AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡಗಳ ಎನ್​​ಒಸಿ ಶುಲ್ಕ ಏರಿಕೆ: ಕರ್ನಾಟಕ ಸರ್ಕಾರದ ವಿರುದ್ಧ ಆರ್​ ಅಶೋಕ್​ ಆಕ್ರೋಶ

ಆಸ್ತಿ ತೆರಿಗೆ, ಮುದ್ರಾಂಕ ದರ, ನೀರು, ಕರೆಂಟು ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ವಸತಿ, ವಾಣಿಜ್ಯ ಹಾಗೂ ಬಹುಪಯೋಗಿ ಕಟ್ಟಡಗಳ ನಿರ್ಮಾಣಕ್ಕಾಗಿ ಪಡೆಯುವ ನಿರಾಕ್ಷೇಪಣಾ ಪತ್ರದ ಶುಲ್ಕವನ್ನು ಏರಿಕೆ ಮಾಡಿದ ಕರ್ನಾಟಕ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್​ ಅಶೋಕ್​ ಕಿಡಿಕಾರಿದ್ದಾರೆ.

ಕಟ್ಟಡಗಳ ಎನ್​​ಒಸಿ ಶುಲ್ಕ ಏರಿಕೆ: ಕರ್ನಾಟಕ ಸರ್ಕಾರದ ವಿರುದ್ಧ ಆರ್​ ಅಶೋಕ್​ ಆಕ್ರೋಶ
ಆರ್​ ಅಶೋಕ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jul 22, 2024 | 1:12 PM

Share

ಬೆಂಗಳೂರು, ಜುಲೈ 22: ವಸತಿ, ವಾಣಿಜ್ಯ ಹಾಗೂ ಬಹುಪಯೋಗಿ ಕಟ್ಟಡಗಳ ನಿರ್ಮಾಣಕ್ಕಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಕಡ್ಡಾಯವಾಗಿ ಪಡೆದುಕೊಳ್ಳಬೇಕಾದ ನಿರಾಕ್ಷೇಪಣಾ ಪತ್ರದ (ಎನ್​ಒಸಿ) ಶುಲ್ಕವನ್ನು ಏರಿಕೆ ಮಾಡಿದ ಕರ್ನಾಟಕ ಸರ್ಕಾರದ (Karnataka Government) ಕ್ರಮವಕ್ಕೆ ವಿಪಕ್ಷ ನಾಯಕ ಆರ್​. ಅಶೋಕ್ (R. Ashok)​ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎನ್​ಒಸಿ ಶುಲ್ಕ ಏರಿಕೆ ಸುದ್ದಿಯನ್ನು ಲಗ್ಗತ್ತಿಸಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ ಅಶೋಕ್​ ಅವರು “ಆಸ್ತಿ ತೆರಿಗೆ, ಮುದ್ರಾಂಕ ದರ, ನೀರು, ಕರೆಂಟು ದರ ಹೆಚ್ಚು ಮಾಡಿದ್ದಾಯ್ತು. ಈಗ ಸದ್ದಿಲ್ಲದೆ ವಸತಿ ಮತ್ತು ವಾಣಿಜ್ಯ ಕಟ್ಟಡಗಳ ಎನ್​ಒಸಿ ಶುಲ್ಕ ದುಬಾರಿ ಮಾಡಿದೆ ಈ ದರಿದ್ರ ಕಾಂಗ್ರೆಸ್​​ ಸರ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರೇ, ದಿನಬೆಳಗಾದರೆ ಒಂದಲ್ಲ ಒಂದು ಬೆಲೆ ಏರಿಕೆ ಮಾಡಿ ಕನ್ನಡಿಗರ ರಕ್ತ ಹೀರುತ್ತಿದ್ದೀರಲ್ಲ ನಿಮ್ಮ ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಕನ್ನಡಿಗರು ಇನ್ನೆಷ್ಟು ತೆರಿಗೆ, ಶುಲ್ಕ ತೆತ್ತಬೇಕು? ಎಂದು ಪ್ರಶ್ನಿಸಿದರು.

ಎಷ್ಟಿತ್ತು?

ವಸತಿ, ವಾಣಿಜ್ಯ ಹಾಗೂ ಬಹುಪಯೋಗಿ ಕಟ್ಟಡಕ್ಕೆ ಪ್ರಸ್ತುತ ಪ್ರತಿ ನಿರ್ಮಿತ ಪ್ರದೇಶದ (ಸೂಪರ್​ ಬಿಲ್ಟ್​​​ ಅಪ್​ ಏರಿಯಾ) ಚದರ ಮೀಟರ್​​ಗೆ 60 ರೂ. ಅಥವಾ 5 ಲಕ್ಷ ರೂ. (ಯಾವುದು ಹೆಚ್ಚಿರುವುದೋ ಅದು ಅನ್ವಯ) ಇತ್ತು.

ಇದನ್ನೂ ಓದಿ: ಅಬಕಾರಿ ಉಪ ಆಯುಕ್ತರ ಹುದ್ದೆಗೆ 3.5 ಕೋಟಿ ರೂ! ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಎಂದ ಅಶೋಕ್

ಎಷ್ಟು ಏರಿಕೆ?

ಚದರ ಮೀಟರ್​ಗೆ 80 ರೂ. ಅಥವಾ 6 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. ಶೇ.33 ರಷ್ಟು ಏರಿಕೆಯಾಗಿದೆ.

ಯಾವ ಕಟ್ಟಡಗಳಿಗೆ ಅನ್ವಯ?

ಬಹುಮಹಡಿ ವಸತಿ ಕಟ್ಟಡ, ಬಹುಮಡಿ ವಾಣಿಜ್ಯ ಕಟ್ಟಡ ಹಾಗೂ ಬಹುಪಯೋಗಿ ಕಟ್ಟಡಗಳು. ನಗರ ಮತ್ತು ಪ್ರದೇಶದಲ್ಲಿರುವ ಎಲ್ಲ ಶಾಲಾ-ಕಾಲೇಜು ಹಾಗೂ ಶೈಕ್ಷಣಿಕ ಕಟ್ಟಡಗಳು. ಹೋಟೆಲ್​​, ಆಸ್ಪತ್ರೆ, ಕಚೇರಿಗಳು, ಕೈಗಾರಿಕಾ ಕಟ್ಟಡಗಳು ಸೇರಿದಂತೆ ಇನ್ನಿತರ ಕಟ್ಟಡಗಳಿಗೆ ಅನ್ವಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!