AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬನ್​ಪಾರ್ಕ್​ನಲ್ಲಿ ಫೋಟೋ ತೆಗೆಯುವಾಗ ಅಡ್ಡಬಂದನೆಂದು HAL ಉದ್ಯೋಗಿಗೆ ಹೀಗಾ ಹೊಡೆಯೋದು!

ಫೋಟೋ ತೆಗೆಯುವಾಗ ಅಡ್ಡಬಂದರೆಂಬ ಕಾರಣಕ್ಕೆ ವ್ಯಕ್ತಿಯೋರ್ವನಿಗೆ ರಕ್ತ ಬರುವಂತೆ ಹಲ್ಲೆ ಮಾಡಿರುವಂತಹ ಘಟನೆ ಸೆ.29ರಂದು ಕಬ್ಬನ್​ಪಾರ್ಕ್​ನಲ್ಲಿ ನಡೆದಿದ್ದು, ಕೇಸ್ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕಬ್ಬನ್​ಪಾರ್ಕ್​ನಲ್ಲಿ ಫೋಟೋ ತೆಗೆಯುವಾಗ ಅಡ್ಡಬಂದನೆಂದು HAL ಉದ್ಯೋಗಿಗೆ ಹೀಗಾ ಹೊಡೆಯೋದು!
ಕಬ್ಬನ್​ಪಾರ್ಕ್​ನಲ್ಲಿ ಫೋಟೋ ತೆಗೆಯುವಾಗ ಅಡ್ಡಬಂದನೆಂದು HAL ಉದ್ಯೋಗಿಗೆ ಹೀಗಾ ಹೊಡೆಯೋದು!
Jagadisha B
| Edited By: |

Updated on: Oct 11, 2024 | 4:06 PM

Share

ಬೆಂಗಳೂರು, ಅಕ್ಟೋಬರ್​ 11: ಫೋಟೋ ತೆಗೆಯುವಾಗ ಅಡ್ಡಬಂದರೆಂದು ಹೆಚ್ಎಎಲ್ ಉದ್ಯೋಗಿಗೆ (HAL employee) ರಕ್ತ ಬರುವಂತೆ ವ್ಯಕ್ತಿಯೋರ್ವ ಹಲ್ಲೆ ಮಾಡಿರುವಂತಹ ಘಟನೆ ಸೆ.29ರಂದು ಕಬ್ಬನ್​ಪಾರ್ಕ್​ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಉತ್ತರ ಭಾರತದ ವ್ಯಕ್ತಿಯಿಂದ ಹೆಚ್ಎಎಲ್ ಡಿಫೆನ್ಸ್ ವಿಭಾಗದ ಟೆಕ್ನಿಷಿಯನ್ ಆಗಿರುವ ಉದ್ಯೋಗಿ ರವಿಕಿರಣ್​ಗೆ ನಿಂದಿಸಿ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಕಬ್ಬನ್​ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸೆ.29ರಂದು ಮಧ್ಯಾಹ್ನ 3.30ಕ್ಕೆ ಕಬ್ಬನ್​ಪಾರ್ಕ್​ಗೆ ಬಂದಿದ್ದ ರವಿಕಿರಣ್, ಉತ್ತರ ಭಾರತದ ವ್ಯಕ್ತಿ ಫೋಟೋ ತೆಗೆಯುವಾಗ ಅಡ್ಡಹೋಗಿದ್ದರು. ನಾನು ಫೋಟೋ ತೆಗೆಯುವಾಗ ನೀನ್ಯಾಕೆ ಅಡ್ಡ ಬಂದೆ ಎಂದು ನಿಂದಿಸಿ, ಪಾರ್ಕ್​ ನಿಮ್ಮಪ್ಪಂದ ಎಂದು ಬೈಯ್ದು ಕೈಯಿಂದ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಬಳಿಕ ಚಿಕಿತ್ಸೆ ಪಡೆದು ಕಬ್ಬನ್​ಪಾರ್ಕ್ ಠಾಣೆಗೆ ರವಿಕಿರಣ್ ದೂರು ನೀಡಿದ್ದರು.

ಸೂರ್ಯ ಮಲ್ಲೇಶ್ವರ ಬೆಟ್ಟದ ತಪ್ಪಲಿನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಕೋಲಾರ: ಕೋಲಾರ ತಾಲೂಕಿನ ವೇಮಗಲ್​ ಬಳಿ ಸೂರ್ಯ ಮಲ್ಲೇಶ್ವರ ಬೆಟ್ಟದ ತಪ್ಪಲಿನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಸುಮಾರು 50ರಿಂದ 60 ವರ್ಷದ ಅಪರಿಚಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ವೇಮಗಲ್ ಇನ್ಸ್​ಪೆಕ್ಟರ್ ಲೋಕೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬಹಿರ್ದೆಸೆಗೆ ಹೋಗಿದ್ದ ಬಾಲಕ ಮೇಲೆ ವಿದ್ಯುತ್ ತಂತಿ ಬಿದ್ದು ಸಾವು

ಕೊಪ್ಪಳ: ಬಹಿರ್ದೆಸೆಗೆ ಹೋಗಿದ್ದ ಬಾಲಕ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ  ಬಾಲಕ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ಕನಕಗಿರಿ ಪಟ್ಟಣದ ಹನ್ನೊಂದು ವರ್ಷದ ವಿನಯ್ ಮೃತ ಬಾಲಕ.

ಇದನ್ನೂ ಓದಿ: ರಾಮನಗರ: ಐದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣು

ಪಟ್ಟಣದ ಹೊರವಲಯದಲ್ಲಿರುವ ಕೆರೆ ಸಮೀಪ ವಿನಯ್ ಬಹಿರ್ದೆಸೆಗೆ ಹೋಗಿದ್ದ. ಈ ಸಮಯದಲ್ಲಿ ವಿದ್ಯುತ್ ತಂತಿ ಆತನ ಮೈಮೇಲೆ ಬಿದ್ದಿದೆ. ಇನ್ನು ದುರ್ಘಟನೆಗೆ ಜೆಸ್ಕಾಂ ನಿರ್ಲಕ್ಷ್ಯವೇ ಕಾರಣ ಅಂತ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು