AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮದು ಸಾರ್ವಭೌಮ ಸರ್ಕಾರ, ಬಿಸಿಯೂಟ ಆರಂಭಿಸಲು ಕೇಂದ್ರ ಸರ್ಕಾರದ ಸೂಚನೆಗೆ ಕಾಯುವ ಅಗತ್ಯವಿಲ್ಲ; ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಕೋರ್ಟ್

Midday Meal: ವಿದ್ಯಾರ್ಥಿಗಳಿಗೆ ಆಹಾರದ ವ್ಯವಸ್ಥೆಯನ್ನು ಮಾಡುವುದು ಸರ್ಕಾರದ ಕರ್ತವ್ಯವಾಗಿದೆ. ಏಕೆಂದರೆ, ಹಸಿದ ಹೊಟ್ಟೆಯಲ್ಲಿ ಓದಲು ಸಾಧ್ಯವಾಗುವುದಿಲ್ಲ ಅಲ್ಲವೇ..? ಎಂದು ಕೋರ್ಟ್ ಪ್ರಶ್ನಿಸಿತು.

ನಿಮ್ಮದು ಸಾರ್ವಭೌಮ ಸರ್ಕಾರ, ಬಿಸಿಯೂಟ ಆರಂಭಿಸಲು ಕೇಂದ್ರ ಸರ್ಕಾರದ ಸೂಚನೆಗೆ ಕಾಯುವ ಅಗತ್ಯವಿಲ್ಲ; ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಕೋರ್ಟ್
ಬಿಸಿಯೂಟ
guruganesh bhat
| Edited By: |

Updated on: Mar 16, 2021 | 10:57 PM

Share

ಬೆಂಗಳೂರು: ಶಾಲೆಗಳಲ್ಲಿ ಬಿಸಿಯೂಟ ಮತ್ತು ಅಂಗನವಾಡಿಗಳಲ್ಲಿ ಬೇಯಿಸಿದ ಆಹಾರವನ್ನು ಕೊರೊನಾ ಪೂರ್ವದಂತೆ ಒದಗಿಸುವ ಕುರಿತು ಮಾರ್ಚ್ 30ರ ಒಳಗೆ ಪ್ರತಿಕ್ರಿಯಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಉಚ್ಛ ನ್ಯಾಯಾಲಯ ನಿರ್ದೇಶನ ನೀಡಿದೆ.  ಈ ಪ್ರಕರಣಕ್ಕೆ ಸಂಬಂಧಿಸಿ  ಏಪ್ರಿಲ್ 10ರವರೆಗೆ ಒಣ ಆಹಾರಗಳನ್ನು ಅಂಗನವಾಡಿಗಳಲ್ಲಿ ಒದಗಿಸಲಾಗುತ್ತದೆ. ಮತ್ತು ಬಿಸಿಯೂಟವನ್ನು ಮರು ಆರಂಭಿಸಲು ಕೇಂದ್ರ ಸರ್ಕಾರ ನೀಡುವ ಸೂಚನೆಗಾಗಿ ಕಾಯುತ್ತಿದ್ದೇವೆ ಎಂದು ಸರ್ಕಾರ ತಿಳಿಸಿತ್ತು. ಸರ್ಕಾರದ ಈ ಪ್ರತಿಕ್ರಿಯೆಯನ್ನು ಆಲಿಸಿದ ಕೋರ್ಟ್ ಇಂದು ಇನ್ನೊಂದು ಸೂಚನೆ ನೀಡಿದೆ.

ಕೊರೊನಾ ಲಾಕ್​ಡೌನ್​ನಿಂದ ಅಂಗನವಾಡಿ ಮತ್ತು ಶಾಲೆಗಳು ಸ್ಥಗಿತಗೊಂಡಿದ್ದವು. ಆದರೆ ಇದೀಗ ಇವೆರಡೂ ಮರು ಆರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ಆಹಾರದ ವ್ಯವಸ್ಥೆಯನ್ನು ಕೊರೊನಾ ಪೂರ್ವದಂತೆಯೇ ಮರು ಆರಂಭಿಸಲಾಗಿದೆಯೇ ಎಂದು ಸ್ಪಷ್ಟನೆ ನೀಡುವಂತೆ ಕೋರ್ಟ್ ತಿಳಿಸಿದೆ.

ಹಸಿದ ಹೊಟ್ಟೆಯಲ್ಲಿ ಓದಲು ಸಾಧ್ಯವಾಗುವುದಿಲ್ಲ ಅಲ್ಲವೇ..? ಸಂವಿಧಾನದ ಆರ್ಟಿಕಲ್ 21A ಪ್ರಕಾರ ಶಿಕ್ಷಣ ಪಡೆಯುವುದು ಮೂಲಭೂತ ಹಕ್ಕಾಗಿದೆ. ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆಹಾರ ಒದಗಿಸುವುದು ಸಹ ಮೂಲಭೂತ ಹಕ್ಕಿನ ವ್ಯಾಪ್ತಿಗೆ ಸೇರ್ಪಡೆಗೊಳ್ಳುತ್ತದೆ. ಅದು ಯಾವುದೇ ರೂಪದಲ್ಲಿದ್ದರೂ ಸಹ, ವಿದ್ಯಾರ್ಥಿಗಳಿಗೆ ಆಹಾರದ ವ್ಯವಸ್ಥೆಯನ್ನು ಮಾಡುವುದು ಸರ್ಕಾರದ ಕರ್ತವ್ಯವಾಗಿದೆ. ಏಕೆಂದರೆ, ಹಸಿದ ಹೊಟ್ಟೆಯಲ್ಲಿ ಓದಲು ಸಾಧ್ಯವಾಗುವುದಿಲ್ಲ ಅಲ್ಲವೇ..? ಎಂದು ಕೋರ್ಟ್ ಪ್ರಶ್ನಿಸಿತು.

ಇದಕ್ಕೂ ಮುನ್ನ, ವಿಚಾರಣೆಯ ಆರಂಭದಲ್ಲಿ ರಾಜ್ಯ ಸರ್ಕಾರ, ‘ಕೊರೊನಾ ಕಾರಣದಿಂದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಅಥವಾ ಆಹಾರದ ವ್ಯವಸ್ಥೆಯನ್ನು ಮಾಡಲು ಸಾಧ್ಯವಾಗಿಲ್ಲ. ಕೇರಳದ ಗಡಿಯಂಚಿನ ಕೆಲ ಶಾಲಾ ವ್ಯಾಪ್ತಿಯಲ್ಲಿ ಈಗಲೂ ಕೊರೊನಾ ಸೋಂಕಿನ ಭೀತಿ ಅಧಿಕವಾಗಿದೆ. ಇದು ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸಲು ತೊಡಕಾಗಿದೆ’ ಎಂದು ತಿಳಿಸಿತ್ತು.

ಆದರೆ, ಸರ್ಕಾರದ ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕೋರ್ಟ್, ‘ನೀವು ಶಾಲೆಗಳನ್ನು ಮರು ತೆರೆಯುತ್ತೀರಿ ಎಂದಾದಲ್ಲಿ, ಬಿಸಿಯೂಟದಂತಹ ಆಹಾರ ಒದಗಿಸುವ ವ್ಯವಸ್ಥೆಯನ್ನೂ ಒದಗಿಸಬೇಕಿತ್ತು. ಶಾಲೆ ತೆರೆಯಲು ಯೋಜನೆ ರೂಪಿಸುವವರಿಗೆ ಮಕ್ಕಳಿಗೆ ಆಹಾರ ಒದಗಿಸಲು ಯೋಜನೆ ರೂಪಿಸಲು ಕಷ್ಟವಾಗದು ಅಲ್ಲವೇ..? ಎಂದು ಸರ್ಕಾರಕ್ಕೆ ಚಾಟಿ ಬೀಸಿತ್ತು.

ಶಾಲೆಗಳ ಜತೆ ಬಿಸಿಯೂಟವನ್ನು ಪುನಃ ಆರಂಭಿಸಿದ್ದರೆ ಮಕ್ಕಳು ಶಾಲೆಗಳತ್ತ ಆಕರ್ಷಿತರಾಗುತ್ತಿದ್ದರು. ಈ ಚಿಂತನೆ ನಿಮಗೆ ಹೊಳೆಯಲಿಲ್ಲವೇ ? ಎಂದು ಪ್ರಶ್ನಿಸಿತು. ಅಲ್ಲದೆ, ‘ಬಿಸಿಯೂಟ ಆರಂಭಿಸಲು ನೀವು ಕೇಂದ್ರದ ಸೂಚನೆಗಾಗಿ ಕಾಯುವ ಪ್ರಮೇಯವೇ ಉದ್ಭವಿಸುವುದಿಲ್ಲ. ಏಕೆಂದರೆ, ನೀವೊಂದು ಸಾರ್ವಭೌಮ ಸರ್ಕಾರವಾಗಿದ್ದೀರಿ‘ ಎಂದು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಿತು.

ರಾಜ್ಯ ಸರ್ಕಾರ ಅಂಗನವಾಡಿ ಮತ್ತು ಶಾಲೆಗಳಲ್ಲಿ ಆಹಾರ ಸೌಲಭ್ಯವನ್ನು ಪುನಃ ವ್ಯವಸ್ಥಿತವಾಗಿ ಆರಂಭಿಸುವ ಕುರಿತು ಮಾರ್ಚ್ 30ರ ಮಧ್ಯಾಹ್ನ 2:30ರ ಒಳಗೆ ಪ್ರತಿಕ್ರಿಯೆ ನೀಡಲು ಸೂಚಿಸಿದೆ.

ಇದನ್ನೂ ಓದಿ:

ಶಸ್ತ್ರಚಿಕಿತ್ಸೆ ನಡೆಸಲು ಆಯುರ್ವೇದ ವೈದ್ಯರಿಗೆ ಅನುಮತಿ ವಿಚಾರ: ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್ 

ರಾಜ್ಯ ಸರ್ಕಾರಗಳ ಅಧೀನದಲ್ಲಿ ಕೆಲಸ ಮಾಡುವ ಅಧಿಕಾರಿಗಳು ಚುನಾವಣಾ ಆಯೋಗದ ಹೊಣೆಗಾರಿಕೆ ವಹಿಸಿಕೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗ್ತೀರಾ ಎಂಬ ವಿಚಾರಕ್ಕೆ ಸಂಬಂಧಿಸಿದ ತಪ್ಪು ವರದಿ ಬಗ್ಗೆ ಸುಪ್ರೀಂ ಕೋರ್ಟ್​ ಅಸಮಾಧಾನ

Follow Us
guruganesh bhat
guruganesh bhat
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ