AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಬೈರೇಗೌಡ ಭೇಟಿ ವೇಳೆ ಕರ್ತವ್ಯಕ್ಕೆ ಗೈರು, ಓರ್ವ ಅಧಿಕಾರಿ ಸಸ್ಪೆಂಡ್, 11 ಜನರಿಗೆ ನೋಟಿಸ್

ಕಂದಾಯ ಸಚಿವ ಕೃಷ್ಣ ಭೈರೇಗೌಡ ಇಂದು (ಅ.30) ಬೆಳಗ್ಗೆ ಕೆ.ಆರ್.ಪುರಂ ತಾಲೂಕು ಕಚೇರಿಗೆ ‌ಭೇಟಿ ನೀಡಿದ್ದರು. ಈ ವೇಳೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್​ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರಕ್ಷಿತ್​ ಅವರನ್ನು ಅಮಾನತು ಮಾಡಲಾಗಿದೆ.

ಕೃಷ್ಣ ಬೈರೇಗೌಡ ಭೇಟಿ ವೇಳೆ ಕರ್ತವ್ಯಕ್ಕೆ ಗೈರು, ಓರ್ವ ಅಧಿಕಾರಿ ಸಸ್ಪೆಂಡ್, 11 ಜನರಿಗೆ ನೋಟಿಸ್
ಸಚಿವ ಕೃಷ್ಣ ಭೈರೇಗೌಡ
ಕಿರಣ್​ ಹನಿಯಡ್ಕ
| Edited By: |

Updated on:Oct 30, 2024 | 10:48 PM

Share

ಬೆಂಗಳೂರು, ಅಕ್ಟೋಬರ್​ 30: ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಕಚೇರಿಗೆ ಭೇಟಿ ನೀಡಿದ್ದ ವೇಳೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್​ (Tehsildar) ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರಕ್ಷಿತ್​ ಅವರನ್ನು ಅಮಾನತು ಮಾಡಲಾಗಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಇಂದು (ಅ.30) ಬೆಳಗ್ಗೆ ಕೆ.ಆರ್.ಪುರಂ ತಾಲೂಕು ಕಚೇರಿಗೆ ‌ಭೇಟಿ ನೀಡಿದ್ದರು. ಈ ವೇಳೆ ಸಚಿವ ಕೃಷ್ಣ ಭೈರೇಗೌಡ ಕಚೇರಿಯಲ್ಲಿ ಸಿಬ್ಬಂದಿ ಹಾಜರಾತಿ ಪರಿಶೀಲಿಸಿದ್ದರು. ಈ ವೇಳೆ ದ್ವಿತೀಯ ದರ್ಜೆ ಸಹಾಯಕ ರಕ್ಷಿತ್ ಕಚೇರಿಗೆ ಗೈರು ಹಾಜರಾದ ವಿಚಾರ ತಿಳಿದು ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅಲ್ಲದೇ, ಕಚೇರಿಯ 11 ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ವಿಶೇಷ ತಹಶೀಲ್ದಾರ್​ ಎಸ್​.ಆರ್​.ಮಹೇಶ್, ಗ್ರೇಡ್-2 ತಹಶೀಲ್ದಾರ್ ಆರ್​.ಶೇಖರ್, ತಹಶೀಲ್ದಾರ್ ಬಿ.ಎನ್.ರಾಜೀವ್, ಶಿರಸ್ತೆದಾರ ಅತೀಕ್​ ಜಮೀಲ್​ ಖಾನ್, ಶಿರಸ್ತೆದಾರ ಸಿ.ಚಂದ್ರಮ್ಮ, ಎಫ್​ಡಿಎಗಳಾದ ಕೆ.ಪ್ರವೀಣ್, ಎ.ಜ್ಞಾನಶೇಖರ್, ಎಸ್​ಡಿಎಗಳಾದ ಎನ್.ರಕ್ಷಿತ್, ಡಿ.ಬಾಲಕೃಷ್ಣ, ಗ್ರಾಮ ಆಡಳಿತಾಧಿಕಾರಿ ಲಕ್ಷ್ಮೀದೇವಿ, ಗ್ರೂಪ್ ಡಿ ಸಿಬ್ಬಂದಿ ಎನ್.ಆರ್.ಮಂಜುನಾಥ್​ ಅವರಿಗೆ ಬೆಂಗಳೂರು ನಗರ ಹೆಚ್ಚುವರಿ ಜಿಲ್ಲಾಧಿಕಾರಿಯಿಂದ ಶೋಕಾಸ್ ನೋಟಿಸ್ ನೀಡಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:46 pm, Wed, 30 October 24

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ