AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳೇ ಮತದಾನದಿಂದ ವಂಚಿತ? ಇಡಿಸಿ ನೀಡಿಲ್ಲವೆಂದು ಆರೋಪ

ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ಅಧಿಕಾರಿ ಸಿಬ್ಬಂದಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಮತಗಟ್ಟೆಯಲ್ಲೇ ಮತದಾನಕ್ಕೆ ಅವಕಾಶ ಇದೆ. ಇದಕ್ಕೆ ಆಯಾ ಎಆರ್​ಓಗಳು ಇಡಿಸಿ ನೀಡಬೇಕು. ಅಧಿಕಾರಿ ಸಿಬ್ಬಂದಿಗಳು ತಾವು ಕರ್ತವ್ಯ ನಿರ್ವಹಿಸುವ ಮತಗಟ್ಟೆಯಲ್ಲೇ ಇ.ಡಿ.ಸಿ ಹಾಜರುಪಡಿಸಿ ಮತದಾನ ಮಾಡಲು ಅವಕಾಶ ಇರುತ್ತದೆ. ಆದರೆ ಹಲವಾರು ಮಂದಿಗೆ ಇಡಿಸಿ ಕೊಡದೆ ಮತದಾನದಿಂದ ವಂಚಿತ ಆರೋಪ ಮಾಡಲಾಗಿದೆ.

ಚುನಾವಣಾ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳೇ ಮತದಾನದಿಂದ ವಂಚಿತ? ಇಡಿಸಿ ನೀಡಿಲ್ಲವೆಂದು ಆರೋಪ
ಚುನಾವಣಾ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳೇ ಮತದಾನದಿಂದ ವಂಚಿತ? ಇಡಿಸಿ ನೀಡಿಲ್ಲವೆಂದು ಆರೋಪ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: May 09, 2024 | 1:26 PM

Share

ಚಾಮರಾಜನಗರ, ಮೇ 09: ರಾಜ್ಯದಲ್ಲಿ ಲೋಕಸಭೆಗೆ (Lok Sabha Elections) ಮೇ 07ರಂದು 2ನೇ ಹಂತದಲ್ಲಿ ಮತದಾನ ನಡೀತು. ಬಾಕಿ ಉಳಿದಿದ್ದ 14 ಕ್ಷೇತ್ರಗಳಿಗೆ ಯಶಸ್ವಿ ಮತದಾನ ಮಾಡಲಾಗಿದೆ. ಆದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಮತದಾನದಿಂದ ವಂಚಿತರಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ನಿರ್ದಿಷ್ಟ ವ್ಯಕ್ತಿಗೆ ಅಥವಾ ನಿರ್ದಿಷ್ಟ ಪಕ್ಷಕ್ಕೆ ಮತ ಹಾಕುತ್ತಾರೆಂದು ಅಂತಹವರಿಗೆ ಇಡಿಸಿ (Elections Duty Certificate) ನೀಡಿಲ್ಲ ಎಂಬ ಗಂಭೀರ ಆರೋಪ ಮಾಡಲಾಗಿದೆ.

ಒಂದೆಡೆ ಕೋಟಿ ಕೋಟಿ ರೂ. ಖರ್ಚು ಮಾಡಿ ಎಲೆಕ್ಷನ್ ಕಮಿಷನ್ ಮತದಾನದ ಜಾಗೃತಿ ಕಾರ್ಯಕ್ರಮ ಮಾಡಿದೆ. ಆದರೆ ಇನ್ನೊಂದೆಡೆ ಚುನಾವಣಾ ಕರ್ತವ್ಯ ಅಧಿಕಾರಿಗಳಿಗೆ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಅಂತ್ಯ: ಯಾವ್ಯಾವ ಕ್ಷೇತ್ರದಲ್ಲಿಎಷ್ಟು ಮತದಾನ? ಇಲ್ಲಿದೆ ವಿವರ

ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ಅಧಿಕಾರಿ ಸಿಬ್ಬಂದಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಮತಗಟ್ಟೆಯಲ್ಲೇ ಮತದಾನಕ್ಕೆ ಅವಕಾಶ ಇದೆ. ಇದಕ್ಕೆ ಆಯಾ ಎಆರ್​ಓಗಳು ಇಡಿಸಿ ನೀಡಬೇಕು. ಅಧಿಕಾರಿ ಸಿಬ್ಬಂದಿಗಳು ತಾವು ಕರ್ತವ್ಯ ನಿರ್ವಹಿಸುವ ಮತಗಟ್ಟೆಯಲ್ಲೇ ಇ.ಡಿ.ಸಿ ಹಾಜರುಪಡಿಸಿ ಮತದಾನ ಮಾಡಲು ಅವಕಾಶ ಇರುತ್ತದೆ. ಆದರೆ ಹಲವಾರು ಮಂದಿಗೆ ಇಡಿಸಿ ಕೊಡದೆ ಮತದಾನದಿಂದ ವಂಚಿತ ಆರೋಪ ಮಾಡಲಾಗಿದೆ.

ಅಗತ್ಯ ದಾಖಲೆಗಳೊಂದಿಗೆ 12A ಫಾರಂನಲ್ಲಿ ಅರ್ಜಿ ಸಲ್ಲಿಸಿದ್ದರೂ ಇಡಿಸಿ ನೀಡದೆ ವಂಚಿಸಲಾಗಿದೆ. ಗಣಕಯಂತ್ರದಲ್ಲಿ ಜನರೇಟ್ ಮಾಡಿದ್ದರೂ ಸಹಿ ಹಾಕಿ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗೆ ವಿತರಣೆ ಮಾಡಿಲ್ಲ ಎಂದು ಮತದಾನದಿಂದ ವಂಚಿತರಾದ ಸಿಬ್ಬಂದಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬೇಸರ ಮುಖದಲ್ಲಿ ತೋರ್ಪಡಿಸಿಕೊಳ್ಳದಿದ್ದರೂ ಒಲ್ಲದ ಮನಸ್ಸಿನಿಂದ ಸಾಯಂಕಾಲ ವೋಟು ಮಾಡಲು ಬಂದ ಅನಂತಕುಮಾರ್ ಹೆಗಡೆ

ನಿರ್ದಿಷ್ಟ ವ್ಯಕ್ತಿಗೆ ಅಥವಾ ನಿರ್ದಿಷ್ಟ ಪಕ್ಷಕ್ಕೆ ಮತ ಹಾಕುತ್ತಾರೆಂದು ಅಂತಹವರಿಗೆ ಇಡಿಸಿ ನೀಡಿಲ್ಲ ಎಂಬ ಗಂಭೀರ ಆರೋಪ ಮಾಡಿದ್ದು ಮತದಾನದಿಂದ ವಂಚಿಸುವ ದುರುದ್ದೇಶದಿಂದಲೇ ಇಡಿಸಿ ನೀಡಲಿಲ್ಲ ಎನ್ನಲಾಗುತ್ತಿದೆ.

ಇಡಿಸಿ ಸಿಗದೆ ಮತದಾನದಿಂದ ವಂಚಿತರಾದವರು ದೂರು ನೀಡಿದರೆ ಸಂಬಂಧಿಸಿದವರ ವಿರುದ್ದ ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಹೇಳಿದ್ದಾರೆ. ಆದರೆ 12A ನಲ್ಲಿ ಅರ್ಜಿ ಸಲ್ಲಿಸದವರೆಲ್ಲರಿಗೂ ಇಡಿಸಿ ನೀಡಲಾಗಿದೆ ಎಂದು ಜಿಲ್ಲಾಡಳಿತ ಸಮರ್ಥನೆ ನೀಡಿದೆ. ಹಾಗಾದರೆ ಯಾರದ್ದು ಸರಿ? ಯಾರದ್ದು ತಪ್ಪು ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ