AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೋ ವ್ಯಾಕ್ಸಿನ್ ನೋ ಶಾಪ್ ಓಪನ್’ ಬಾಗಲಕೋಟೆ ಡಿಸಿಯಿಂದ ವಿನೂತನ ಪ್ಲ್ಯಾನ್

ಅನ್‌ಲಾಕ್ ಬಳಿಕವೂ ಕೊವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅಂಗಡಿ ತೆರೆಯಲು ಅವಕಾಶ ನೀಡಲಾಗುತ್ತೆ ಎಂಬ ನಿಯಮವನ್ನು ಜಾರಿಗೊಳಿಸಲಾಗಿದೆ. ದಿನಸಿ ಅಂಗಡಿ, ಹೋಟೆಲ್, ಬಾರ್, ರೆಸ್ಟೊರೆಂಟ್, ಎಲೆಕ್ಟ್ರಿಕ್ ಅಂಗಡಿ, ಸಲೂನ್, ಬೇಕರಿ, ಬಟ್ಟೆ ಅಂಗಡಿ ಸೇರಿದಂತೆ ಎಲ್ಲ ಅಂಗಡಿಗಳ ಮಾಲೀಕರಿಗೆ ಈ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

‘ನೋ ವ್ಯಾಕ್ಸಿನ್ ನೋ ಶಾಪ್ ಓಪನ್’ ಬಾಗಲಕೋಟೆ ಡಿಸಿಯಿಂದ ವಿನೂತನ ಪ್ಲ್ಯಾನ್
ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ
Follow us
TV9 Web
| Updated By: sandhya thejappa

Updated on: Jun 10, 2021 | 10:47 AM

ಬಾಗಲಕೋಟೆ: ಕೊರೊನಾ ನಿಯಂತ್ರಣಕ್ಕೆ ಬಾಗಲಕೋಟೆ ಡಿಸಿ ಹೊಸ ಪ್ಲ್ಯಾನ್ ಮಾಡಿದ್ದಾರೆ. ‘ನೋ ವ್ಯಾಕ್ಸಿನ್ ನೋ ಶಾಪ್ ಓಪನ್’ ಎಂಬ ನಿಯಮವನ್ನು ಬಾಗಲಕೋಟೆ ಡಿಸಿ ಕ್ಯಾಪ್ಟನ್ ರಾಜೇಂದ್ರ ಕೈಗೊಂಡಿದ್ದಾರೆ. ಈ ಮೂಲಕ ಜನರಿಗೆ ಲಸಿಕೆ ಹಾಕಿಸುವ ಗುರಿಯನ್ನು ಹೊಂದಿದ್ದಾರೆ.

ಅನ್‌ಲಾಕ್ ಬಳಿಕವೂ ಕೊವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅಂಗಡಿ ತೆರೆಯಲು ಅವಕಾಶ ನೀಡಲಾಗುತ್ತೆ ಎಂಬ ನಿಯಮವನ್ನು ಜಾರಿಗೊಳಿಸಲಾಗಿದೆ. ದಿನಸಿ ಅಂಗಡಿ, ಹೋಟೆಲ್, ಬಾರ್, ರೆಸ್ಟೊರೆಂಟ್, ಎಲೆಕ್ಟ್ರಿಕ್ ಅಂಗಡಿ, ಸಲೂನ್, ಬೇಕರಿ, ಬಟ್ಟೆ ಅಂಗಡಿ ಸೇರಿದಂತೆ ಎಲ್ಲ ಅಂಗಡಿಗಳ ಮಾಲೀಕರಿಗೆ ಈ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಅಂಗಡಿ ಮಾಲೀಕರು, ಅಲ್ಲಿ ಕೆಲಸ ಮಾಡುವವರು ಎಲ್ಲರೂ ಕೊವಿಡ್ ಲಸಿಕೆಯನ್ನು ಹಾಕಿಸಿಕೊಂಡಿರಬೇಕು. ಲಸಿಕೆ ಹಾಕಿಸಿಕೊಳ್ಳದಿದ್ದರೆ ಅಂಗಡಿ ತೆರೆಯಲು ಅವಕಾಶವಿಲ್ಲ.

ಒಂದು ವೇಳೆ ಲಸಿಕೆ ಪಡೆಯದೆ ಅಂಗಡಿ ತೆರೆದರೆ ಅಂಗಡಿ ಬಂದ್ ಮಾಡಿಸಲಾಗುವುದು. ಲಸಿಕೆ ಪಡೆದಿರುವ ಬಗ್ಗೆ ಮಾಲೀಕರು ದಾಖಲೆ ತೋರಿಸಬೇಕು. ಅನ್ಲಾಕ್ಗೂ ಮುನ್ನ ಆಧ್ಯತೆ ಮೇರೆಗೆ ಇಂತಹ ವರ್ಗದವರಿಗೆ ಲಸಿಕೆ ಪಡೆಯಲು ಅನುಕೂಲ ಕಲ್ಪಿಸುತ್ತೇವೆ. ಅಂಗಡಿ ಮಾಲೀಕರು ಜನರೊಂದಿಗೆ ನಿಕಟ ಸಂಪರ್ಕ ಹಿನ್ನೆಲೆಯಲ್ಲಿ ಲಸಿಕೆ ಪಡೆದರೆ ಮಾತ್ರ ಅವರಿಗೆ ಅನುಮತಿ ನೀಡಲಾಗುತ್ತೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಸೂಚಿಸಿದ್ದಾರೆ.

ಇದನ್ನೂ ಓದಿ: Coronavirus Cases in India: ಸತತ ಮೂರನೇ ದಿನ 1 ಲಕ್ಷಕ್ಕಿಂತ ಕಡಿಮೆ ಹೊಸ ಕೊವಿಡ್ ಪ್ರಕರಣ, 6148 ಮಂದಿ ಸಾವು

ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ