ಕಾಗಿ ಕೇಂದ್ರದಿಂದ ಹೆಚ್ಚುವರಿಯಾಗಿ 15,000 ಕೋಟಿ ರೂ. ಬಿಡುಗಡೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?