AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳೇ ಮತದಾನದಿಂದ ವಂಚಿತ? ಇಡಿಸಿ ನೀಡಿಲ್ಲವೆಂದು ಆರೋಪ

ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ಅಧಿಕಾರಿ ಸಿಬ್ಬಂದಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಮತಗಟ್ಟೆಯಲ್ಲೇ ಮತದಾನಕ್ಕೆ ಅವಕಾಶ ಇದೆ. ಇದಕ್ಕೆ ಆಯಾ ಎಆರ್​ಓಗಳು ಇಡಿಸಿ ನೀಡಬೇಕು. ಅಧಿಕಾರಿ ಸಿಬ್ಬಂದಿಗಳು ತಾವು ಕರ್ತವ್ಯ ನಿರ್ವಹಿಸುವ ಮತಗಟ್ಟೆಯಲ್ಲೇ ಇ.ಡಿ.ಸಿ ಹಾಜರುಪಡಿಸಿ ಮತದಾನ ಮಾಡಲು ಅವಕಾಶ ಇರುತ್ತದೆ. ಆದರೆ ಹಲವಾರು ಮಂದಿಗೆ ಇಡಿಸಿ ಕೊಡದೆ ಮತದಾನದಿಂದ ವಂಚಿತ ಆರೋಪ ಮಾಡಲಾಗಿದೆ.

ಚುನಾವಣಾ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳೇ ಮತದಾನದಿಂದ ವಂಚಿತ? ಇಡಿಸಿ ನೀಡಿಲ್ಲವೆಂದು ಆರೋಪ
ಚುನಾವಣಾ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳೇ ಮತದಾನದಿಂದ ವಂಚಿತ? ಇಡಿಸಿ ನೀಡಿಲ್ಲವೆಂದು ಆರೋಪ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: May 09, 2024 | 1:26 PM

Share

ಚಾಮರಾಜನಗರ, ಮೇ 09: ರಾಜ್ಯದಲ್ಲಿ ಲೋಕಸಭೆಗೆ (Lok Sabha Elections) ಮೇ 07ರಂದು 2ನೇ ಹಂತದಲ್ಲಿ ಮತದಾನ ನಡೀತು. ಬಾಕಿ ಉಳಿದಿದ್ದ 14 ಕ್ಷೇತ್ರಗಳಿಗೆ ಯಶಸ್ವಿ ಮತದಾನ ಮಾಡಲಾಗಿದೆ. ಆದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಮತದಾನದಿಂದ ವಂಚಿತರಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ನಿರ್ದಿಷ್ಟ ವ್ಯಕ್ತಿಗೆ ಅಥವಾ ನಿರ್ದಿಷ್ಟ ಪಕ್ಷಕ್ಕೆ ಮತ ಹಾಕುತ್ತಾರೆಂದು ಅಂತಹವರಿಗೆ ಇಡಿಸಿ (Elections Duty Certificate) ನೀಡಿಲ್ಲ ಎಂಬ ಗಂಭೀರ ಆರೋಪ ಮಾಡಲಾಗಿದೆ.

ಒಂದೆಡೆ ಕೋಟಿ ಕೋಟಿ ರೂ. ಖರ್ಚು ಮಾಡಿ ಎಲೆಕ್ಷನ್ ಕಮಿಷನ್ ಮತದಾನದ ಜಾಗೃತಿ ಕಾರ್ಯಕ್ರಮ ಮಾಡಿದೆ. ಆದರೆ ಇನ್ನೊಂದೆಡೆ ಚುನಾವಣಾ ಕರ್ತವ್ಯ ಅಧಿಕಾರಿಗಳಿಗೆ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಅಂತ್ಯ: ಯಾವ್ಯಾವ ಕ್ಷೇತ್ರದಲ್ಲಿಎಷ್ಟು ಮತದಾನ? ಇಲ್ಲಿದೆ ವಿವರ

ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ಅಧಿಕಾರಿ ಸಿಬ್ಬಂದಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಮತಗಟ್ಟೆಯಲ್ಲೇ ಮತದಾನಕ್ಕೆ ಅವಕಾಶ ಇದೆ. ಇದಕ್ಕೆ ಆಯಾ ಎಆರ್​ಓಗಳು ಇಡಿಸಿ ನೀಡಬೇಕು. ಅಧಿಕಾರಿ ಸಿಬ್ಬಂದಿಗಳು ತಾವು ಕರ್ತವ್ಯ ನಿರ್ವಹಿಸುವ ಮತಗಟ್ಟೆಯಲ್ಲೇ ಇ.ಡಿ.ಸಿ ಹಾಜರುಪಡಿಸಿ ಮತದಾನ ಮಾಡಲು ಅವಕಾಶ ಇರುತ್ತದೆ. ಆದರೆ ಹಲವಾರು ಮಂದಿಗೆ ಇಡಿಸಿ ಕೊಡದೆ ಮತದಾನದಿಂದ ವಂಚಿತ ಆರೋಪ ಮಾಡಲಾಗಿದೆ.

ಅಗತ್ಯ ದಾಖಲೆಗಳೊಂದಿಗೆ 12A ಫಾರಂನಲ್ಲಿ ಅರ್ಜಿ ಸಲ್ಲಿಸಿದ್ದರೂ ಇಡಿಸಿ ನೀಡದೆ ವಂಚಿಸಲಾಗಿದೆ. ಗಣಕಯಂತ್ರದಲ್ಲಿ ಜನರೇಟ್ ಮಾಡಿದ್ದರೂ ಸಹಿ ಹಾಕಿ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗೆ ವಿತರಣೆ ಮಾಡಿಲ್ಲ ಎಂದು ಮತದಾನದಿಂದ ವಂಚಿತರಾದ ಸಿಬ್ಬಂದಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬೇಸರ ಮುಖದಲ್ಲಿ ತೋರ್ಪಡಿಸಿಕೊಳ್ಳದಿದ್ದರೂ ಒಲ್ಲದ ಮನಸ್ಸಿನಿಂದ ಸಾಯಂಕಾಲ ವೋಟು ಮಾಡಲು ಬಂದ ಅನಂತಕುಮಾರ್ ಹೆಗಡೆ

ನಿರ್ದಿಷ್ಟ ವ್ಯಕ್ತಿಗೆ ಅಥವಾ ನಿರ್ದಿಷ್ಟ ಪಕ್ಷಕ್ಕೆ ಮತ ಹಾಕುತ್ತಾರೆಂದು ಅಂತಹವರಿಗೆ ಇಡಿಸಿ ನೀಡಿಲ್ಲ ಎಂಬ ಗಂಭೀರ ಆರೋಪ ಮಾಡಿದ್ದು ಮತದಾನದಿಂದ ವಂಚಿಸುವ ದುರುದ್ದೇಶದಿಂದಲೇ ಇಡಿಸಿ ನೀಡಲಿಲ್ಲ ಎನ್ನಲಾಗುತ್ತಿದೆ.

ಇಡಿಸಿ ಸಿಗದೆ ಮತದಾನದಿಂದ ವಂಚಿತರಾದವರು ದೂರು ನೀಡಿದರೆ ಸಂಬಂಧಿಸಿದವರ ವಿರುದ್ದ ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಹೇಳಿದ್ದಾರೆ. ಆದರೆ 12A ನಲ್ಲಿ ಅರ್ಜಿ ಸಲ್ಲಿಸದವರೆಲ್ಲರಿಗೂ ಇಡಿಸಿ ನೀಡಲಾಗಿದೆ ಎಂದು ಜಿಲ್ಲಾಡಳಿತ ಸಮರ್ಥನೆ ನೀಡಿದೆ. ಹಾಗಾದರೆ ಯಾರದ್ದು ಸರಿ? ಯಾರದ್ದು ತಪ್ಪು ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ