AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣ ಸೆಲ್​​​​​​​ನಲ್ಲಿ ಸಿಕ್ಕ ಮೊಬೈಲ್, ಪೆನ್​​​​ಡ್ರೈವ್​​​​​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ದಿನಾಲೂ ಸುದ್ದಿಯಲ್ಲಿರುತ್ತೆ.ಕಾರಣ ವಿಐಪಿ ಖೈದಿಗಳ ಸಂಖ್ಯೆ ಜಾಸ್ತಿ ಆಗಿರೋದು.ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಮತ್ತೆ ಸದ್ದು ಮಾಡಿದ್ದು, ಫೋನ್,ಪೆನ್ ಡ್ರೈವ್ ಇಟ್ಟುಕೊಂಡು ಸಿಸಿಬಿ ಕೈಯಲ್ಲಿ ಸಿಕ್ಕಿಬಿದ್ದಿದ್ದಾರೆ. ಹೈಪ್ರೊಫೈಲ್ ಕೈದಿ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾಗಿರುವುದು ಕಾರಾಗೃಹ ಇಲಾಖೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಅದರಲ್ಲೂ ಮುಖ್ಯವಾಗಿ ಪ್ರಜ್ವಲ್ ಬಳಿ ಇದ್ದ ಮೊಬೈಲ್​​ ಹಾಗೂ ಪೆನ್​ ಡ್ರೈವ್​​​​ನ್ಲಲಿ ಅಶ್ಲೀಲ ವಿಡಿಯೋಗಳು ಇರುವುದು ಕಂಡುಬಂದಿದೆ.

ಪ್ರಜ್ವಲ್ ರೇವಣ್ಣ ಸೆಲ್​​​​​​​ನಲ್ಲಿ ಸಿಕ್ಕ ಮೊಬೈಲ್, ಪೆನ್​​​​ಡ್ರೈವ್​​​​​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ
Prajwal Revanna
ಪ್ರದೀಪ್​ ಚಿಕ್ಕಾಟಿ
| Edited By: |

Updated on:Aug 12, 2026 | 9:30 PM

Share

ಬೆಂಗಳೂರು, ಆಗಸ್ಟ್ 12): ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ (parappana agrahara central Jail) ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna)  ಬಳಿ ಮೊಬೈಲ್ ಹಾಗೂ ಪೆನ್​​​​​ಡ್ರೈವ್ ಪತ್ತೆಯಾಗಿದೆ. ಇದು ಕಾರಾಗೃಹ ಇಲಾಖೆಯಲ್ಲಿ ದೊಡ್ಡ ಸಂಚಲನ ಮೂಡಿಸಿದ್ದು, ಮೊಬೈಲ್ ಹಾಗೂ ಪೆನ್​​​ಡ್ರೈವ್​​​​ನಲ್ಲಿ ಏನೇನಿದೆ ಎನ್ನುವುದು ಪರಿಶೀಲನೆ ನಡೆಸಿದಾಗ ಪೊಲೀಸ್ ಅಧಿಕಾರಿಗಳು ಶಾಕ್ ಆಗಿದ್ದಾರೆ. ಹೌದು….ಪ್ರಜ್ವಲ್ ಬಳಿ ಇದ್ದ ಮೊಬೈಲ್ ಹಾಗೂ ಪೆನ್​​​ಡ್ರೈವ್​​​ನಲ್ಲಿ ಅಶ್ಲೀಲ ವಿಡಿಯೋಗಳು ಇರುವುದು ಪತ್ತೆಯಾಗಿವೆ.ಅಲ್ಲದೇ ಯುವತಿಯರ ಅಶ್ಲೀಲ ಫೋಟೋಗಳ ಕಟ್ಟಿಂಗ್ ಗಳು ಇರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ಪ್ರಜ್ವಲ್ ರೇವಣ್ಣನನ್ನು ವಿಐಪಿ ಸೆಲ್​​​​​​​​​​ನಿಂದ ಸಾಮಾನ್ಯ ಸಜಾ ಬಂಧಿಗಳ ಸೆಲ್​​​​ಗೆ ಶಿಫ್ಟ್ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ಆಡಿಯೋ ರೆಕಾರ್ಡ್ ಪತ್ತೆ

ಪ್ರಜ್ವಲ್ ರೇವಣ್ಣ ಬಳಿ ಸಿಕ್ಕ ಮೊಬೈಲ್​​​​​ನಲ್ಲಿ ಕೇವಲ ಅಶ್ಲೀಲ ವಿಡಿಯೋಗಳು ಜೊತೆಗೆ ಆಡಿಯೋ ಸಂಭಾಷಣೆ ಸಹ ಸಿಕ್ಕಿದೆ. ಹೊರಗಡೆ ಬಾ, ನಾನು ಅವರಿಗೆ ಪೋನ್ ಮಾಡಿಲ್ಲ. ನೀನು ಹೇಳಿದ ಮೇಲೆ ಮೊನ್ನೆ ಮಾಡಿದ್ದೆ. ಅತ್ತುಕೊಂಡು ಕೂತ್ತಿದ್ರು ನೀನು ಪೋನ್ ಮಾಡಿಲ್ಲ. ಏನ್ ಮಾಡ್ತಿದ್ದೆ, ಎಂದು ಅಪರಿಚಿತರೊಂದಿಗೆ ಮಾತನಾಡಿದ ಪೋನ್ ಸಂಭಾಷಣೆ ಸಿಕ್ಕಿದೆ. ಆದರೆ, ಯಾರ ಜೊತೆ ಮಾತನಾಡಿದ್ದು ಎನ್ನುವುದು ಗೊತ್ತಾಗಿಲ್ಲ.

ಪ್ರಜ್ವಲ್​​​​​​​​ಗೆ ಮೊಬೈಲ್ ಕೊಟ್ಟಿದ್ಯಾರು?

ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ನೀಲಿ ಬಣ್ಣದ Redmi 5g ಮೊಬೈಲ್ ಫೋನ್ , ಒಂದು ಚಾರ್ಜರ್ , ಒಂದು ನೀಲಿ ಪಾಕೆಟ್ ನೋಟ್‌ಬುಕ್ ಹಾಗೂ ಒಂದು ಕಪ್ಪು ಬಣ್ಣದ ಸ್ಯಾಂಡಿಸ್ಕ್ ಪೆನ್‌ಡ್ರೈವ್ ಸಿಕ್ಕಿದೆ. ಆದ್ರೆ, ಮೊಬೈಲ್ ಹಾಗೂ ಪೆನ್​​​​ಡ್ರೈವ್​​​ನಲ್ಲಿ ಅಶ್ಲೀಲ ವಿಡಿಯೋಗಳು ಇರುವುದು ಕಂಡುಬಂದಿದ್ದು, ಅಚ್ಚರಿಗೆ ಕಾರಣವಾಗಿದೆ. ಹಾಗಾದ್ರೆ, ಪ್ರಜ್ವಲ್ ರೇವಣ್ಣಗೆ ಮೊಬೈಲ್, ಪೆನ್​​​ಡ್ರೈವ್ ಕೊಟ್ಟವರು ಯಾರು? ಅದರಲ್ಲಿ ಅಶ್ಲೀಲ ವಿಡಿಯೋಗಳು ಹೇಗೆ ಬಂದವು ಎನ್ನುವುದನ್ನು ಪ್ರಜ್ವಲ್ ರೇವಣ್ಣ ಬಾಯಿ ಬಿಡುತ್ತಿಲ್ಲ. ಹೀಗಾಗಿ ಇದು ನಿಗೂಢವಾಗಿದ್ದು, ಈ ಸಂಬಂಧ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ಅವರು, ಜೈಲು ಸುಪರಿಡೆಂಟ್​​​​ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ಸಿಸಿಬಿ ದಾಳಿ: ಪ್ರಜ್ವಲ್ ರೇವಣ್ಣ​ ಬ್ಯಾರಕ್​ನಲ್ಲಿದ್ದ ಫೋನ್​​​​ನಲ್ಲಿ ಏನೇನು ಸಿಕ್ತು? ಸ್ಫೋಟಕ ಅಂಶ ಬಿಚ್ಚಿಟ್ಟ ಅಲೋಕ್​​ ಕುಮಾರ್

ಸಾಮಾನ್ಯ ಸೆಲ್​​​ಗೆ ಶಿಫ್ಟ್, ಲೈಬ್ರರಿ ಕೆಲಸ ಮಾಡುವಂತೆ ತಾಕೀತು

ಇನ್ನು ಮೊಬೈಲ್ ಸಿಕ್ಕ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪ್ರಜ್ವಲ್​​​ನ್ನು ವಿಐಪಿಯಿಂದ ಸಮಾನಾ್ಯ ಸಜಾ ಬಂಧಿ ಖೈದಿಗಳ ಸೆಲ್​​​​ಗೆ ಶಿಫ್ಟ್ ಮಾಡಲಾಗಿದೆ. ವಿಐಪಿ ಸೆಲ್​​​​​​ನಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಮತ್ತೋರ್ವ ವಿಚಾರಣಾ ಖೈದಿ ಪ್ರತಾಪ್ ರಾಯ್ ಇದ್ದರು. ಪೊಕ್ಸೋ ಕೇಸ್ ನಲ್ಲಿ ಬಂಧಿತ ಪ್ರತಾಪ್ ರಾಯ್, ಪ್ರಜ್ವಲ್ ರೇವಣ್ಣಗೆ ಅಸಿಸ್ಟೆಂಟ್ ರೀತಿ ಇದ್ದ ಎಂದು ತಿಳಿದುಬಂದಿದೆ. ಇದೀಗ ಪ್ರಜ್ವಲ್​​​​ 20 ಖೈದಿಗಳ ಜೊತೆ ಒಂದೇ ಟಾಯ್ಲೆಟ್ ಇರೋ ಸೆಲ್​​​​​​​​​​​​​​​​​​​​​​​ ಗತಿಯಾಗಿದೆ. ಇನ್ನು ಇಪ್ಪತ್ತು ಖೈದಿಗಳಿಗೆ ಇರುವುದು ಒಂದೇ ಟಾಯ್ಲೆಟ್. ಹೀಗಾಗಿ ಪ್ರಜ್ವಲ್ 20 ಖೈದಿಗಳ ಜೊತೆ ಒಂದೇ ಟಾಯ್ಲೆಟ್ ಬಳಸಬೇಕಿದೆ. ಅಲ್ಲದೆ ಯೂನಿಫಾರ್ಮ್ ಹಾಕಿ ಲೈಬ್ರರಿ ಕೆಲಸ ಮಾಡಲು ಸೂಚನೆ ನೀಡಲಾಗಿದೆ. ಕಠಿಣ ಶಿಕ್ಷೆ ಹಿನ್ನೆಲೆ ಜೈಲಿನ ಕಡ್ಡಾಯ ಸಮವಸ್ತ್ರ ಧರಿಸಿ ಲೈಬ್ರರಿ ಕೆಲಸ ಮಾಡಲು ತಿಳಿಸಲಾಗಿದೆ.

ತನಿಖೆಗೆ ಸೂಚನೆ

ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಈರಣ್ಣ ರಂಗಾಪುರರನ್ನು ಅಮಾನತುಗೊಳಿಸಲಾಗಿದೆಅಷ್ಟೇ ಅಲ್ಲದೆ, ಜೈಲು ಎಸ್.ಪಿ ಅನ್ಶುಕುಮಾರ್ ಗೂ ಜೈಲು ಡಿಜಿಪಿ ಅಲೋಕ್ ಕುಮಾರ್ ನೋಟಿಸ್ ಜಾರಿ ಮಾಡಿದ್ದು, ಕರ್ತವ್ಯ ಲೋಪಕ್ಕೆ ಕಾರಣ ನೀಡುವಂತೆ ಸೂಚಿಸಿದ್ದಾರೆ. ಕಳೆದ 6ರಂದು ಜೈಲಾಧಿಕಾರಿಗಳು ನಡೆಸಿದ್ದ ತಪಾಸಣೆಯಲ್ಲಿ ಸಿಗದ ಮೊಬೈಲ್ ಈಗ ಹೇಗೆ ಬಂತು, ಪ್ರಜ್ವಲ್‌ಗೆ ಮೊಬೈಲ್ ಕೊಟ್ಟವರು ಯಾರು ಎಂಬುದನ್ನು ತಕ್ಷಣವೇ ತನಿಖಡ ನಡೆಸಿ ಮಾಹಿತಿ ಕೊಡಿ ಎಂದು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:15 pm, Wed, 12 August 26

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ