AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡಿತರ ಚೀಟಿ ರದ್ದು ವಿಚಾರ: ಒಂದೇ ಒಂದು ಎಪಿಎಲ್​ ಕಾರ್ಡ್ ರದ್ದಾಗಿಲ್ಲ, ಸಚಿವ ಮುನಿಯಪ್ಪ

ಮಂಗಳೂರಿನಲ್ಲಿ ಮಾತನಾಡಿದ ಸಚಿವ ಕೆ.ಎಚ್. ಮುನಿಯಪ್ಪ, ಬಿಪಿಎಲ್ ಅಲ್ಲದವರನ್ನು ಎಪಿಎಲ್ ವರ್ಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಪಡಿತರ ವಿತರಣೆಗೆ ಹಣದ ಕೊರತೆ ಇಲ್ಲ. ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡುವಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಎಪಿಎಲ್ ಕಾರ್ಡ್ ರದ್ದತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಪಡಿತರ ಚೀಟಿ ರದ್ದು ವಿಚಾರ: ಒಂದೇ ಒಂದು ಎಪಿಎಲ್​ ಕಾರ್ಡ್ ರದ್ದಾಗಿಲ್ಲ, ಸಚಿವ ಮುನಿಯಪ್ಪ
ಪಡಿತರ ಚೀಟಿ ರದ್ದು ವಿಚಾರ: ಒಂದೇ ಒಂದು ಎಪಿಎಲ್​ ಕಾರ್ಡ್ ರದ್ದಾಗಿಲ್ಲ, ಸಚಿವ ಮುನಿಯಪ್ಪ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Nov 16, 2024 | 8:02 PM

ಮಂಗಳೂರು, ನವೆಂಬರ್​ 16: ಪರಿಷ್ಕರಣೆ ಮಾಡಿದಾಗ ಬಿಪಿಎಲ್​ ಅಲ್ಲದೇ ಇರೋರನ್ನು ಎಪಿಎಲ್​  ಮಾಡಿದ್ದೇವೆ. ಎಪಿಎಲ್​ಗೆ ಹಾಕಿದವರನ್ನು ರದ್ದು ಮಾಡುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆಹೆಚ್​ ಮುನಿಯಪ್ಪ (KH Muniyappa) ಹೇಳಿದ್ದಾರೆ. ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬ ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿಕೆ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಪಡಿತರ ನೀಡುವುದಕ್ಕೆ ಹಣದ ಕೊರತೆ ಇಲ್ಲ ಎಂದು ಹೇಳಿದ್ದಾರೆ.

ಎಪಿಎಲ್​ಗೆ ಸಬ್ಸಿಡಿ ಕೊಡುವುದನ್ನು ನಿಲ್ಲಿಸಿದ್ದೇವೆ

ಅರ್ಹರಿಗೆ ಬಿಪಿಎಲ್​ ಕಾರ್ಡ್​ ವಿತರಣೆಗೆ ಯಾವುದೇ ತೊಂದರೆ ಇಲ್ಲ. ಎಪಿಎಲ್​ನವರಿಗೆ ಸಬ್ಸಿಡಿ ರೇಟ್​ನಲ್ಲಿ ಕೊಡ್ತಿದ್ದೆವು, ಹೆಚ್ಚಿನವರು ತೆಗೆದುಕೊಳ್ಳುತ್ತಿರಲಿಲ್ಲ. ಹಾಗಾಗಿ ಸದ್ಯಕ್ಕೆ ಎಪಿಎಲ್​ಗೆ ಸಬ್ಸಿಡಿ ಕೊಡುವುದನ್ನು ನಿಲ್ಲಿಸಿದ್ದೇವೆ. ಪರಿಷ್ಕರಣೆ ಪೂರ್ತಿ ಆದ ಮೇಲೆ ಎಪಿಎಲ್​ನವರು ಬೇಕೆಂದು ಮುಂದೆ ಬಂದ್ದರೆ ಖಂಡಿತಾ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸದ್ದಿಲ್ಲದೆ ರದ್ದಾಗುತ್ತಿವೆ ಪಡಿತರ ಚೀಟಿ: ಬಿಪಿಎಲ್​, ಎಪಿಎಲ್​ ಕಾರ್ಡ್​ದಾರರಿಗೆ ಬಿಗ್​ ಶಾಕ್​

ಒಂದೇ ಒಂದು ಎಪಿಎಲ್​ ಕಾರ್ಡ್ ರದ್ದು ಆಗಿಲ್ಲ. ದಕ್ಷಿಣ ಭಾರತದಲ್ಲಿ ಅತೀ ಹೆಚ್ಚು ಕರ್ನಾಟಕದಲ್ಲಿ ಕಾರ್ಡ್ ಇದೆ. 6.50 ಕೋಟಿ ಜನ ಇದ್ದರೂ 4.50 ಕೋಟಿ ಜನರಿಗೆ ಕಾರ್ಡ್ ಕೊಟ್ಟಿದ್ದೇವೆ. ಅರ್ಹರಲ್ಲದವರು ಜಾಸ್ತಿ ಜನ ಇದ್ದಾರೆ ಎಂಬ ಭಾವನೆ ಬಂದಿದೆ.

ಸುನೀಲ್ ಕುಮಾರ್​​ ನನ್ನ ಬಳಿ ಕೇಳಿದ್ರೆ ಹೇಳುತ್ತೇನೆ ಎಂದ ಮುನಿಯಪ್ಪ

ಪರಿಷ್ಕರಣೆಗೆ ನಿಯಾಮವಳಿ ಹಾಕಿಕೊಂಡಿದ್ದೇವೆ. ಈ ಹಿಂದಿನ ಸರ್ಕಾರವೇ ಈ ನಿಯಮ ಮಾಡಿದೆ. ಆದಾಯ ತೆರಿಗೆ ಕಟ್ಟುವವರಿಗೆ, ಕಾರು ಇರುವವರಿಗೆಲ್ಲಾ ಅವರನ್ನು ಎಪಿಎಲ್​ಗೆ ಹಾಕುತ್ತೇವೆ. ಅವರನ್ನು ತೆಗೆದು ಹಾಕಲ್ಲ. ಪರಿಷ್ಕರಣೆ ಮಾಡುವಾಗ ಅರ್ಹರಿಗೆ ಬಿಪಿಎಲ್​ ಕೊಡುತ್ತೇವೆ. ನಮ್ಮ ಬಳಿ ಇದಕ್ಕಾಗಿ 8000 ಸಾವಿರ ಕೋಟಿ ಹಣ ರೂ. ಇದೆ. ತಿಂಗಳಿಗೆ 650 ಕೋಟಿಯೇ ಖರ್ಚು ಆಗಲ್ಲ. ಕೊಡೋದಕ್ಕೆ ಯಾವುದೇ ತೊಂದರೆ ಇಲ್ಲ. ಸುನೀಲ್ ಕುಮಾರ್ ಅವರಿಗೆ ಮನವರಿಕೆ ಮಾಡುತ್ತೇವೆ. ನನ್ನ ಬಳಿ ಕೇಳಿದರೆ ಹೇಳುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ