AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನೋಟ್​ ಎಕ್ಸ್​ಚೇಂಜ್​ ದಂಧೆ: 3 ಕೋಟಿಗೆ 80 ಲಕ್ಷ ಕಮಿಷನ್​!

ವಿಡಿಯೋ ಜೊತೆಗೆ ಕೋಡ್​ ಕೂಡ ಕಳುಹಿಸಲಾಗುತ್ತಿತ್ತು. ಕೊಡ್ ಸಮೇತ ವಿಡಿಯೋ ಬಂದ ಬಳಿಕ ವ್ಯವಹಾರ ಮಾಡುತ್ತಿದ್ದರು ಎನ್ನುವ ವಿಚಾರ ಸದ್ಯ ಬಯಲಾಗಿದೆ.

ಬೆಂಗಳೂರಲ್ಲಿ ನೋಟ್​ ಎಕ್ಸ್​ಚೇಂಜ್​ ದಂಧೆ: 3 ಕೋಟಿಗೆ 80 ಲಕ್ಷ ಕಮಿಷನ್​!
ವಶಕ್ಕೆ ಪಡೆಯಲಾದ ಹಣ
ರಾಜೇಶ್ ದುಗ್ಗುಮನೆ
| Edited By: |

Updated on:Jan 02, 2021 | 9:13 AM

Share

ಬೆಂಗಳೂರು: ‘ಕೇಂದ್ರ ಸರ್ಕಾರದಿಂದ 2000 ಮುಖಬೆಲೆಯ ನೋಟ್ ಬ್ಯಾನ್ ಆಗಲಿದೆ ಹುಷಾರ್!’- ಹೀಗೊಂದು ಎಚ್ಚರಿಕೆ ನೀಡುತ್ತಾ ಯಾರೂ ಊಹಿಸಿಕೊಳ್ಳದ ದಂದೆ ನಡೆಸುತ್ತಿದ್ದ ಜಾಲವೊಂದು ಬೆಂಗಳೂರಲ್ಲಿ ಸಿಕ್ಕಿಬಿದ್ದಿದೆ. ಅಷ್ಟಕ್ಕೂ ಏನಿದು ಜಾಲ? ಇದರ ಹಿಂದೆ ಯಾರಿದ್ದರು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

2000 ರೂಪಾಯಿ ನೋಟಿಗೆ 500 ರೂಪಾಯಿ ನೀಡುವುದು ಈ ದಂಧೆ ಮಾಡುವವರ ಕೆಲಸ. ಒಂದೇ ದಿನದಲ್ಲಿ 2000 ಮುಖ ಬೆಲೆಯ ಸುಮಾರು ಮೂರು ಕೋಟಿ ಹಣವನ್ನು 500 ರೂಪಾಯಿಗೆ ಎಕ್ಸ್​​ಚೆಂಜ್ ಮಾಡುತ್ತಿದ್ದರು. ಇಷ್ಟೇ ಅಲ್ಲ ಇದಕ್ಕಾಗಿ ದಂಧೆಕೋರರು ಬರೋಬ್ಬರಿ 80 ಲಕ್ಷ ಕಮಿಷನ್ ಪಡೆಯುತ್ತಿದ್ದರಂತೆ! ನೋಟ್​ ಬ್ಯಾನ್​ ಆಗುತ್ತದೆ ಎಂದು ಬೆದರಿಸಿ ಇವರು ಹಣ ಮಾಡುತ್ತಿದ್ದರು.

ಈ ದಂಧೆ ಕುರಿಂತೆ ಪಬ್​ ಮ್ಯಾನೇಜರ್​ ಒಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮ್ಯಾನೇಜರ್ ಮಾಹಿತಿ ಆಧರಿಸಿ ಮಫ್ತಿಯಲ್ಲಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಮಾಹಿತಿ ನೀಡಿದ ಪಬ್​ ಮ್ಯಾನೇಜರ್ ಅವರನ್ನು ಪೊಲೀಸರು ಹಿಂಬಾಲಿಸಿದ್ದರು.

ಮೊದಲಿಗೆ ಮಾರತ್ ಹಳ್ಳಿ ಕಾಫಿಡೇನಲ್ಲಿ ಇಬ್ಬರು ಮಧ್ಯವರ್ತಿಗಳು ಪಬ್​ ಮ್ಯಾನೇಜರ್​​ಗೆ ಸಿಕ್ಕಿದ್ದರು. ಪಬ್ ಮ್ಯಾನೇಜರ್ ಹಿಂಬದಿಯಿಂದ ಪೊಲೀಸರು ಫಾಲೋ ಮಾಡಿದ್ದರು. ಮಧ್ಯವರ್ತಿಗಳು ಪಬ್​ ಮ್ಯಾನೇಜರ್​ನನ್ನು ಓಲ್ಡ್ ಏರ್ಪೋಟ್, ಕೆಆರ್ ಪುರಂ ಮೂಲಕ ಎರ್​ಪೋರ್ಟ್​ ಕಡೆಗೆ ಕರೆದೊಯ್ದಿದ್ದರು. ಮಾರ್ಗದಲ್ಲಿ ಸಿಕ್ಕ ಮತ್ತೋರ್ವ ಮಧ್ಯವರ್ತಿ ಜೊತೆ ಇವರು ಚರ್ಚೆ ಮಾಡಿದ್ದರು. ಚರ್ಚೆ ವೇಳೆ ದಾಳಿ ಮಾಡಿ ಲೋಹಿತ್, ರವಿಕುಮಾರ್ ಹಾಗೂ ಸುದರ್ಶನ್ ಎಂಬ ಮೂವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದರು. ದಂಧೆಯ ಕಿಂಗ್​ ಪಿನ್​ ಹಿಡಿಯಲು ಪೊಲೀಸರು ಇವರನ್ನೇ ಬಳಕೆ ಮಾಡಿಕೊಂಡಿದ್ದರು.

ಬಂಧಿತರು

ಮೂವರು ಮಧ್ಯವರ್ತಿಗಳನ್ನು ಕರೆದುಕೊಂಡು ಬೆಂಗಳೂರಿನ ಚಿಕ್ಕಪೇಟೆಯ ಏರಿಯಾಗೆ ಮಾರತ್​ಹಳ್ಳಿ ಪೊಲೀಸರು ಬಂದಿದ್ದರು. ಈ ವೇಳೆ 10ರೂನ ಹರಿದ ನೋಟ್​ಅನ್ನು ವ್ಯಕ್ತಿಯೋರ್ವ ಇವರಿಗೆ ಕೊಟ್ಟಿದ್ದ. ಬಳಿಕ ಆಟೋ ಶಿವು ಎಂಬಾತನ ಬಳಿ ಮಫ್ತಿಯಲ್ಲಿದ್ದ ಪೊಲೀಸರನ್ನು ಕರೆದೊಯ್ಯಲಾಯಿತು. ಅಲ್ಲಿಂದ ಹರಿದ 10ರೂ. ನೋಟ್ ಹಿಡಿದು ಹೊರಟ ಪೊಲೀಸರನ್ನು ಮಧ್ಯವರ್ತಿಗಳು ಚಿಕ್ಕಪೇಟೆ ಸುತ್ತಿಸಿದ್ದರು. ಮೂರು ಕಾರುಗಳನ್ನು ಕೂಡ ಬದಲಾಯಿಸಿದ್ದರು. ಅಂತಿಮವಾಗಿ ಚಿಕ್ಕಪೇಟೆಯ ಒಂದು ಮನೆಗೆ ಮಧ್ಯವರ್ತಿಗಳು ಇವರನ್ನು ಕರೆದೊಯ್ದಿದ್ದರು.

ಈವೇಳೆ ಅಕ್ಷಯ್, ಕಮಲೇಶ್, ಅರವಿಂದ್ ಎಂಬ ವ್ಯಕ್ತಿಗಳನ್ನು ಪೊಲೀಸರು ಭೇಟಿ ಮಾಡಿದ್ದರು. ಹಣ ಕೊಟ್ಟು ಎಕ್ಸ್ ಚೇಂಜ್ ಮಾಡುವ ಬಗ್ಗೆ ಚರ್ಚೆ ನಡೆದಿತ್ತು. ಇವರು ಪೊಲೀಸರೆಂದು ಅನುಮಾನಗೊಂಡು ಗ್ಯಾಂಗ್ ಅಲ್ಲಿಂದ ಕಾಲ್ಕಿತ್ತಿತ್ತು. ಕೂಡಲೇ ಕಾರ್ಯಪ್ರವೃತ್ತರಾಗಿ ನಾಲ್ಕು ಜನರನ್ನು ಪೊಲೀಸರು ಲಾಕ್ ಮಾಡಿದ್ದಾರೆ. ಮಧ್ಯವರ್ತಿಗಳಾದ ರವಿಕುಮಾರ್, ಆಟೋಶಿವ, ಸುದರ್ಶನ್ ಹಾಗೂ ಅರವಿಂದ್​ನನ್ನು ಬಂಧನ ಮಾಡಲಾಗಿದೆ. ಈ ವೇಳೆ ಅಕ್ಷಯ್, ಕಮಲೇಶ್ ಹಾಗೂ ಲೊಹಿತ್ ಎಸ್ಕೇಪ್ ಆಗಿದ್ದಾರೆ.

ಇವರ ಮೊಬೈಲ್​ನಲ್ಲಿ ಕಂತೆ ಕಂತೆ ನೋಟುಗಳ ವಿಡಿಯೋ ಪತ್ತೆ ಆಗಿದೆ. ಪ್ರತಿ ವಿಡಿಯೋದಲ್ಲೂ 2000 ಸಾವಿರ ಮುಖಬೆಲೆಯ ಕೋಟಿ ಕೋಟಿ ಹಣ ಇತ್ತು. ವಿಡಿಯೋ ಜೊತೆಗೆ ಕೋಡ್​ ಕೂಡ ಕಳುಹಿಸಲಾಗುತ್ತಿತ್ತು. ಕೊಡ್ ಸಮೇತ ವಿಡಿಯೋ ಬಂದ ಬಳಿಕ ವ್ಯವಹಾರ ಮಾಡುತ್ತಿದ್ದರು ಎನ್ನುವ ವಿಚಾರ ಸದ್ಯ ಬಯಲಾಗಿದೆ.

ನವೆಂಬರ್​ನಲ್ಲಿ ₹ 1.04 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ

Published On - 7:52 am, Sat, 2 January 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!