AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣೇಗೌಡನಹಳ್ಳಿ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಯತ್ನ ಪ್ರಕರಣ: ಜೈಲಿನಲ್ಲೇ ಇದ್ದುಕೊಂಡು ಕೊಲೆಗೆ ಸಂಚು

ಫೆಬ್ರವರಿ 15 ರಂದು ರಾತ್ರಿ ವೇಳೆ ಸಲೀಂ ಪಾಷ ಮೇಲೆ ಇರ್ಫಾನ್ ಹಾಗು ಛೋಟು ಸೇರಿ ಮೂವರಿಂದ ಕೊಲೆಗೆ ಯತ್ನ ನಡೆದಿತ್ತು. ಈ ಪ್ರಕರಣದ ತನಿಖೆ ವೇಳೆ ಸಿಸಿ ಟಿವಿ ಆಧರಿಸಿ ತನಿಖೆ ನಡೆಸಿದ ನೆಲಮಂಗಲ ಗ್ರಾಮಾಂತರ ಪೊಲೀಸರು ಆರೋಪಿ ಇರ್ಫಾನ್​ನನ್ನು ವಶಕ್ಕೆ ಪಡೆದಿದ್ದಾರೆ.

ಕಣೇಗೌಡನಹಳ್ಳಿ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಯತ್ನ ಪ್ರಕರಣ: ಜೈಲಿನಲ್ಲೇ ಇದ್ದುಕೊಂಡು ಕೊಲೆಗೆ ಸಂಚು
ಮುಬಾರಕ್​ನನ್ನು ಕರೆದೊಯ್ಯುತ್ತಿರುವ ಪೊಲೀಸ್​
sandhya thejappa
| Edited By: |

Updated on: Feb 27, 2021 | 2:10 PM

Share

ನೆಲಮಂಗಲ: ಫೆಬ್ರವರಿ 15 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಇಸ್ಲಾಂಪುರದಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ವೇಳೆ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದೆ. ಕೊಲೆ ಪ್ರಕರಣವೊಂದರ ಅಪರಾಧಿ ಮುಬಾರಕ್ ಬೆಳಗಾವಿ ಜೈಲಿನಲ್ಲಿ ಇದ್ದುಕೊಂಡು ಕಣೇಗೌಡನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸಲೀಂ ಪಾಷ ಕೊಲೆಗೆ ಯೋಜನೆ ರೂಪಿಸಿ ಇಸ್ಲಾಂಪುರದ ಇರ್ಫಾನ್ ಹಾಗೂ ಛೋಟುಗೆ ಸುಪಾರಿ ಕೊಟ್ಟಿದ್ದರು ಎನ್ನುವ ಆರೋಪ ಇದೀಗ ಕೇಳಿ ಬಂದಿದೆ.

ಫೆಬ್ರವರಿ 15 ರಂದು ರಾತ್ರಿ ವೇಳೆ ಸಲೀಂ ಪಾಷ ಮೇಲೆ ಇರ್ಫಾನ್ ಹಾಗೂ ಛೋಟು ಸೇರಿ ಮೂವರಿಂದ ಕೊಲೆಗೆ ಯತ್ನ ನಡೆದಿತ್ತು. ಮುಖಕ್ಕೆ ಖಾರದ ಪುಡಿ ಎರಚಿ ದಾಳಿ ಮಾಡಿದ್ದರು. ಈ ಪ್ರಕರಣದ ತನಿಖೆ ವೇಳೆ ಸಿಸಿ ಟಿವಿ ಆಧರಿಸಿ ತನಿಖೆ ನಡೆಸಿದ ನೆಲಮಂಗಲ ಗ್ರಾಮಾಂತರ ಪೊಲೀಸರು ಆರೋಪಿ ಇರ್ಫಾನ್​ನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಕೊಲೆ ಪ್ರಕರಣದಿಂದ ಬೆಳಗಾವಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಮುಬಾರಕ್ ಹಾಗೂ ಸಲೀಂ ಪಾಷಗೆ ಹಳೆ ವೈಷಮ್ಯವಿತ್ತು. ವೈಷ್ಯಮದ ಹಿನ್ನೆಲೆ ಕೊಲೆ ಮಾಡಲು ಫೋನ್​ನಲ್ಲಿ ಕರೆ ಮಾಡಿ ಸುಪಾರಿ ಕೊಟ್ಟಿದ್ದರು. ಹಾಗಾಗಿ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಲೆ ಯತ್ನ ನಡೆಸಲಾಗಿದೆ ಎಂದು ಬಂಧಿತ ಆರೋಪಿ ಇರ್ಫಾನ್ ಬಾಯಿಬಿಟ್ಟಿದ್ದಾನೆ.

ತಲೆಮರೆಸಿಕೊಂಡಿರುವ ಛೋಟುಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದ್ದು, ಸದ್ಯ ಇರ್ಫಾನ್ ಮಾಹಿತಿ ಆಧರಿಸಿ ವಾರೆಂಟ್ ಪಡೆದ ಪೊಲೀಸರು ಮುಬಾರಕ್​ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇನ್ನು ಮುಬಾರಕ್ 2007 ರಲ್ಲಿ ರಾಮನಗರ ನಗರಸಭೆ ಸದಸ್ಯ ಫಯಾಜ್ ಖಾನ್​ನನ್ನು ನಡುಬೀದಿಯಲ್ಲಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: 

ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಉದ್ಯಮಿಗಳನ್ನ ಸಿಲುಕಿಸಿ ಲಕ್ಷ ಲಕ್ಷ ಹಣ ಸುಲಿಗೆ: ಮಂಗಳೂರು ಸಿಸಿಬಿ ಪೊಲೀಸರ ವಿರುದ್ಧ ಗಂಭೀರ ಆರೋಪ

ಕುಡಿದು ಬಂದು ಗಲಾಟೆ ಮಾಡಿದ್ದ ಮಗನನ್ನ ಕೊಲೆಗೈದ ತಂದೆ ಅರೆಸ್ಟ್​

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು