AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 2 ನರ್ಸಿಂಗ್​ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ನರ್ಸಿಂಗ್​ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ವಿದ್ಯಾರ್ಥಿಗಳು ಒಂದೇ ಕಟ್ಟಡದಲ್ಲಿ ಆನ್​ಲೈನ್​ ಕ್ಲಾಸ್​ನಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ರಾಜ್ಯದ 2 ನರ್ಸಿಂಗ್​ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ದೃಢ
ಕೊವಿಡ್​ ಪರೀಕ್ಷೆ (ಪ್ರಾತಿನಿಧಿಕ ಚಿತ್ರ)
KUSHAL V
|

Updated on:Dec 24, 2020 | 6:20 PM

Share

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ನರ್ಸಿಂಗ್​ ಕಾಲೇಜಿನ 15 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿಗಳು ಒಂದೇ ಕಟ್ಟಡದಲ್ಲಿ ಆನ್​ಲೈನ್​ ಕ್ಲಾಸ್​ನಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, ಒಬ್ಬರಿಂದ ಹದಿನೈದು ವಿದ್ಯಾರ್ಥಿಗಳಿಗೆ ಸೋಂಕು ಹಬ್ಬಿರುವ ಶಂಕೆ ವ್ಯಕ್ತವಾಗಿದೆ ಎಂದು DHO ಡಾ.ರವಿ ಮಾಹಿತಿ ನೀಡಿದ್ದಾರೆ.

ದಾವಣಗೆರೆಯಲ್ಲಿ ಒಂದೇ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೊರೊನಾ ಇತ್ತ, ಬೆಣ್ಣೆನಗರಿ ದಾವಣಗೆರೆಯಲ್ಲಿ ಸಹ ಒಂದೇ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಇಲ್ಲೂ ಕೂಡ ಜಿಲ್ಲೆಯಲ್ಲಿರುವ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ, ಎಲ್ಲಾ ಸೋಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಟಿವಿ9ಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾಹಿತಿ ಕೊಟ್ಟಿದ್ದಾರೆ.

ನಿನ್ನೆ ಸಂಜೆ ವೇಳೆ ವಿದ್ಯಾರ್ಥಿಗಳ ಗಂಟಲು ದ್ರವವನ್ನು ಸಂಗ್ರಹಿಸಲಾಗಿತ್ತು. ಸದ್ಯ, ಬಹುತೇಕರು ಆರೋಗ್ಯವಾಗಿದ್ದಾರೆ. ಇಷ್ಟರಲ್ಲಿ ಆಸ್ಪತ್ರೆ ಯಿಂದ ಅವರನ್ನ ಡಿಸ್​ಚಾರ್ಜ್ ಮಾಡಲಾಗುವುದು. ವಿದ್ಯಾರ್ಥಿಗಳಲ್ಲಿ ಗಂಭೀರ ಸ್ವರೂಪದ ಸೋಂಕಿನ ಲಕ್ಷಣಗಳು ಇಲ್ಲ ಎಂದು ಡಾ.ರಾಘವನ್ ಹೇಳಿದ್ದಾರೆ.

ಕೇರಳದಿಂದ ಬಂದಿರುವ ನಾಲ್ಕು ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಆ ನಾಲ್ಕು ವಿದ್ಯಾರ್ಥಿನಿಯರಿಗೆ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರ ಸಂಪರ್ಕದಲ್ಲಿ ಇದ್ದವರನ್ನು ಟೆಸ್ಟ್ ಮಾಡಿಸಿದಾಗ ಒಟ್ಟು 21 ಪಾಸಿಟಿವ್ ಕೇಸ್ ಕಂಡು ಬಂದಿವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದ್ದಾರೆ.

ಸದ್ಯ, ಎಲ್ಲರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕದಲ್ಲಿ ಇದ್ದ 362 ಜನರಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಟಿವಿ9ಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ಕೊಟ್ಟಿದ್ದಾರೆ.

ಕೊರೊನಾ ಅವತಾರ್​ 2 ಮಧ್ಯೆ ಅಧಿಕಾರಿಗಳ ನಿರ್ಲಕ್ಷ್ಯ: ವಿದೇಶದಿಂದ ಬರೋರಿಗೆ ಹಾಕ್ತಿಲ್ಲ ಸೀಲ್!

Published On - 4:27 pm, Thu, 24 December 20

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್