AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​ನ ಕಲ್ಲುಬಾಳು ಗ್ರಾಮದಲ್ಲಿ ಲಿವಿಂಗ್​ ಟುಗೆದರ್​ನಲ್ಲಿದ್ದ ಜೋಡಿ ಆತ್ಮಹತ್ಯೆ

ಲಿವಿಂಗ್​ ಟುಗೆದರ್​ನಲ್ಲಿದ್ದ ಜೋಡಿ ಆತ್ಮಹತ್ಯೆಗೆ ಶರಣಾಧ ಘಟನೆ ಕಲ್ಲುಬಾಳು ಗ್ರಾಮದಲ್ಲಿ ನಡೆದಿದೆ. ಎರಡು ದಿನಗಳಿಂದ ಮನೆ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರು ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಗೊತ್ತಾಗಿದೆ. ಸ್ಥಳಕ್ಕೆ ಎಎಸ್​​ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆನೇಕಲ್​ನ ಕಲ್ಲುಬಾಳು ಗ್ರಾಮದಲ್ಲಿ ಲಿವಿಂಗ್​ ಟುಗೆದರ್​ನಲ್ಲಿದ್ದ ಜೋಡಿ ಆತ್ಮಹತ್ಯೆ
ಆತ್ಮಹತ್ಯೆಗೆ ಶರಣಾದ ಜೋಡಿ
ರಾಮು, ಆನೇಕಲ್​
| Updated By: ಪ್ರಸನ್ನ ಹೆಗಡೆ|

Updated on: Oct 21, 2025 | 1:37 PM

Share

ಆನೇಕಲ್​, ಅಕ್ಟೋಬರ್​ 21: ಲಿವಿಂಗ್​ ಟುಗೆದರ್​ ನಲ್ಲಿದ್ದ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಒಡಿಶಾ ಮೂಲದ ಸೀಮಾ ನಾಯಕ್(25) ಮತ್ತು ರಾಕೇಶ್(23) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಎರಡು ದಿನಗಳಿಂದ ಮನೆ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರು ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಗೊತ್ತಾಗಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಎಎಸ್​​ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೋಡಿ ಮಧ್ಯೆ ಪದೇ ಪದೇ ಕಲಹ ಉಂಟಾಗುತ್ತಿತ್ತು. ಕುಡಿದು ಬಂದು ರಾಕೇಶ್ ಜಗಳ ಮಾಡುತ್ತಿದ್ದ. ಭಾನುವಾರವೂ ಸೀಮಾ ನಾಯಕ್ ಜೊತೆ ಜಗಳ ಮಾಡಿದ್ದ. ಬೆಳಗ್ಗೆ ಎದ್ದಾಗ ರಾಕೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಸೀಮಾ ಗಮನಕ್ಕೆ ಬಂದಿದೆ. ಆತನಿಗೆ ಇನ್ನೂ ಜೀವ ಇರಬಹುದು ಎಂಬ ನಂಬಿಕೆಯಿಂದ ರಾಕೇಶ್​ ಉಳಿಸಿಕೊಳ್ಳಲು ಒಂದಿಷ್ಟು ಪ್ರಯತ್ನಗಳನ್ನು ಸೀಮಾ ಮಾಡಿದ್ದಾರೆ. ಆದರೆ ಆತ ಮೃತಪಟ್ಟಿರೋದು ದೃಢವಾಗುತ್ತಿದ್ದಂತೆ ಸೀಮಾ ಕೂಡ ನೇಣಿಗೆ ಶರಾಣಗಿರೋದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ: 3 ಬಾಲಕರು ನೀರುಪಾಲು, ಸಾಲಿಗ್ರಾಮದಲ್ಲಿ ನೀರವ ಮೌನ

ಮತ್ತೋರ್ವ ಬಾಲಕನ ಶವ ಪತ್ತೆ

ಮೈಸೂರು ಜಿಲ್ಲೆ ಸಾಲಿಗ್ರಾಮ ಪಟ್ಟಣದಲ್ಲಿ ಕಾಲುವೆಗೆ ಈಜಲು ಇಳಿದಿದ್ದ ಮೂರು ಬಾಲಕರ ದಾರುಣ ಸಾವು ಪ್ರಕರಣ ಸಂಬಂಧ ಮತ್ತೊಬ್ಬ ಬಾಲಕನ ಶವ ಪತ್ತೆಯಾಗಿದೆ. ಚಾಮರಾಜ ಎಡದಂಡೆ ಕಾಲುವೆಗೆ ಈಜಲು ಬಾಲಕರು ತೆರಳಿದ್ದ ಸಂದರ್ಭ ಅವಘಡ ನಡೆದಿತ್ತು. ಮೃತರಾದ ಅಯಾನ್ (16), ಆಜಾನ್ (13) ಶವ ನಿನ್ನೆಯೇ ಪತ್ತೆಯಾಗಿದ್ದು, ಮತ್ತೋರ್ವ ಬಾಲಕನಿಗಾಗಿ ಶೋಧ ಮುಂದುವರಿದಿತ್ತು. ಲುಕ್ಮಾನ್ (14) ಶವ ಕೂಡ ಈಗ ಪತ್ತೆಯಾಗಿದೆ.  ದೀಪಾವಳಿ ಹಬ್ಬದ ರಜೆ ಹಿನ್ನೆಲೆ ಸಂಜೆ 4 ಗಂಟೆ ಹೊತ್ತಿಗೆ ಬಾಲಕರು ಈಜಲು ತೆರಳಿದ್ದರು. ಆದರೆ, ಸಂಜೆಯಾದರೂ ಮಕ್ಕಳು ಮನೆಗೆ ಬಾರದ ಕಾರಣ ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ