AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕೋಟೆಯಲ್ಲಿ ರಣರೋಚಕ ಬೆಳವಣಿಗೆ: ಒಕ್ಕಲಿಗ ಟ್ರಂಪ್ ಕಾರ್ಡ್ ಪ್ಲೇ ಮಾಡುತ್ತಾ ಡಿಕೆ ಪಡೆ?

ಕರ್ನಾಟಕ ಕಾಂಗ್ರೆಸ್ ಮನೆಯ ಕುರ್ಚಿ ಆಟ ರೋಚಕ ಘಟ್ಟ ತಲುಪಿದೆ. ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ನವೆಂಬರ್ ಕ್ರಾಂತಿ ಗರಿಗೆದರಿದೆ. ಸಂಪುಟ ಪುನಾರಚನೆ ಸಂಬಂಧ ಸಿಎಂ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿ ವಾಪಸ್ ಆಗಿದ್ದು, ನವೆಂಬರ್ ಕ್ರಾಂತಿ ಶಾಂತಿಯಲ್ಲಿ ಅಂತ್ಯವಾಯ್ತು ಎನ್ನುವಷ್ಟರಲ್ಲೇ ಭಾರೀ ಬೆಳವಣಿಗೆಯಾಗಿದೆ.

ಕಾಂಗ್ರೆಸ್ ಕೋಟೆಯಲ್ಲಿ ರಣರೋಚಕ ಬೆಳವಣಿಗೆ: ಒಕ್ಕಲಿಗ ಟ್ರಂಪ್ ಕಾರ್ಡ್ ಪ್ಲೇ ಮಾಡುತ್ತಾ ಡಿಕೆ ಪಡೆ?
Congress
ರಮೇಶ್ ಬಿ. ಜವಳಗೇರಾ
|

Updated on:Nov 20, 2025 | 9:50 PM

Share

ಬೆಂಗಳೂರು, (ನವೆಂಬರ್ 20): ಸಿದ್ದರಾಮಯ್ಯ ಸರ್ಕಾರಕ್ಕೆ ( Karnataka Congress Government) ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಅಧಿಕಾರ ಹಂಚಿಕೆಯ ರಣ ರೋಚಕ ಧಾರಾವಾಹಿ ಆರಂಭವಾಗುವ ಎಲ್ಲಾ ಲಕ್ಷಣಗಳು ಗೋಚರಿಸಲಾರಂಭಿಸಿದೆ. ಹೌದು…ಇಂದು(ನವೆಂಬರ್ 20) ಸೂರ್ಯ ಮುಳುಗುತ್ತಿದ್ದಂತೆಯೇ ಡಿಕೆ ಶಿವಕುಮಾರ್ (DK Shivakumar)  ಬಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕೆಲ ಶಾಸಕ, ಸಚಿವರು ದೆಹಲಿ ಹಾರಿದ್ದರೆ. ಇನ್ನು ವಿಧಾನಪರಿಷತ್ ಸದಸ್ಯರು ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್​ ನಿವಾಸಕ್ಕೆ ದೌಡಾಯಿಸಿ ಗೌಪ್ಯ ಸಭೆ ನಡೆಸಿದ್ದಾರೆ. ಇನ್ನು ಚಲುವರಾಯಸ್ವಾಮಿ (N Cheluvarayaswamy) ದೆಹಲಿಗೆ ಹೋಗುತ್ತಿದ್ದಂತೆ ಇತ್ತ ಸಿಎಂ ಸಿದ್ದರಾಮಯ್ಯ (CM Siddaramaiah) ದಾಳ ಪ್ರಯೋಗಿಸಿದ್ದು, ನಾಳೆ (ನವೆಂಬರ್ 21) ತುರ್ತು ಕೃಷಿ ಸಚಿವರ ಸಭೆ ಕರೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್, ಆನೇಕಲ್ ಶಾಸಕ ಶಿವಣ್ಣ, ಗುಬ್ಬಿ ಶಾಸಕ ಎಸ್‌.ಆರ್ ಶ್ರೀನಿವಾಸ್, ಕುಣಿಗಲ್ ಶಾಸಕ ರಂಗನಾಥ್, ಮಂಡ್ಯ ಶಾಸಕ ರವಿಗಣಿಗ, ಶೃಂಗೇರಿ ಶಾಸಕ ರಾಜೇಗೌಡ ಕೂಡಾ ದೆಹಲಿಗೆ ಹೋಗಿದ್ದಾರೆ. ಖಾಸಗಿ ಕೆಲಸ ನೆಪದಲ್ಲಿ ದೆಹಲಿ ಯಾತ್ರೆ ಕೈಗೊಂಡಿದ್ದು, ಹೈಕಮಾಂಡ್ ನಾಯಕರ ಭೇಟಿಗೆ ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಗೆ ತೆರಳಿದ್ದಾರೆ. ಆದ್ರೆ, ಖರ್ಗೆ ಅವರು ಮತ್ತೊಂದಯ ಗೇಟಿನಿಂದ ಮನೆಯಿಂದ ನೇರವಾಗಿ ಏರ್​​ಪೋರ್ಟ್​​ಗೆ ತೆರಳಿದ್ದು, ಅಲ್ಲಿಂದ ಬೆಂಗಳೂರಿನಯತ್ತ ಪ್ರಯಾಣ ಬೆಳೆಸಿದ್ದಾರೆ. ಇದರಿಂದ ಡಿಕೆ ಬಣದ ಭೇಟಿಯಿಂದ ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸರ್ಕಾರಕ್ಕೆ ಎರಡುವರೆ ವರ್ಷ ತುಂಬಿದ ದಿನವೇ ಕಾಂಗ್ರೆಸ್​​ನಲ್ಲಿ ಮಹತ್ವ ಬೆಳವಣಿಗೆ: ದೆಹಲಿಗೆ ಹಾರಿದ ಸಚಿವರು, ಶಾಸಕರು!

ಒಕ್ಕಲಿಗ ಅಸ್ತ್ರ ಪ್ರಯೋಗ?

ಕುತೂಹಲಕಾರಿ ವಿಚಾರ ಅಂದ್ರೆ ದೆಹಲಿ ದಂಡಯಾತ್ರೆ ಕೈಗೊಂಡಿದ್ದು ಒಕ್ಕಲಿಗ ಸಮುದಾಯದ ನಾಯಕರು. ಹೀಗಾಗಿ ಡಿಕೆ ಪಡೆ ಒಕ್ಕಲಿಗ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಮುಂದಾಗಿದೆ. ಒಕ್ಕಲಿಗ ನಾಯಕರು ದೆಹಲಿಯಾತ್ರೆ ಕೈಗೊಂಡಿದ್ದು, ಹಳೇ ಮೈಸೂರು ಬಾಗದಲ್ಲಿ ಒಕ್ಕಲಿಗ ಸಮುದಾಯದ ಪ್ರಾಬಲ್ಯವಿದೆ. ಡಿಕೆಗೆ ಅವಕಾಶ ನೀಡದಿದ್ದರೆ ವಿರೋಧಿ ಪಡೆಗೆ ಶಕ್ತಿ ಸಿಗಲಿದೆ. ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ನಮಗೆ ಡ್ಯಾಮೇಜ್ ಆಗಿದೆ ಅಂತಾ ವಾದ ಮುಂದಿಡುವ ಸಾಧ್ಯತೆ ಇದೆ. ಹಾಗೆಯೇ 3 ಪ್ರತ್ಯೇಕ ತಂಡಗಳಲ್ಲಿ ಡಿಕೆ ಬಣ ದೆಹಲಿ ಪ್ರವಾಸ ಮಾಡಲು ನಿರ್ಧರಿಸಿದ್ದಾರಂತೆ. ಪ್ರತಿ ತಂಡದಲ್ಲಿ ತಲಾ 10 ಶಾಸಕರಂತೆ ದೆಹಲಿ ಭೇಟಿ ನೀಡಿ, 30ಕ್ಕೂ ಹೆಚ್ಚು ಶಾಸಕರು ಹೈಕಮಾಂಡ್ ಮುಂದೆ ಪರೇಡ್ ನಡೆಸಲು ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ. ಈ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹಾಕಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಅಲ್ಲದೇ ನಮಗೂ ಶಾಸಕರ ಬೆಂಬಲ ಇದೆ ಎಂಬ ಸಂದೇಶ ನೀಡಲು ಮುಂದಾಗಿದ್ದಾರೆ. ಆದ್ರೆ ಶಾಸಕರು ಹೋಗುವ ಮುನ್ನವೇ ದೆಹಲಿಗೆ ಹೋಗಿರೋ ಚಲುವರಾಯಸ್ವಾಮಿ ಟಿವಿ9 ಜೊತೆ ಮಾತನಾಡಿದ್ದಾರೆ. ಶಾಸಕರು ದೆಹಲಿಗೆ ಬಂದಿರೋ ವಿಚಾರ ನನಗೆ ಗೊತ್ತಿಲ್ಲ. ಮಾಹಿತಿನೂ ಇಲ್ಲ ಎಂದಿದ್ದಾರೆ. ಇನ್ನೂ ಶಿವಗಂಗಾ ಬಸವರಾಜ್ ಕೂಡಾ ನಾನು ದೆಹಲಿಗೆ ಹೋಗಿದ್ದಾರೆ ಎನ್ನಲಾಗಿತ್ತು. ಆದ್ರೆ, ಬಸವರಾಜ್ ಕೂಡಾ ನಾನು ದೆಹಲಿಗೆ ಹೋಗಿಲ್ಲ ಎಂದಿದ್ದಾರೆ.

ಡಿಕೆ ಶಿವಕುಮಾರ್ ನಿವಾಸದಲ್ಲಿ ಮತ್ತೊಂದು ಬಣ ಸಭೆ

ಒಂದು ಬಣ ದೆಹಲಿಗೆ ತೆರಳಿದ್ದರೆ ಮತ್ತೊಂದು ಬಣ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸದಲ್ಲಿ ಸಭೆ ಸೇರಿದೆ. ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಶ್ರೀನಿವಾಸ್, ರಾಮೋಜಿಗೌಡ, ಬಲ್ಕೀಸ್ ಬಾನು ಮತ್ತು ಬಸನಗೌಡ ಬಾದರ್ಲಿ ಅವರು ಡಿಕೆ ಶಿವಕುಮಾರ್ ನಿವಾಸಕ್ಕೆ ದೌಡಾಯಿಸಿದ್ದು, ಸುಮಾರು 1 ಗಂಟೆಗೂ ಹೆಚ್ಚು ಕಾಲ ಡಿಕೆಶಿ ಜೊತೆ ಸಭೆ ನಡೆಸಿದ್ದಾರೆ.

ಖರ್ಗೆ ಭೇಟಿಗೆ ಡಿಕೆಶಿ ಬಣ ಪ್ಲ್ಯಾನ್

ಒಂದೆಡೆ ಡಿಕೆಶಿ ಬಣ ದೆಹಲಿಯಲ್ಲಿ ಹಾರಿದ್ದರೆ, ಮತ್ತೊಂದು ಬಣ ಡಿಕೆ ಶಿವಕುಮಾರ್ ನಿವಾದಸದಲ್ಲಿ ರಹಸ್ಯ ಸಭೆ ನಡೆಸಿದ್ದು, ಇದೀಗ ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಬಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಗೆ ಮುಂದಾಗಿದ್ದಾರೆ. ಇದಕ್ಕೆ ಖರ್ಗೆ ಸಹ ಸಮಯ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಡಿಕೆ ಟೀಮ್ ದೆಹಲಿಗೆ ಹೋಗಿದೆ. ಹಾಗಂತ ಸಿಎಂ ಬಣ ಸುಮ್ನೆ ಕೂತಿಲ್ಲ. ಸಿದ್ದರಾಮಯ್ಯ ಬೆಂಬಲಿಗರು ಕೂಡಾ ರೆಡಿ ಆದಂತೆ ಕಾಣುತ್ತಿದೆ. ಯಾಕಂದ್ರೆ ಸಿದ್ದರಾಮಯ್ಯ ಆಪ್ತರು, ಶಾಸಕಾಂಗ ಸಭೆಯ ತಂತ್ರಗಾರಿಕೆ ಮುಂದಿಡಲು ಚಿಂತನೆ ನಡೆಸಿದ್ದಾರೆ. ನಾಯಕತ್ವ ಪ್ರಸ್ತಾಪ ಮಾಡಿದ್ರೆ ಮುಂದಿನ ನಿರ್ಣಯ CLPಯಲ್ಲೇ ಆಗ್ಬೇಕೆಂದು ದಾಳ ಉರುಳಿಸಲಿದ್ದಾರೆ. ಈಗಾಗಲೇ ಮುಂದಿನ ಎರಡೂವರೆ ವರ್ಷ ಸಿದ್ದರಾಮಯ್ಯನವರೇ ಸಿಎಂ, ಸಿದ್ದರಾಮಯ್ಯನವರೇ ಅನಿವಾರ್ಯ ಅಂತಾ ಪ್ರತಿದಾಳ ಉರುಳಿಸಿದ್ದಾರೆ.

ಒಟ್ಟಿನಲ್ಲಿ ಡಿಕೆ ಶಿವಕುಮಾರ್ ತಾಳ್ಮೆ ಕಳೆದುಕೊಂಡಿದ್ದು, ಸರ್ಕಾರಕ್ಕೆ ಎರಡುವರೆ ವರ್ಷ ತುಂಬುತ್ತಿದ್ದಂತೆಯೇ ನವೆಂಬರ್ ಕ್ರಾಂತಿ ಚಟುವಟಿಕೆಗಳು ಗರಿಗೆದರಿವೆ. ಇದು ಯಾವ ಹಂತಕ್ಕೆ ಹೋಗಿ ನಿಲ್ಲುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 9:48 pm, Thu, 20 November 25

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ