AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣೇಗೌಡನಹಳ್ಳಿ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಯತ್ನ ಪ್ರಕರಣ: ಜೈಲಿನಲ್ಲೇ ಇದ್ದುಕೊಂಡು ಕೊಲೆಗೆ ಸಂಚು

ಫೆಬ್ರವರಿ 15 ರಂದು ರಾತ್ರಿ ವೇಳೆ ಸಲೀಂ ಪಾಷ ಮೇಲೆ ಇರ್ಫಾನ್ ಹಾಗು ಛೋಟು ಸೇರಿ ಮೂವರಿಂದ ಕೊಲೆಗೆ ಯತ್ನ ನಡೆದಿತ್ತು. ಈ ಪ್ರಕರಣದ ತನಿಖೆ ವೇಳೆ ಸಿಸಿ ಟಿವಿ ಆಧರಿಸಿ ತನಿಖೆ ನಡೆಸಿದ ನೆಲಮಂಗಲ ಗ್ರಾಮಾಂತರ ಪೊಲೀಸರು ಆರೋಪಿ ಇರ್ಫಾನ್​ನನ್ನು ವಶಕ್ಕೆ ಪಡೆದಿದ್ದಾರೆ.

ಕಣೇಗೌಡನಹಳ್ಳಿ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಯತ್ನ ಪ್ರಕರಣ: ಜೈಲಿನಲ್ಲೇ ಇದ್ದುಕೊಂಡು ಕೊಲೆಗೆ ಸಂಚು
ಮುಬಾರಕ್​ನನ್ನು ಕರೆದೊಯ್ಯುತ್ತಿರುವ ಪೊಲೀಸ್​
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Feb 27, 2021 | 2:10 PM

ನೆಲಮಂಗಲ: ಫೆಬ್ರವರಿ 15 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಇಸ್ಲಾಂಪುರದಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ವೇಳೆ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದೆ. ಕೊಲೆ ಪ್ರಕರಣವೊಂದರ ಅಪರಾಧಿ ಮುಬಾರಕ್ ಬೆಳಗಾವಿ ಜೈಲಿನಲ್ಲಿ ಇದ್ದುಕೊಂಡು ಕಣೇಗೌಡನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸಲೀಂ ಪಾಷ ಕೊಲೆಗೆ ಯೋಜನೆ ರೂಪಿಸಿ ಇಸ್ಲಾಂಪುರದ ಇರ್ಫಾನ್ ಹಾಗೂ ಛೋಟುಗೆ ಸುಪಾರಿ ಕೊಟ್ಟಿದ್ದರು ಎನ್ನುವ ಆರೋಪ ಇದೀಗ ಕೇಳಿ ಬಂದಿದೆ.

ಫೆಬ್ರವರಿ 15 ರಂದು ರಾತ್ರಿ ವೇಳೆ ಸಲೀಂ ಪಾಷ ಮೇಲೆ ಇರ್ಫಾನ್ ಹಾಗೂ ಛೋಟು ಸೇರಿ ಮೂವರಿಂದ ಕೊಲೆಗೆ ಯತ್ನ ನಡೆದಿತ್ತು. ಮುಖಕ್ಕೆ ಖಾರದ ಪುಡಿ ಎರಚಿ ದಾಳಿ ಮಾಡಿದ್ದರು. ಈ ಪ್ರಕರಣದ ತನಿಖೆ ವೇಳೆ ಸಿಸಿ ಟಿವಿ ಆಧರಿಸಿ ತನಿಖೆ ನಡೆಸಿದ ನೆಲಮಂಗಲ ಗ್ರಾಮಾಂತರ ಪೊಲೀಸರು ಆರೋಪಿ ಇರ್ಫಾನ್​ನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಕೊಲೆ ಪ್ರಕರಣದಿಂದ ಬೆಳಗಾವಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಮುಬಾರಕ್ ಹಾಗೂ ಸಲೀಂ ಪಾಷಗೆ ಹಳೆ ವೈಷಮ್ಯವಿತ್ತು. ವೈಷ್ಯಮದ ಹಿನ್ನೆಲೆ ಕೊಲೆ ಮಾಡಲು ಫೋನ್​ನಲ್ಲಿ ಕರೆ ಮಾಡಿ ಸುಪಾರಿ ಕೊಟ್ಟಿದ್ದರು. ಹಾಗಾಗಿ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಲೆ ಯತ್ನ ನಡೆಸಲಾಗಿದೆ ಎಂದು ಬಂಧಿತ ಆರೋಪಿ ಇರ್ಫಾನ್ ಬಾಯಿಬಿಟ್ಟಿದ್ದಾನೆ.

ತಲೆಮರೆಸಿಕೊಂಡಿರುವ ಛೋಟುಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದ್ದು, ಸದ್ಯ ಇರ್ಫಾನ್ ಮಾಹಿತಿ ಆಧರಿಸಿ ವಾರೆಂಟ್ ಪಡೆದ ಪೊಲೀಸರು ಮುಬಾರಕ್​ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇನ್ನು ಮುಬಾರಕ್ 2007 ರಲ್ಲಿ ರಾಮನಗರ ನಗರಸಭೆ ಸದಸ್ಯ ಫಯಾಜ್ ಖಾನ್​ನನ್ನು ನಡುಬೀದಿಯಲ್ಲಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: 

ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಉದ್ಯಮಿಗಳನ್ನ ಸಿಲುಕಿಸಿ ಲಕ್ಷ ಲಕ್ಷ ಹಣ ಸುಲಿಗೆ: ಮಂಗಳೂರು ಸಿಸಿಬಿ ಪೊಲೀಸರ ವಿರುದ್ಧ ಗಂಭೀರ ಆರೋಪ

ಕುಡಿದು ಬಂದು ಗಲಾಟೆ ಮಾಡಿದ್ದ ಮಗನನ್ನ ಕೊಲೆಗೈದ ತಂದೆ ಅರೆಸ್ಟ್​

ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ
ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?