AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಗೌರವಗಳೊಂದಿಗೆ ವಿದ್ಯಾವಾಚಸ್ಪತಿ, ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ ಅಂತ್ಯಕ್ರಿಯೆ

ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ(85) ವಿಧಿವಶರಾಗಿದ್ದಾರೆ. ನಗರದ ಅಂಬಲಪಾಡಿ ತಮ್ಮ ನಿವಾಸದಲ್ಲಿ ಪದ್ಮಶ್ರೀ ಪುರಸ್ಕೃತ ಪ್ರವಚನಕಾರ ಗೋವಿಂದಾಚಾರ್ಯ ಕೊನೆಯುಸಿರೆಳೆದಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ  ವಿದ್ಯಾವಾಚಸ್ಪತಿ, ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ ಅಂತ್ಯಕ್ರಿಯೆ
ಬನ್ನಂಜೆ ಗೋವಿಂದಾಚಾರ್ಯ
KUSHAL V
| Edited By: |

Updated on:Dec 13, 2020 | 10:41 PM

Share

ಉಡುಪಿ: ಇಂದು ವಿಧಿವಶರಾದ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ (85) ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಭಾನುವಾರ ರಾತ್ರಿ ಅಂಬಲಪಾಡಿಯ ಮನೆಯ ಆವರಣದಲ್ಲಿ ನೆರವೇರಿಸಲಾಯಿತು.

ಅಂಬಲಪಾಡಿಯಲ್ಲಿ ಭಾನುವಾರ ರಾತ್ರಿ ಅಂತ್ಯ ಸಂಸ್ಕಾರ ನೆರವೇರಿತು. ಈ ವೇಳೆ ಪೊಲೀಸರು ಮೂರು ಬಾರಿ ಕುಶಾಲುತೋಪು ಸಿಡಿಸಿ ಗೌರವ ಸೂಚಿಸಿದರು. ಹಿರಿಯ ಪುತ್ರ ವಿನಯಭೂಷಣ ಅಂತ್ಯ ಸಂಸ್ಕಾರದ ಕ್ರಿಯೆಗಳನ್ನು ನೆರವೇರಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟಿಲ್​ ಸೇರಿ ಅನೇಕರು ಅಂತ್ಯ ಸಂಸ್ಕಾರ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಉಡುಪಿಯ ಅಂಬಲಪಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ಪದ್ಮಶ್ರೀ ಪುರಸ್ಕೃತ ಪ್ರವಚನಕಾರ ಗೋವಿಂದಾಚಾರ್ಯರು ಕೊನೆಯುಸಿರೆಳೆದಿದ್ದಾರೆ. ಗೋವಿಂದಾಚಾರ್ಯರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಗೋವಿಂದಾಚಾರ್ಯ ಪ್ರವಚನಕಾರ ಹಾಗೂ ಮಧ್ವ ಸಿದ್ಧಾಂತದ ಪ್ರತಿಪಾದಕರಾಗಿದ್ದರು. ಜೊತೆಗೆ, ಪತ್ರಕರ್ತರಾಗಿ ಅನೇಕ ಅಂಕಣಗಳನ್ನು ಸಹ ಬರೆದಿದ್ದರು. ಬನ್ನಂಜೆ ಗೋವಿಂದಾಚಾರ್ಯರು ನಟ ಡಾ.ವಿಷ್ಣುವರ್ಧನ್​ರಿಗೆ ಆಧ್ಯಾತ್ಮಿಕ ಗುರುಗಳಾಗಿದ್ದರು.

ಗೋವಿಂದಾಚಾರ್ಯರು ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ತರ್ಜುಮೆ ಮಾಡಿದ್ದರು. ಕೇವಲ ಸಾಹಿತ್ಯ ಲೋಕಕ್ಕೆ ಸೀಮಿತವಾಗದೆ ಮೂರು ಚಲನಚಿತ್ರಗಳಿಗೆ ಸಂಭಾಷಣೆ ಸಹ ಬರೆದಿದ್ದರು. ಮಧ್ವಾಚಾರ್ಯ, ಶಂಕರಾಚಾರ್ಯ ಹಾಗೂ ರಾಮಾನುಜಾಚಾರ್ಯ ಚಿತ್ರಗಳಿಗೆ ಸಂಭಾಷಣೆ ಬರೆದಿದ್ದರು. ಹಲವು ಚಾರಿತ್ರಿಕ ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದ ಗೋವಿಂದಾಚಾರ್ಯರು ಉಪನಿಷತ್ತಿನ ಅಧ್ಯಾಯಗಳಿಗೆ ಟಿಪ್ಪಣಿ ಸಹ ಬರೆದಿದ್ದರು.

ಮಗನ ಸಂಪಿಡೀಕರಣದ (ಉತ್ತರ ಕ್ರಿಯೆ) ದಿನವೇ ಬನ್ನಂಜೆ ನಿಧನ ಮಗನ ಸಂಪಿಡೀಕರಣದ (ಉತ್ತರ ಕ್ರಿಯೆ) ದಿನವೇ ಬನ್ನಂಜೆ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಬನ್ನಂಜೆ ಗೋವಿಂದಾಚಾರ್ಯರ ಪುತ್ರ ವಿಜಯ ಭೂಷಣ ಆಚಾರ್ಯ (56) ಡಿ.2 ರಂದು ನಿಧನರಾಗಿದ್ದರು.

ಪುತ್ರನ ಉತ್ತರಕ್ರಿಯೆ ಇಂದು ಪೂರ್ಣಗೊಂಡಿತ್ತು. ಆದರೆ, ಸಂಪಿಡೀಕರಣದ ಮರುಗಳಿಗೆಯೇ ಗೋವಿಂದಾಚರ್ಯ ವಿಧಿವಶರಾಗಿದ್ದಾರೆ. ಖ್ಯಾತ ಪ್ರವಚನಕಾರ ಗೋವಿಂದಾಚಾರ್ಯ ಅಂತಿಮ ದರ್ಶನಕ್ಕೆ ಗಣ್ಯರ ದಂಡು ಹರಿದುಬಂತು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಪ್ರಮೋಧ್ ಮಧ್ವರಾಜ್, ಶಾಸಕ ರಘುಪತಿ ಭಟ್ ಅಂತಿಮ ದರ್ಶನ ಪಡೆದರು.

ಬನ್ನಂಜೆ ಗೋವಿಂದಾಚಾರ್ಯರ ನೆನಪು | ಸಂಪ್ರದಾಯ-ಆಧುನಿಕತೆಯನ್ನು ಸಮನ್ವಯಿಸಿ ನೋಡಿದ ಘನ ವಿದ್ವಾಂಸ: ಮಲ್ಲೇಪುರಂ ಜಿ.ವೆಂಕಟೇಶ್

ಸೃಷ್ಟಿಶೀಲ, ಸೃಜನಶೀಲ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ: ಲಕ್ಷ್ಮೀಶ ತೋಳ್ಪಾಡಿ

ಒಡನಾಡಿಯ ನೆನಪು | ಗೀತಾ ಭಾಷ್ಯ ಮುಗಿಸಿಯೇ ‘ಹೋಗಬೇಕು’ ಅಂದುಕೊಂಡಿದ್ದರು ಬನ್ನಂಜೆ ಗೋವಿಂದಾಚಾರ್ಯ

ಅಸಾಮಾನ್ಯ ಪಾಂಡಿತ್ಯದ ಖನಿ ಬನ್ನಂಜೆ ಗೋವಿಂದಾಚಾರ್ಯ

Published On - 12:17 pm, Sun, 13 December 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​