AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಬೈರೇಗೌಡ ಭೇಟಿ ವೇಳೆ ಕರ್ತವ್ಯಕ್ಕೆ ಗೈರು, ಓರ್ವ ಅಧಿಕಾರಿ ಸಸ್ಪೆಂಡ್, 11 ಜನರಿಗೆ ನೋಟಿಸ್

ಕಂದಾಯ ಸಚಿವ ಕೃಷ್ಣ ಭೈರೇಗೌಡ ಇಂದು (ಅ.30) ಬೆಳಗ್ಗೆ ಕೆ.ಆರ್.ಪುರಂ ತಾಲೂಕು ಕಚೇರಿಗೆ ‌ಭೇಟಿ ನೀಡಿದ್ದರು. ಈ ವೇಳೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್​ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರಕ್ಷಿತ್​ ಅವರನ್ನು ಅಮಾನತು ಮಾಡಲಾಗಿದೆ.

ಕೃಷ್ಣ ಬೈರೇಗೌಡ ಭೇಟಿ ವೇಳೆ ಕರ್ತವ್ಯಕ್ಕೆ ಗೈರು, ಓರ್ವ ಅಧಿಕಾರಿ ಸಸ್ಪೆಂಡ್, 11 ಜನರಿಗೆ ನೋಟಿಸ್
ಸಚಿವ ಕೃಷ್ಣ ಭೈರೇಗೌಡ
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ|

Updated on:Oct 30, 2024 | 10:48 PM

Share

ಬೆಂಗಳೂರು, ಅಕ್ಟೋಬರ್​ 30: ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಕಚೇರಿಗೆ ಭೇಟಿ ನೀಡಿದ್ದ ವೇಳೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್​ (Tehsildar) ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರಕ್ಷಿತ್​ ಅವರನ್ನು ಅಮಾನತು ಮಾಡಲಾಗಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಇಂದು (ಅ.30) ಬೆಳಗ್ಗೆ ಕೆ.ಆರ್.ಪುರಂ ತಾಲೂಕು ಕಚೇರಿಗೆ ‌ಭೇಟಿ ನೀಡಿದ್ದರು. ಈ ವೇಳೆ ಸಚಿವ ಕೃಷ್ಣ ಭೈರೇಗೌಡ ಕಚೇರಿಯಲ್ಲಿ ಸಿಬ್ಬಂದಿ ಹಾಜರಾತಿ ಪರಿಶೀಲಿಸಿದ್ದರು. ಈ ವೇಳೆ ದ್ವಿತೀಯ ದರ್ಜೆ ಸಹಾಯಕ ರಕ್ಷಿತ್ ಕಚೇರಿಗೆ ಗೈರು ಹಾಜರಾದ ವಿಚಾರ ತಿಳಿದು ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅಲ್ಲದೇ, ಕಚೇರಿಯ 11 ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ವಿಶೇಷ ತಹಶೀಲ್ದಾರ್​ ಎಸ್​.ಆರ್​.ಮಹೇಶ್, ಗ್ರೇಡ್-2 ತಹಶೀಲ್ದಾರ್ ಆರ್​.ಶೇಖರ್, ತಹಶೀಲ್ದಾರ್ ಬಿ.ಎನ್.ರಾಜೀವ್, ಶಿರಸ್ತೆದಾರ ಅತೀಕ್​ ಜಮೀಲ್​ ಖಾನ್, ಶಿರಸ್ತೆದಾರ ಸಿ.ಚಂದ್ರಮ್ಮ, ಎಫ್​ಡಿಎಗಳಾದ ಕೆ.ಪ್ರವೀಣ್, ಎ.ಜ್ಞಾನಶೇಖರ್, ಎಸ್​ಡಿಎಗಳಾದ ಎನ್.ರಕ್ಷಿತ್, ಡಿ.ಬಾಲಕೃಷ್ಣ, ಗ್ರಾಮ ಆಡಳಿತಾಧಿಕಾರಿ ಲಕ್ಷ್ಮೀದೇವಿ, ಗ್ರೂಪ್ ಡಿ ಸಿಬ್ಬಂದಿ ಎನ್.ಆರ್.ಮಂಜುನಾಥ್​ ಅವರಿಗೆ ಬೆಂಗಳೂರು ನಗರ ಹೆಚ್ಚುವರಿ ಜಿಲ್ಲಾಧಿಕಾರಿಯಿಂದ ಶೋಕಾಸ್ ನೋಟಿಸ್ ನೀಡಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:46 pm, Wed, 30 October 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!